<p><strong>ನವದೆಹಲಿ</strong>: ಸಾಹಿತಿ ಎಸ್. ಎಲ್.ಭೈರಪ್ಪ, ಜನಪ್ರಿಯ ಗಾಯಕ ಜುಬಿನ್ ಗರ್ಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನದ ಮಾತು ಕಾರ್ಯಕ್ರಮದಲ್ಲಿ ಸಂತಾಪ ಸಲ್ಲಿಸಿದರು.</p><p>‘ದೇಶವು ವಿಚಾರವಾದಿ, ಚಿಂತಕ ಭೈರಪ್ಪ ಅವರನ್ನು ಕಳೆದುಕೊಂಡಿದೆ. ನಾನು ಅವರ ಜೊತೆ ವ್ಯಕ್ತಿಗತ ಸಂಪರ್ಕ ಇಟ್ಟುಕೊಂಡಿದ್ದೆ. ಹಲವು ಸಂದರ್ಭ ಗಳಲ್ಲಿ ಅವರ ಜೊತೆ ವಿಚಾರ ಮಂಥನ ನಡೆದಿತ್ತು. ಅವರ ಕೃತಿಗಳು ಯುವಪೀಳಿಗೆಗೆ ದಾರಿದೀಪವಾಗಿವೆ’ ಎಂದು ತಿಳಿಸಿದರು.</p><p>‘ಅಸ್ಸಾಂನ ಹೆಸರಾಂತ ಗಾಯಕರಾದ ಜುಬಿನ್ ಅವರ ಹಾಡುಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ತುಂಬಲಿವೆ’ ಎಂದರು.</p><p>ಕಾರ್ಯಕ್ರಮದ ಮಧ್ಯದಲ್ಲಿ ಭೂಪೇನ್ ಹಜಾರಿಕಾ ಅವರ ಖ್ಯಾತ ಹಾಡು ‘ಮನುಹೇ, ಮನುಹರ್ ಬೇಬೆ’ ತಮಿಳು ಹಾಗೂ ಸಿಂಹಳ ಆವೃತ್ತಿಯನ್ನು ನುಡಿಸಲಾಯಿತು.</p><p>‘ಸ್ನೇಹಿತರೇ, ಭೂಪೇನ್ ಅವರ ಹಾಡುಗಳು ಪ್ರಪಂಚದ ವಿವಿಧ ದೇಶಗಳನ್ನೂ ಹೇಗೆ ಸಂಪರ್ಕಿಸುತ್ತವೆ ಎಂಬುದಕ್ಕೆ ಈ ಧ್ವನಿಯೂ ಸಾಕ್ಷಿ ಯಾಗುತ್ತವೆ’ ಎಂದರು. </p><p>‘ನಾನು ಈ ಹಾಡುಗಳನ್ನು ಹಲವು ಬಾರಿ ಕೇಳಿದ್ದೇನೆ. ಅಸ್ಸಾಂನಲ್ಲಿ ಭೂಪೇನ್ ಅವರ ಶತಮಾನೋತ್ಸವ ಕಾರ್ಯಕ್ರಮ ದಲ್ಲಿಯೂ ಭಾಗಿಯಾಗಿದ್ದೆನು. ನಿಜಕ್ಕೂ ಅವಿಸ್ಮರಣೀಯ ಕಾರ್ಯಕ್ರಮ’ ಎಂದು ಮೆಲುಕು ಹಾಕಿದರು.</p><p>ಯುನೆಸ್ಕೊ ಪಟ್ಟಿಗೆ ‘ಛತ್ ಪೂಜೆ’ ಸೇರ್ಪಡೆಗೆ ಯತ್ನ</p><p>‘ಯುನೆಸ್ಕೊ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ‘ಛತ್ ಪೂಜೆ’ಯನ್ನು ಸೇರಿಸಲು ಸರ್ಕಾರವು ಪ್ರಯತ್ನ ನಡೆಸುತ್ತಿದೆ. ಇದು ಸಾಧ್ಯವಾದರೆ, ಜಗತ್ತಿನ ಮೂಲೆ ಮೂಲೆಯಲ್ಲಿರುವ ಜನರು ಹಬ್ಬದ ವೈಭವ ಹಾಗೂ ದೈವಿಕತೆಯನ್ನು ಅನುಭವಿಸಲು ಸಾಧ್ಯವಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.