<p><strong>ನವದೆಹಲಿ:</strong> ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಜನರ ಸೇವೆ ಮತ್ತು ರಾಷ್ಟ್ರದ ಅಭಿವೃದ್ಧಿ ವಿಚಾರದಲ್ಲಿ ಸಿಂಗ್ ಅವರು ಹೊಂದಿದ್ದ ಬದ್ಧತೆಯನ್ನು ಸದಾ ಗೌರವಿಸಲಾಗುವುದು ಎಂದು ಹೇಳಿದ್ದಾರೆ.</p><p>ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.</p><p>ಸಂತಾಪ ಸೂಚಿಸಿ ವಿಡಿಯೊ ಸಂದೇಶ ಹಂಚಿಕೊಂಡಿರುವ ಮೋದಿ, ಸಿಂಗ್ ಅವರ ಜೀವನದ ಕುರಿತು ಮಾತನಾಡಿದ್ದಾರೆ. 'ದೇಶ ವಿಭಜನೆ ಬಳಿಕ ಸಿಂಗ್ ಕುಟುಂಬವು ಭಾರತಕ್ಕೆ ವಲಸೆ ಬಂದು ನೆಲೆ ಕಂಡುಕೊಂಡಿತು. ನಂತರ ಸಿಂಗ್ ಮಾಡಿದ ಸಾಧನೆಗಳು ಸಾಧಾರಣವಾದವುಗಳಲ್ಲ' ಎಂದು ಅಭಿಪ್ರಾಯಪಟ್ಟಿದ್ದಾರೆ. </p><p>'ಸಂಕಷ್ಟಗಳು ಮತ್ತು ಎಲ್ಲ ಅಡತಡೆಗಳನ್ನು ಮೀರಿ ಸಾಧನೆಯ ಶಿಖರ ಏರುವುದು ಹೇಗೆ ಎಂಬುದಕ್ಕೆ ಸಿಂಗ್ ಅವರ ಜೀವನವು ಮುಂದಿನ ತಲೆಮಾರುಗಳಿಗೆ ಪಾಠವಾಗಲಿದೆ' ಎಂದು ಪ್ರತಿಪಾದಿಸಿರುವ ಮೋದಿ, 'ಸಿಂಗ್ ಅವರು ಸಜ್ಜನ, ಜ್ಞಾನಿ, ಅರ್ಥಶಾಸ್ತ್ರಜ್ಞ ಹಾಗೂ ಸುಧಾರಣವಾದಿ ನಾಯಕರಾಗಿ ಸ್ಮರಣೆಯಲ್ಲಿರಲಿದ್ದಾರೆ' ಎಂದಿದ್ದಾರೆ.</p><p>ಪ್ರಧಾನಿಯಾಗುವುದಕ್ಕೂ ಮುನ್ನ, ಕೇಂದ್ರದಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದ ಸಿಂಗ್, ಸವಾಲಿನ ಸಂದರ್ಭದಲ್ಲಿ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಪಿ.ವಿ. ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ದೇಶದ ಆರ್ಥಿಕತೆಗೆ ಹೊಸ ದಿಕ್ಕು ತೋರಿದ್ದರು ಎಂಬುದನ್ನು ಮೋದಿ ಉಲ್ಲೇಖಿಸಿದ್ದಾರೆ.</p><p>'ಪ್ರಧಾನಿಯಾಗಿ, ದೇಶದ ಅಭಿವೃದ್ಧಿ ಮತ್ತು ಪ್ರಗತಿಗೆ ಸಿಂಗ್ ನೀಡಿದ ಕೊಡುಗೆ ಸದಾ ಸ್ಮರಣೀಯ' ಎಂದಿದ್ದಾರೆ. ಹಾಗೆಯೇ, 'ಸಿಂಗ್ ಅವರ ಬದುಕು ಅವರ ಪ್ರಾಮಾಣಿಕತೆ ಮತ್ತು ಸರಳತೆಯನ್ನು ಪ್ರತಿಫಲಿಸುತ್ತದೆ' ಎಂದು ಶ್ಲಾಘಿಸಿದ್ದಾರೆ.</p>.Manmohan Singh: ಅರ್ಥಮಾಂತ್ರಿಕ ಅಸ್ತಂಗತ.ತಂದೆಯ ಆಸೆಯಂತೆ ವೈದ್ಯನಾಗಲು ಪ್ರಿ-ಮೆಡಿಕಲ್ ಕೋರ್ಸ್ಗೆ ಸೇರಿದ್ದ ಮನಮೋಹನ್ ಸಿಂಗ್!.