<p><strong>ಮುಂಬೈ</strong>: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಸಂತಾಪ ಸೂಚಿಸಿದ್ದಾರೆ. ದೇಶ ಮತ್ತು ಸಮಾಜದ ಅಭಿವೃದ್ದಿಗಾಗಿ ಶ್ರಮಿಸಿದ ಸಿಂಗ್, ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿದ್ದರು ಎಂದು ಸ್ಮರಿಸಿದರು.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಟ್ಟುವವರು ಸಾಯಲೇಬೇಕು. ಆದರೆ ಸಿಂಗ್ ಮಾಡಿದ ಕೆಲಸಗಳು ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳು ಅಪಾರ. ಅವರ ಪರಂಪರೆಯು ಸದಾ ನೆನಪಿಸಿಕೊಳ್ಳುವಂತಹದ್ದು. ಅವರು ದೇಶದ ಆರ್ಥಿಕತೆಗೆ ಹೊಸ ದಿಕ್ಕನ್ನು ನೀಡಿದರು ಎಂದು ಹೇಳಿದ್ದಾರೆ.</p>.ಕ್ಲಬ್ ಸದಸ್ಯತ್ವ ನೀಡಿ ಸಚಿನ್ ತೆಂಡೂಲ್ಕರ್ ಅವರನ್ನು ಗೌರವಿಸಿದ ಎಂಸಿಸಿ.‘ಕ್ರಿಕೆಟ್ ರಾಜತಾಂತ್ರಿಕತೆ’ಯಿಂದ ಪಾಕ್ ಜೊತೆ ಸಂಬಂಧ ಮರುಸ್ಥಾಪಿಸಿದ್ದ ಸಿಂಗ್!.<p>2010ರ ದಶಕದಲ್ಲಿ ಸಿಂಗ್ ಅವರ ಅಧಿಕಾರಾವಧಿಯಲ್ಲಿ ನಾನು (ಹಜಾರೆ) ಅವರನ್ನು ಭೇಟಿ ಮಾಡಿದ್ದೆ. ಭ್ರಷ್ಟಾಚಾರ ವಿರುದ್ಧದ ಆಂದೋಲನದ ಸಮಯದಲ್ಲಿ ನನ್ನ ಜತೆ ಚರ್ಚಿಸಿದರು. ಭ್ರಷ್ಟಾಚಾರ ವಿರುದ್ಧದ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದಂತೆ ಕೆಲವು ನಿರ್ಧಾರಗಳನ್ನು ತ್ವರಿತವಾಗಿ ತೆಗೆದುಕೊಂಡರು ಎಂದು ಹಜಾರೆ ತಿಳಿಸಿದ್ದಾರೆ.</p><p>2004 ರಿಂದ 2014ರವರೆಗೆ ಪ್ರಧಾನಿಯಾಗಿದ್ದ ಸಿಂಗ್ ಅವರು ದೇಶದ ಆರ್ಥಿಕತೆಗೆ ಹೊಸ ದಿಕ್ಕನ್ನು ನೀಡಿದರು. ಸಿಂಗ್ ಅವರು ಇಂದು ನಮ್ಮೊಂದಿಗೆ ಭೌತಿಕವಾಗಿ ಇಲ್ಲ. ಆದರೆ ಅವರ ನೆನಪುಗಳು ಸದಾ ನಮ್ಮೊಂದಿಗೆ ಇರುತ್ತದೆ ಎಂದು ಹಜಾರೆ ಸ್ಮರಿಸಿದ್ದಾರೆ.</p><p>ಕೆಲ ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಗುರುವಾರ ನಿಧನರಾದರು.</p>.Manmohan Singh | ಪಾಕಿಸ್ತಾನದ ಶಾಲೆಯೊಂದಕ್ಕೆ ಮನಮೋಹನ ಸಿಂಗ್ ಹೆಸರು!.ಮನಮೋಹನ ಸಿಂಗ್ ಅಗಲಿಕೆ ಜಗತ್ತಿಗೇ ಹಾನಿ: ಮುಖ್ಯಮಂತ್ರಿ ಸಿದ್ದರಾಮಯ್ಯ.