</p><p>ಭಾನುವಾರ ಪ್ರಸಾರಗೊಂಡ ಮಾಸಾಂತ್ಯದ ‘ಮನದ ಮಾತು’ ಕಾರ್ಯಕ್ರಮದ 126ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೋಲ್ಕತ್ತದ ದುರ್ಗಾ ಪೂಜೆಯನ್ನು ಕೂಡ ಇದೇ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಹೇಳಿದರು.</p><p>‘ನಮ್ಮ ಹಬ್ಬಗಳು ಹಾಗೂ ಆಚರಣೆಗಳು ದೇಶದ ಸಂಸ್ಕೃತಿಯನ್ನು ಜೀವಂತವಾಗಿರುಸುತ್ತವೆ. ಛತ್ ಪವಿತ್ರ ಹಬ್ಬವನ್ನು ದೀಪಾವಳಿ ನಂತರ ಆಚರಿಸಲಾಗುತ್ತದೆ. ಈ ದೊಡ್ಡ ಹಬ್ಬವನ್ನು ಸೂರ್ಯದೇವನಿಗೆ ಸಮರ್ಪಿಸಲಾಗುತ್ತದೆ. ಸೂರ್ಯನಿಗೆ ಅರ್ಘ್ಯ ನೀಡಿ, ನಂತರ ಪೂಜಿಸಲಾಗುತ್ತದೆ. ದೇಶದ ವಿವಿಧೆಡೆ ಮಾತ್ರವಲ್ಲದೆ ಜಗತ್ತಿನಾದ್ಯಂತ ಅದರ ವೈಭವವನ್ನು ಕಾಣಬಹುದಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಾಹಿತಿ ಎಸ್. ಎಲ್.ಭೈರಪ್ಪ, ಜನಪ್ರಿಯ ಗಾಯಕ ಜುಬಿನ್ ಗರ್ಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನದ ಮಾತು ಕಾರ್ಯಕ್ರಮದಲ್ಲಿ ಸಂತಾಪ ಸಲ್ಲಿಸಿದರು.</p><p>‘ದೇಶವು ವಿಚಾರವಾದಿ, ಚಿಂತಕ ಭೈರಪ್ಪ ಅವರನ್ನು ಕಳೆದುಕೊಂಡಿದೆ. ನಾನು ಅವರ ಜೊತೆ ವ್ಯಕ್ತಿಗತ ಸಂಪರ್ಕ ಇಟ್ಟುಕೊಂಡಿದ್ದೆ. ಹಲವು ಸಂದರ್ಭ ಗಳಲ್ಲಿ ಅವರ ಜೊತೆ ವಿಚಾರ ಮಂಥನ ನಡೆದಿತ್ತು. ಅವರ ಕೃತಿಗಳು ಯುವಪೀಳಿಗೆಗೆ ದಾರಿದೀಪವಾಗಿವೆ’ ಎಂದು ತಿಳಿಸಿದರು.</p><p>‘ಅಸ್ಸಾಂನ ಹೆಸರಾಂತ ಗಾಯಕರಾದ ಜುಬಿನ್ ಅವರ ಹಾಡುಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ತುಂಬಲಿವೆ’ ಎಂದರು.</p><p>ಕಾರ್ಯಕ್ರಮದ ಮಧ್ಯದಲ್ಲಿ ಭೂಪೇನ್ ಹಜಾರಿಕಾ ಅವರ ಖ್ಯಾತ ಹಾಡು ‘ಮನುಹೇ, ಮನುಹರ್ ಬೇಬೆ’ ತಮಿಳು ಹಾಗೂ ಸಿಂಹಳ ಆವೃತ್ತಿಯನ್ನು ನುಡಿಸಲಾಯಿತು.