<p><strong>ನವದೆಹಲಿ:</strong> ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸುವುದನ್ನು ತಡೆಹಿಡಿದಿರುವ ನಿರ್ಧಾರವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಟೀಕಿಸಿದ್ದಾರೆ.</p>.<p>ಈ ಹಂತದಲ್ಲಿ ತಡೆ ನೀಡುವುದು ಅಗತ್ಯವಿರಲಿಲ್ಲ. ನೌಕರರು ಮತ್ತು ರಕ್ಷಣಾ ಸಿಬ್ಬಂದಿಯನ್ನು ಸಂಕಷ್ಟಕ್ಕೆ ದೂಡುವುದು ಸರಿ ಅಲ್ಲ ಎಂದು ಶನಿವಾರ ನಡೆದ ಕಾಂಗ್ರೆಸ್ನ ಸಮಾಲೋಚನೆ ಸಭೆಯಲ್ಲಿ ತಿಳಿಸಿದ್ದಾರೆ.</p>.<p>ಕೋವಿಡ್–19 ಸಂಕಷ್ಟದ ಹಿನ್ನೆಲೆಯಲ್ಲಿ 2021ರ ಜೂನ್ವರೆಗೆ 50 ಲಕ್ಷ ನೌಕರರು ಮತ್ತು 61 ಲಕ್ಷ ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಹೆಚ್ಚಿಸದಿರಲು ಕೇಂದ್ರ ಸರ್ಕಾರ ಇತ್ತೀಚೆಗೆ ನಿರ್ಧರಿಸಿತ್ತು.</p>.<p>‘ಮಧ್ಯಮ ವರ್ಗದ ಜನತೆಯಿಂದ ಸರ್ಕಾರ ಹಣವನ್ನು ಕಸಿದುಕೊಳ್ಳುತ್ತಿದೆ. ಬಡವರಿಗೂ ನೀಡುತ್ತಿಲ್ಲ. ಈ ಹಣವನ್ನು ಬೃಹತ್ ಯೋಜನೆಗಳ ಮೇಲೆ ಸುರಿಯುತ್ತಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>‘ಬುಲೆಟ್ ರೈಲ್ವೆಯಂತಹ ಬೃಹತ್ ಯೋಜನೆಗಳ ಮೇಲೆ ವೆಚ್ಚ ಮಾಡುವುದನ್ನು ಮೊದಲು ನಿಲ್ಲಿಸಿ. ನಂತರ, ತುಟ್ಟಿ ಭತ್ಯೆಗೆ ತಡೆ ನೀಡುವ ಬಗ್ಗೆ ಯೋಚಿಸಿ’ ಎಂದು ಚಿದಂಬರಂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸುವುದನ್ನು ತಡೆಹಿಡಿದಿರುವ ನಿರ್ಧಾರವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಟೀಕಿಸಿದ್ದಾರೆ.</p>.<p>ಈ ಹಂತದಲ್ಲಿ ತಡೆ ನೀಡುವುದು ಅಗತ್ಯವಿರಲಿಲ್ಲ. ನೌಕರರು ಮತ್ತು ರಕ್ಷಣಾ ಸಿಬ್ಬಂದಿಯನ್ನು ಸಂಕಷ್ಟಕ್ಕೆ ದೂಡುವುದು ಸರಿ ಅಲ್ಲ ಎಂದು ಶನಿವಾರ ನಡೆದ ಕಾಂಗ್ರೆಸ್ನ ಸಮಾಲೋಚನೆ ಸಭೆಯಲ್ಲಿ ತಿಳಿಸಿದ್ದಾರೆ.</p>.<p>ಕೋವಿಡ್–19 ಸಂಕಷ್ಟದ ಹಿನ್ನೆಲೆಯಲ್ಲಿ 2021ರ ಜೂನ್ವರೆಗೆ 50 ಲಕ್ಷ ನೌಕರರು ಮತ್ತು 61 ಲಕ್ಷ ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಹೆಚ್ಚಿಸದಿರಲು ಕೇಂದ್ರ ಸರ್ಕಾರ ಇತ್ತೀಚೆಗೆ ನಿರ್ಧರಿಸಿತ್ತು.</p>.<p>‘ಮಧ್ಯಮ ವರ್ಗದ ಜನತೆಯಿಂದ ಸರ್ಕಾರ ಹಣವನ್ನು ಕಸಿದುಕೊಳ್ಳುತ್ತಿದೆ. ಬಡವರಿಗೂ ನೀಡುತ್ತಿಲ್ಲ. ಈ ಹಣವನ್ನು ಬೃಹತ್ ಯೋಜನೆಗಳ ಮೇಲೆ ಸುರಿಯುತ್ತಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>‘ಬುಲೆಟ್ ರೈಲ್ವೆಯಂತಹ ಬೃಹತ್ ಯೋಜನೆಗಳ ಮೇಲೆ ವೆಚ್ಚ ಮಾಡುವುದನ್ನು ಮೊದಲು ನಿಲ್ಲಿಸಿ. ನಂತರ, ತುಟ್ಟಿ ಭತ್ಯೆಗೆ ತಡೆ ನೀಡುವ ಬಗ್ಗೆ ಯೋಚಿಸಿ’ ಎಂದು ಚಿದಂಬರಂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>