<p><strong>ನವದೆಹಲಿ:</strong>ಆಯುಧಗಳು ಮತ್ತು ಹಿಂಸೆ ಯಾವುದಕ್ಕೂ ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಗಣರಾಜ್ಯೋತ್ಸವ ದಿನದಂದೇ2020ರ ಮೊದಲ ಮನದ ಮಾತು (ಮನ್ ಕಿ ಬಾತ್) ರೇಡಿಯೊ ಕಾರ್ಯಕ್ರಮದಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಶಾಂತಿಯುತ ಮಾತುಕತೆಯಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಬಂಡಾಯ ಕಡಿಮೆಯಾಗಿದೆ’ ಎಂದರು.</p>.<p>‘ಈಶಾನ್ಯದಲ್ಲಿ ಈಗ ಬಂಡಾಯ ಕಡಿಮೆಯಾಗಿದೆ. ಆ ಪ್ರದೇಶದ ಎಲ್ಲ ಸಮಸ್ಯೆಗಳನ್ನು ಶಾಂತಿಯುತ ಮಾತುಕತೆಗಳ ಮೂಲಕ ಪರಿಹರಿಸಲಾಗುತ್ತಿರುವುದೂ ಇದಕ್ಕೆ ಕಾರಣ’ ಎಂದು ಪ್ರಧಾನಿ ಹೇಳಿದರು.</p>.<p>ಹಿಂಸೆ ಹಾಗೂ ಆಯುಧಗಳ ಮೂಲಕ ಪರಿಹಾರ ಕಂಡುಕೊಳ್ಳಲು ಯತ್ನಿಸುವವರು ಮುಖ್ಯವಾಹಿನಿಗೆ ಬರಬೇಕು ಎಂದೂ ಅವರು ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಆಯುಧಗಳು ಮತ್ತು ಹಿಂಸೆ ಯಾವುದಕ್ಕೂ ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಗಣರಾಜ್ಯೋತ್ಸವ ದಿನದಂದೇ2020ರ ಮೊದಲ ಮನದ ಮಾತು (ಮನ್ ಕಿ ಬಾತ್) ರೇಡಿಯೊ ಕಾರ್ಯಕ್ರಮದಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಶಾಂತಿಯುತ ಮಾತುಕತೆಯಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಬಂಡಾಯ ಕಡಿಮೆಯಾಗಿದೆ’ ಎಂದರು.</p>.<p>‘ಈಶಾನ್ಯದಲ್ಲಿ ಈಗ ಬಂಡಾಯ ಕಡಿಮೆಯಾಗಿದೆ. ಆ ಪ್ರದೇಶದ ಎಲ್ಲ ಸಮಸ್ಯೆಗಳನ್ನು ಶಾಂತಿಯುತ ಮಾತುಕತೆಗಳ ಮೂಲಕ ಪರಿಹರಿಸಲಾಗುತ್ತಿರುವುದೂ ಇದಕ್ಕೆ ಕಾರಣ’ ಎಂದು ಪ್ರಧಾನಿ ಹೇಳಿದರು.</p>.<p>ಹಿಂಸೆ ಹಾಗೂ ಆಯುಧಗಳ ಮೂಲಕ ಪರಿಹಾರ ಕಂಡುಕೊಳ್ಳಲು ಯತ್ನಿಸುವವರು ಮುಖ್ಯವಾಹಿನಿಗೆ ಬರಬೇಕು ಎಂದೂ ಅವರು ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>