</p><p>‘ಸ್ನೇಹಿತರೇ, ಭೂಪೇನ್ ಅವರ ಹಾಡುಗಳು ಪ್ರಪಂಚದ ವಿವಿಧ ದೇಶಗಳನ್ನೂ ಹೇಗೆ ಸಂಪರ್ಕಿಸುತ್ತವೆ ಎಂಬುದಕ್ಕೆ ಈ ಧ್ವನಿಯೂ ಸಾಕ್ಷಿ ಯಾಗುತ್ತವೆ’ ಎಂದರು. </p><p>‘ನಾನು ಈ ಹಾಡುಗಳನ್ನು ಹಲವು ಬಾರಿ ಕೇಳಿದ್ದೇನೆ. ಅಸ್ಸಾಂನಲ್ಲಿ ಭೂಪೇನ್ ಅವರ ಶತಮಾನೋತ್ಸವ ಕಾರ್ಯಕ್ರಮ ದಲ್ಲಿಯೂ ಭಾಗಿಯಾಗಿದ್ದೆನು. ನಿಜಕ್ಕೂ ಅವಿಸ್ಮರಣೀಯ ಕಾರ್ಯಕ್ರಮ’ ಎಂದು ಮೆಲುಕು ಹಾಕಿದರು.</p><p>ಯುನೆಸ್ಕೊ ಪಟ್ಟಿಗೆ ‘ಛತ್ ಪೂಜೆ’ ಸೇರ್ಪಡೆಗೆ ಯತ್ನ</p><p>‘ಯುನೆಸ್ಕೊ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ‘ಛತ್ ಪೂಜೆ’ಯನ್ನು ಸೇರಿಸಲು ಸರ್ಕಾರವು ಪ್ರಯತ್ನ ನಡೆಸುತ್ತಿದೆ. ಇದು ಸಾಧ್ಯವಾದರೆ, ಜಗತ್ತಿನ ಮೂಲೆ ಮೂಲೆಯಲ್ಲಿರುವ ಜನರು ಹಬ್ಬದ ವೈಭವ ಹಾಗೂ ದೈವಿಕತೆಯನ್ನು ಅನುಭವಿಸಲು ಸಾಧ್ಯವಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.</p><p>ಭಾನುವಾರ ಪ್ರಸಾರಗೊಂಡ ಮಾಸಾಂತ್ಯದ ‘ಮನದ ಮಾತು’ ಕಾರ್ಯಕ್ರಮದ 126ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೋಲ್ಕತ್ತದ ದುರ್ಗಾ ಪೂಜೆಯನ್ನು ಕೂಡ ಇದೇ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಹೇಳಿದರು.</p><p>‘ನಮ್ಮ ಹಬ್ಬಗಳು ಹಾಗೂ ಆಚರಣೆಗಳು ದೇಶದ ಸಂಸ್ಕೃತಿಯನ್ನು ಜೀವಂತವಾಗಿರುಸುತ್ತವೆ. ಛತ್ ಪವಿತ್ರ ಹಬ್ಬವನ್ನು ದೀಪಾವಳಿ ನಂತರ ಆಚರಿಸಲಾಗುತ್ತದೆ. ಈ ದೊಡ್ಡ ಹಬ್ಬವನ್ನು ಸೂರ್ಯದೇವನಿಗೆ ಸಮರ್ಪಿಸಲಾಗುತ್ತದೆ. ಸೂರ್ಯನಿಗೆ ಅರ್ಘ್ಯ ನೀಡಿ, ನಂತರ ಪೂಜಿಸಲಾಗುತ್ತದೆ. ದೇಶದ ವಿವಿಧೆಡೆ ಮಾತ್ರವಲ್ಲದೆ ಜಗತ್ತಿನಾದ್ಯಂತ ಅದರ ವೈಭವವನ್ನು ಕಾಣಬಹುದಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>