<p>'ಸಿಂಗ್ ಅವರು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿ, ಉನ್ನತ ಸ್ಥಾನಗಳಿಗೆ ಏರಿದ್ದರೂ ತಮ್ಮ ಸಾಧಾರಣ ಹಿನ್ನೆಲೆಯ ಮೌಲ್ಯಗಳನ್ನು ಎಂದೂ ಮರೆತಿರಲಿಲ್ಲ' ಎಂದು ಹೇಳಿದ್ದಾರೆ.</p><p>'ಮಾನವೀಯತೆ, ಸೌಮ್ಯ ಸ್ವಭಾವ ಹಾಗೂ ಪ್ರಬುದ್ಧತೆಯ ಕಾರಣದಿಂದಾಗಿ ಸಿಂಗ್ ಅವರು ಉತ್ತಮ ಸಂಸದೀಯಪಟುವಾಗಿದ್ದರು. ಗಾಲಿ ಕುರ್ಚಿಯಲ್ಲಿಯೇ ಸಂಸತ್ತಿಗೆ ಬರುವ ಮೂಲಕ ಸಂಸದರಾಗಿ ಕರ್ತವ್ಯ ನಿರ್ವಹಿಸುವ ಬದ್ಧತೆಯನ್ನು ತೋರಿದ್ದರು' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p><p>ಸಿಂಗ್ ಅವರು 2004–2014ರ ಅವಧಿಯಲ್ಲಿ ಪ್ರಧಾನಿಯಾಗಿದ್ದರು. ಆ ಅವಧಿಯಲ್ಲಿ ಮೋದಿ, ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆ ಸಂದರ್ಭದಲ್ಲಿ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪರಸ್ಪರ ಮಾತುಕತೆ ನಡೆಸಿದ್ದಾಗಿ ಮೋದಿ ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಜನರ ಸೇವೆ ಮತ್ತು ರಾಷ್ಟ್ರದ ಅಭಿವೃದ್ಧಿ ವಿಚಾರದಲ್ಲಿ ಸಿಂಗ್ ಅವರು ಹೊಂದಿದ್ದ ಬದ್ಧತೆಯನ್ನು ಸದಾ ಗೌರವಿಸಲಾಗುವುದು ಎಂದು ಹೇಳಿದ್ದಾರೆ.</p><p>ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.</p><p>ಸಂತಾಪ ಸೂಚಿಸಿ ವಿಡಿಯೊ ಸಂದೇಶ ಹಂಚಿಕೊಂಡಿರುವ ಮೋದಿ, ಸಿಂಗ್ ಅವರ ಜೀವನದ ಕುರಿತು ಮಾತನಾಡಿದ್ದಾರೆ. 'ದೇಶ ವಿಭಜನೆ ಬಳಿಕ ಸಿಂಗ್ ಕುಟುಂಬವು ಭಾರತಕ್ಕೆ ವಲಸೆ ಬಂದು ನೆಲೆ ಕಂಡುಕೊಂಡಿತು. ನಂತರ ಸಿಂಗ್ ಮಾಡಿದ ಸಾಧನೆಗಳು ಸಾಧಾರಣವಾದವುಗಳಲ್ಲ' ಎಂದು ಅಭಿಪ್ರಾಯಪಟ್ಟಿದ್ದಾರೆ. </p><p>'ಸಂಕಷ್ಟಗಳು ಮತ್ತು ಎಲ್ಲ ಅಡತಡೆಗಳನ್ನು ಮೀರಿ ಸಾಧನೆಯ ಶಿಖರ ಏರುವುದು ಹೇಗೆ ಎಂಬುದಕ್ಕೆ ಸಿಂಗ್ ಅವರ ಜೀವನವು ಮುಂದಿನ ತಲೆಮಾರುಗಳಿಗೆ ಪಾಠವಾಗಲಿದೆ' ಎಂದು ಪ್ರತಿಪಾದಿಸಿರುವ ಮೋದಿ, 'ಸಿಂಗ್ ಅವರು ಸಜ್ಜನ, ಜ್ಞಾನಿ, ಅರ್ಥಶಾಸ್ತ್ರಜ್ಞ ಹಾಗೂ ಸುಧಾರಣವಾದಿ ನಾಯಕರಾಗಿ ಸ್ಮರಣೆಯಲ್ಲಿರಲಿದ್ದಾರೆ' ಎಂದಿದ್ದಾರೆ.