<p><strong>ನವದೆಹಲಿ:</strong> ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಿರುವ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ, 'ನನ್ನ ಪಾಲಿಗಿದು ವೈಯಕ್ತಿಕ ನಷ್ಟ' ಎಂದು ಹೇಳಿದ್ದಾರೆ. </p><p>ಮನಮೋಹನ ಅವರ ತಿಳಿವಳಿಕೆ, ಉದಾತ್ತಗುಣ, ವಿನಯವಂತಿಕೆ ಗುಣಗಳನ್ನು ಒತ್ತಿ ಹೇಳಿರುವ ಸೋನಿಯಾ, ಮಾಜಿ ಪ್ರಧಾನಿಯ ಅಗಲಿಕೆಯು ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.</p><p>'ಮನಮೋಹನ ಸಿಂಗ್ ಅವರು ನನ್ನ ಸೇಹಿತ, ತತ್ವಜ್ಞಾನಿ ಮತ್ತು ಮಾರ್ಗದರ್ಶಕರಾಗಿದ್ದರು. ಅವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟವಾಗಿದೆ' ಎಂದು ಹೇಳಿದ್ದಾರೆ. </p><p>'ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಮನಮೋಹನ ಸಿಂಗ್ ಸಲ್ಲಿಸಿರುವ ಅಪಾರವಾದ ಕೊಡುಗೆಯನ್ನು ಅಳೆಯಲಾಗದು. ಅವರಂತಹ ನಾಯಕರನ್ನು ಹೊಂದಿದ್ದಕ್ಕಾಗಿ ಇಡೀ ದೇಶ ಮತ್ತು ನಮ್ಮ ಪಕ್ಷ ಹೆಮ್ಮೆಪಟ್ಟುಕೊಳ್ಳುತ್ತಿದ್ದು, ಕೃತಜ್ಞರಾಗಿದ್ದೇವೆ' ಎಂದು ಅವರು ತಿಳಿಸಿದ್ದಾರೆ. </p><p>'ದೇಶಕ್ಕಾಗಿ ಹೃದಯವಂತಿಕೆ ಮತ್ತು ಮನಸ್ಸಿನಿಂದ ಮನಮೋಹನ ಸಿಂಗ್ ಸೇವೆ ಸಲ್ಲಿಸಿದ್ದರು. ದೇಶದ ಪ್ರತಿಯೊಬ್ಬರ ಹೃದಯದಲ್ಲಿ ಮನಮೋಹನ ಅವರ ಮೇಲಿನ ಪ್ರೀತಿ ಅಡಗಿದೆ' ಎಂದು ಅವರು ಉಲ್ಲೇಖಿಸಿದ್ದಾರೆ. </p><p>'ನನ್ನ ಪಾಲಿಗೆ ಮನಮೋಹನ ಅವರ ನಿಧನವು ವೈಯಕ್ತಿಕ ನಷ್ಟವಾಗಿದೆ. ಅವರು ನನ್ನ ಸ್ನೇಹಿತ, ತತ್ವಜ್ಞಾನಿ ಮತ್ತು ಮಾರ್ಗದರ್ಶಕರಾಗಿದ್ದರು. ಸದಾ ಸೌಮ್ಯರಾಗಿರುತ್ತಿದ್ದರು ಮತ್ತು ದೃಢನಿಶ್ಚಯವನ್ನು ಹೊಂದಿರುತ್ತಿದ್ದರು' ಎಂದು ಹೇಳಿದ್ದಾರೆ. </p><p>'ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅವರ ಬದ್ಧತೆಯು ಅಚಲವಾಗಿತ್ತು' ಎಂದು ಅವರು ಬಣ್ಣಿಸಿದ್ದಾರೆ. </p>.PHOTOS | ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಪರೂಪದ ಚಿತ್ರಗಳು.Manmohan Singh | ಪಾಕಿಸ್ತಾನದ ಶಾಲೆಯೊಂದಕ್ಕೆ ಮನಮೋಹನ ಸಿಂಗ್ ಹೆಸರು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಿರುವ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ, 'ನನ್ನ ಪಾಲಿಗಿದು ವೈಯಕ್ತಿಕ ನಷ್ಟ' ಎಂದು ಹೇಳಿದ್ದಾರೆ. </p><p>ಮನಮೋಹನ ಅವರ ತಿಳಿವಳಿಕೆ, ಉದಾತ್ತಗುಣ, ವಿನಯವಂತಿಕೆ ಗುಣಗಳನ್ನು ಒತ್ತಿ ಹೇಳಿರುವ ಸೋನಿಯಾ, ಮಾಜಿ ಪ್ರಧಾನಿಯ ಅಗಲಿಕೆಯು ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.</p><p>'ಮನಮೋಹನ ಸಿಂಗ್ ಅವರು ನನ್ನ ಸೇಹಿತ, ತತ್ವಜ್ಞಾನಿ ಮತ್ತು ಮಾರ್ಗದರ್ಶಕರಾಗಿದ್ದರು. ಅವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟವಾಗಿದೆ' ಎಂದು ಹೇಳಿದ್ದಾರೆ. </p><p>'ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಮನಮೋಹನ ಸಿಂಗ್ ಸಲ್ಲಿಸಿರುವ ಅಪಾರವಾದ ಕೊಡುಗೆಯನ್ನು ಅಳೆಯಲಾಗದು. ಅವರಂತಹ ನಾಯಕರನ್ನು ಹೊಂದಿದ್ದಕ್ಕಾಗಿ ಇಡೀ ದೇಶ ಮತ್ತು ನಮ್ಮ ಪಕ್ಷ ಹೆಮ್ಮೆಪಟ್ಟುಕೊಳ್ಳುತ್ತಿದ್ದು, ಕೃತಜ್ಞರಾಗಿದ್ದೇವೆ' ಎಂದು ಅವರು ತಿಳಿಸಿದ್ದಾರೆ. </p><p>'ದೇಶಕ್ಕಾಗಿ ಹೃದಯವಂತಿಕೆ ಮತ್ತು ಮನಸ್ಸಿನಿಂದ ಮನಮೋಹನ ಸಿಂಗ್ ಸೇವೆ ಸಲ್ಲಿಸಿದ್ದರು. ದೇಶದ ಪ್ರತಿಯೊಬ್ಬರ ಹೃದಯದಲ್ಲಿ ಮನಮೋಹನ ಅವರ ಮೇಲಿನ ಪ್ರೀತಿ ಅಡಗಿದೆ' ಎಂದು ಅವರು ಉಲ್ಲೇಖಿಸಿದ್ದಾರೆ. </p><p>'ನನ್ನ ಪಾಲಿಗೆ ಮನಮೋಹನ ಅವರ ನಿಧನವು ವೈಯಕ್ತಿಕ ನಷ್ಟವಾಗಿದೆ. ಅವರು ನನ್ನ ಸ್ನೇಹಿತ, ತತ್ವಜ್ಞಾನಿ ಮತ್ತು ಮಾರ್ಗದರ್ಶಕರಾಗಿದ್ದರು. ಸದಾ ಸೌಮ್ಯರಾಗಿರುತ್ತಿದ್ದರು ಮತ್ತು ದೃಢನಿಶ್ಚಯವನ್ನು ಹೊಂದಿರುತ್ತಿದ್ದರು' ಎಂದು ಹೇಳಿದ್ದಾರೆ. </p><p>'ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅವರ ಬದ್ಧತೆಯು ಅಚಲವಾಗಿತ್ತು' ಎಂದು ಅವರು ಬಣ್ಣಿಸಿದ್ದಾರೆ. </p>.PHOTOS | ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಪರೂಪದ ಚಿತ್ರಗಳು.Manmohan Singh | ಪಾಕಿಸ್ತಾನದ ಶಾಲೆಯೊಂದಕ್ಕೆ ಮನಮೋಹನ ಸಿಂಗ್ ಹೆಸರು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>