<p><strong>ನವದೆಹಲಿ:</strong> ಯಮುನಾ ನದಿ ದಂಡೆಯಲ್ಲಿರುವ ‘ರಾಷ್ಟ್ರೀಯ ಸ್ಮೃತಿ ಸ್ಥಳ’ದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಸಮಾಧಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸ್ಥಳ ಗುರುತಿಸಿದೆ ಎಂದು ಮೂಲಗಳು ತಿಳಿಸಿವೆ.</p>.ಮನಮೋಹನ ಸಿಂಗ್ ರೂಪಿಸಿದ ಆರ್ಥಿಕ ನೀತಿಗಳು ದೇಶದ ಬೆಳವಣಿಗೆಗೆ ಆಧಾರ: ಸ್ಟಾಲಿನ್.<p>ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸಮಾಧಿಗೆ ನೀಡಿದ ಜಾಗದ ಸಮೀಪವೇ ಸಿಂಗ್ ಅವರ ಸಮಾಧಿಗೂ ಕೇಂದ್ರ ಸರ್ಕಾರ ಸ್ಥಳ ಗುರುತು ಮಾಡಿದೆ.</p><p>ಕೇಂದ್ರ ಸರ್ಕಾರ ಗುರುತು ಮಾಡಿದ ಜಾಗಕ್ಕೆ ಸಿಂಗ್ ಕುಟುಂಬಸ್ಥರಿಂದ ಒಪ್ಪಿಗೆ ಸಿಗಬೇಕಷ್ಟೆ.</p><p>ನಿಯಮಗಳ ಪ್ರಕಾರ, ಸಿಂಗ್ ಕುಟುಂಬಸ್ಥರು ಟ್ರಸ್ಟ್ ಒಂದನ್ನು ರಚಿಸಬೇಕು. ಬಳಿಕ ಸಮಾಧಿ ನಿರ್ಮಾಣಕ್ಕೆ ಆ ಟ್ರಸ್ಟ್ಗೆ ಭೂಮಿ ಹಸ್ತಾಂತರಿಸಲಾಗುತ್ತದೆ.</p>.ಮನಮೋಹನ ಸಿಂಗ್ ಸ್ಮಾರಕಕ್ಕಾಗಿ ಭೂಮಿ ಗುರುತಿಸುವ ಪ್ರಕ್ರಿಯೆ ಆರಂಭಿಸಿದ ಕೇಂದ್ರ.<p>ವಸತಿ ಹಾಗೂ ನಗರ ವ್ಯವಹಾರಗಳ ಕಾರ್ಯದರ್ಶಿ ಕೆ. ಶ್ರೀನಿವಾಸನ್ ಇತ್ತೀಚೆಗೆ ಸಿಂಗ್ ಕುಟುಂಬಸ್ಥರನ್ನು ಭೇಟಿ ಮಾಡಿ, ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ 1.5 ಎಕರೆ ಸ್ಥಳ ಗುರುತಿಸಿರುವುದರ ಬಗ್ಗೆ ಮಾಹಿತಿ ನೀಡಿದ್ದರು.</p> .ಎಸ್.ಎಂ. ಕೃಷ್ಣ, ರತನ್ ಟಾಟಾ, ಮನಮೋಹನ ಸಿಂಗ್.. ಈ ವರ್ಷ ನಿಧನರಾದ ಗಣ್ಯರಿವರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಯಮುನಾ ನದಿ ದಂಡೆಯಲ್ಲಿರುವ ‘ರಾಷ್ಟ್ರೀಯ ಸ್ಮೃತಿ ಸ್ಥಳ’ದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಸಮಾಧಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸ್ಥಳ ಗುರುತಿಸಿದೆ ಎಂದು ಮೂಲಗಳು ತಿಳಿಸಿವೆ.</p>.ಮನಮೋಹನ ಸಿಂಗ್ ರೂಪಿಸಿದ ಆರ್ಥಿಕ ನೀತಿಗಳು ದೇಶದ ಬೆಳವಣಿಗೆಗೆ ಆಧಾರ: ಸ್ಟಾಲಿನ್.<p>ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸಮಾಧಿಗೆ ನೀಡಿದ ಜಾಗದ ಸಮೀಪವೇ ಸಿಂಗ್ ಅವರ ಸಮಾಧಿಗೂ ಕೇಂದ್ರ ಸರ್ಕಾರ ಸ್ಥಳ ಗುರುತು ಮಾಡಿದೆ.</p><p>ಕೇಂದ್ರ ಸರ್ಕಾರ ಗುರುತು ಮಾಡಿದ ಜಾಗಕ್ಕೆ ಸಿಂಗ್ ಕುಟುಂಬಸ್ಥರಿಂದ ಒಪ್ಪಿಗೆ ಸಿಗಬೇಕಷ್ಟೆ.</p><p>ನಿಯಮಗಳ ಪ್ರಕಾರ, ಸಿಂಗ್ ಕುಟುಂಬಸ್ಥರು ಟ್ರಸ್ಟ್ ಒಂದನ್ನು ರಚಿಸಬೇಕು. ಬಳಿಕ ಸಮಾಧಿ ನಿರ್ಮಾಣಕ್ಕೆ ಆ ಟ್ರಸ್ಟ್ಗೆ ಭೂಮಿ ಹಸ್ತಾಂತರಿಸಲಾಗುತ್ತದೆ.</p>.ಮನಮೋಹನ ಸಿಂಗ್ ಸ್ಮಾರಕಕ್ಕಾಗಿ ಭೂಮಿ ಗುರುತಿಸುವ ಪ್ರಕ್ರಿಯೆ ಆರಂಭಿಸಿದ ಕೇಂದ್ರ.<p>ವಸತಿ ಹಾಗೂ ನಗರ ವ್ಯವಹಾರಗಳ ಕಾರ್ಯದರ್ಶಿ ಕೆ. ಶ್ರೀನಿವಾಸನ್ ಇತ್ತೀಚೆಗೆ ಸಿಂಗ್ ಕುಟುಂಬಸ್ಥರನ್ನು ಭೇಟಿ ಮಾಡಿ, ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ 1.5 ಎಕರೆ ಸ್ಥಳ ಗುರುತಿಸಿರುವುದರ ಬಗ್ಗೆ ಮಾಹಿತಿ ನೀಡಿದ್ದರು.</p> .ಎಸ್.ಎಂ. ಕೃಷ್ಣ, ರತನ್ ಟಾಟಾ, ಮನಮೋಹನ ಸಿಂಗ್.. ಈ ವರ್ಷ ನಿಧನರಾದ ಗಣ್ಯರಿವರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>