</p><p>ಪ್ರಧಾನಿಯಾಗುವುದಕ್ಕೂ ಮುನ್ನ, ಕೇಂದ್ರದಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದ ಸಿಂಗ್, ಸವಾಲಿನ ಸಂದರ್ಭದಲ್ಲಿ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಪಿ.ವಿ. ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ದೇಶದ ಆರ್ಥಿಕತೆಗೆ ಹೊಸ ದಿಕ್ಕು ತೋರಿದ್ದರು ಎಂಬುದನ್ನು ಮೋದಿ ಉಲ್ಲೇಖಿಸಿದ್ದಾರೆ.</p><p>'ಪ್ರಧಾನಿಯಾಗಿ, ದೇಶದ ಅಭಿವೃದ್ಧಿ ಮತ್ತು ಪ್ರಗತಿಗೆ ಸಿಂಗ್ ನೀಡಿದ ಕೊಡುಗೆ ಸದಾ ಸ್ಮರಣೀಯ' ಎಂದಿದ್ದಾರೆ. ಹಾಗೆಯೇ, 'ಸಿಂಗ್ ಅವರ ಬದುಕು ಅವರ ಪ್ರಾಮಾಣಿಕತೆ ಮತ್ತು ಸರಳತೆಯನ್ನು ಪ್ರತಿಫಲಿಸುತ್ತದೆ' ಎಂದು ಶ್ಲಾಘಿಸಿದ್ದಾರೆ.</p>.Manmohan Singh: ಅರ್ಥಮಾಂತ್ರಿಕ ಅಸ್ತಂಗತ.ತಂದೆಯ ಆಸೆಯಂತೆ ವೈದ್ಯನಾಗಲು ಪ್ರಿ-ಮೆಡಿಕಲ್ ಕೋರ್ಸ್ಗೆ ಸೇರಿದ್ದ ಮನಮೋಹನ್ ಸಿಂಗ್!.<p>'ಸಿಂಗ್ ಅವರು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿ, ಉನ್ನತ ಸ್ಥಾನಗಳಿಗೆ ಏರಿದ್ದರೂ ತಮ್ಮ ಸಾಧಾರಣ ಹಿನ್ನೆಲೆಯ ಮೌಲ್ಯಗಳನ್ನು ಎಂದೂ ಮರೆತಿರಲಿಲ್ಲ' ಎಂದು ಹೇಳಿದ್ದಾರೆ.</p><p>'ಮಾನವೀಯತೆ, ಸೌಮ್ಯ ಸ್ವಭಾವ ಹಾಗೂ ಪ್ರಬುದ್ಧತೆಯ ಕಾರಣದಿಂದಾಗಿ ಸಿಂಗ್ ಅವರು ಉತ್ತಮ ಸಂಸದೀಯಪಟುವಾಗಿದ್ದರು. ಗಾಲಿ ಕುರ್ಚಿಯಲ್ಲಿಯೇ ಸಂಸತ್ತಿಗೆ ಬರುವ ಮೂಲಕ ಸಂಸದರಾಗಿ ಕರ್ತವ್ಯ ನಿರ್ವಹಿಸುವ ಬದ್ಧತೆಯನ್ನು ತೋರಿದ್ದರು' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p><p>ಸಿಂಗ್ ಅವರು 2004–2014ರ ಅವಧಿಯಲ್ಲಿ ಪ್ರಧಾನಿಯಾಗಿದ್ದರು. ಆ ಅವಧಿಯಲ್ಲಿ ಮೋದಿ, ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆ ಸಂದರ್ಭದಲ್ಲಿ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪರಸ್ಪರ ಮಾತುಕತೆ ನಡೆಸಿದ್ದಾಗಿ ಮೋದಿ ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>