ಮನಮೋಹನ ಸಿಂಗ್ ದೇಶಕ್ಕೆ ನೀಡಿದ ಕೊಡುಗೆಗಳು ಸದಾ ಸ್ಮರಣೀಯ: ಆರ್ಎಸ್ಎಸ್.Photos | ಮನಮೋಹನ ಸಿಂಗ್ ನಿಧನ: ಪ್ರಧಾನಿ ಮೋದಿ ಸೇರಿ ಪ್ರಮುಖರಿಂದ ಅಂತಿಮ ನಮನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಸಂತಾಪ ಸೂಚಿಸಿದ್ದಾರೆ. ದೇಶ ಮತ್ತು ಸಮಾಜದ ಅಭಿವೃದ್ದಿಗಾಗಿ ಶ್ರಮಿಸಿದ ಸಿಂಗ್, ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿದ್ದರು ಎಂದು ಸ್ಮರಿಸಿದರು.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಟ್ಟುವವರು ಸಾಯಲೇಬೇಕು. ಆದರೆ ಸಿಂಗ್ ಮಾಡಿದ ಕೆಲಸಗಳು ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳು ಅಪಾರ. ಅವರ ಪರಂಪರೆಯು ಸದಾ ನೆನಪಿಸಿಕೊಳ್ಳುವಂತಹದ್ದು. ಅವರು ದೇಶದ ಆರ್ಥಿಕತೆಗೆ ಹೊಸ ದಿಕ್ಕನ್ನು ನೀಡಿದರು ಎಂದು ಹೇಳಿದ್ದಾರೆ.</p>.ಕ್ಲಬ್ ಸದಸ್ಯತ್ವ ನೀಡಿ ಸಚಿನ್ ತೆಂಡೂಲ್ಕರ್ ಅವರನ್ನು ಗೌರವಿಸಿದ ಎಂಸಿಸಿ.‘ಕ್ರಿಕೆಟ್ ರಾಜತಾಂತ್ರಿಕತೆ’ಯಿಂದ ಪಾಕ್ ಜೊತೆ ಸಂಬಂಧ ಮರುಸ್ಥಾಪಿಸಿದ್ದ ಸಿಂಗ್!.<p>2010ರ ದಶಕದಲ್ಲಿ ಸಿಂಗ್ ಅವರ ಅಧಿಕಾರಾವಧಿಯಲ್ಲಿ ನಾನು (ಹಜಾರೆ) ಅವರನ್ನು ಭೇಟಿ ಮಾಡಿದ್ದೆ. ಭ್ರಷ್ಟಾಚಾರ ವಿರುದ್ಧದ ಆಂದೋಲನದ ಸಮಯದಲ್ಲಿ ನನ್ನ ಜತೆ ಚರ್ಚಿಸಿದರು. ಭ್ರಷ್ಟಾಚಾರ ವಿರುದ್ಧದ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದಂತೆ ಕೆಲವು ನಿರ್ಧಾರಗಳನ್ನು ತ್ವರಿತವಾಗಿ ತೆಗೆದುಕೊಂಡರು ಎಂದು ಹಜಾರೆ ತಿಳಿಸಿದ್ದಾರೆ.</p><p>2004 ರಿಂದ 2014ರವರೆಗೆ ಪ್ರಧಾನಿಯಾಗಿದ್ದ ಸಿಂಗ್ ಅವರು ದೇಶದ ಆರ್ಥಿಕತೆಗೆ ಹೊಸ ದಿಕ್ಕನ್ನು ನೀಡಿದರು. ಸಿಂಗ್ ಅವರು ಇಂದು ನಮ್ಮೊಂದಿಗೆ ಭೌತಿಕವಾಗಿ ಇಲ್ಲ. ಆದರೆ ಅವರ ನೆನಪುಗಳು ಸದಾ ನಮ್ಮೊಂದಿಗೆ ಇರುತ್ತದೆ ಎಂದು ಹಜಾರೆ ಸ್ಮರಿಸಿದ್ದಾರೆ.</p><p>ಕೆಲ ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಗುರುವಾರ ನಿಧನರಾದರು.</p>.Manmohan Singh | ಪಾಕಿಸ್ತಾನದ ಶಾಲೆಯೊಂದಕ್ಕೆ ಮನಮೋಹನ ಸಿಂಗ್ ಹೆಸರು!.ಮನಮೋಹನ ಸಿಂಗ್ ಅಗಲಿಕೆ ಜಗತ್ತಿಗೇ ಹಾನಿ: ಮುಖ್ಯಮಂತ್ರಿ ಸಿದ್ದರಾಮಯ್ಯ.ಮನಮೋಹನ ಸಿಂಗ್ ದೇಶಕ್ಕೆ ನೀಡಿದ ಕೊಡುಗೆಗಳು ಸದಾ ಸ್ಮರಣೀಯ: ಆರ್ಎಸ್ಎಸ್.Photos | ಮನಮೋಹನ ಸಿಂಗ್ ನಿಧನ: ಪ್ರಧಾನಿ ಮೋದಿ ಸೇರಿ ಪ್ರಮುಖರಿಂದ ಅಂತಿಮ ನಮನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>