<p><strong>ರಾಮಬನ್/ಜಮ್ಮು</strong>: ಅಮರನಾಥ ಯಾತ್ರಿಕರಿದ್ದ ಐದು ಬಸ್ಗಳು ರಾಮಬನ್ ಜಿಲ್ಲೆಯಲ್ಲಿ ಒಂದಕ್ಕೊಂದು ಡಿಕ್ಕಿಯಾದ ಪರಿಣಾಮ ಕನಿಷ್ಠ 36 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಜಮ್ಮುವಿನ ಭಗವತಿ ನಗರದಿಂದ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಶಿಬಿರಕ್ಕೆ ತೆರಳುತ್ತಿದ್ದ ವೇಳೆ, ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ಕೂಟ್ ಬಳಿ ಬೆಳಿಗ್ಗೆ 8ರ ಸುಮಾರಿಗೆ ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ.</p><p>ಒಂದು ಬಸ್ನ ಬ್ರೇಕ್ ವೈಫಲ್ಯದಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.</p><p>'ಬೆಂಗಾವಲಿನಲ್ಲಿದ್ದ ಕೊನೇ ಬಸ್, ನಿಯಂತ್ರಣ ಕಳೆದುಕೊಂಡು ಮುಂದೆ ಇದ್ದ ಬಸ್ಗಳಿಗೆ ಗುದ್ದಿದೆ. ಈ ವೇಳೆ 36 ಯಾತ್ರಿಕರು ಗಾಯಗೊಂಡಿದ್ದಾರೆ' ಎಂದು ರಾಮಬನ್ ಡಿಸಿಪಿ ಮೊಹಮ್ಮದ್ ಅಲ್ಯಾಸ್ ಖಾನ್ ಮಾಹಿತಿ ನೀಡಿದ್ದಾರೆ.</p><p>ಅಧಿಕಾರಿಗಳು ಈಗಾಗಲೇ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮಬನ್/ಜಮ್ಮು</strong>: ಅಮರನಾಥ ಯಾತ್ರಿಕರಿದ್ದ ಐದು ಬಸ್ಗಳು ರಾಮಬನ್ ಜಿಲ್ಲೆಯಲ್ಲಿ ಒಂದಕ್ಕೊಂದು ಡಿಕ್ಕಿಯಾದ ಪರಿಣಾಮ ಕನಿಷ್ಠ 36 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಜಮ್ಮುವಿನ ಭಗವತಿ ನಗರದಿಂದ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಶಿಬಿರಕ್ಕೆ ತೆರಳುತ್ತಿದ್ದ ವೇಳೆ, ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ಕೂಟ್ ಬಳಿ ಬೆಳಿಗ್ಗೆ 8ರ ಸುಮಾರಿಗೆ ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ.</p><p>ಒಂದು ಬಸ್ನ ಬ್ರೇಕ್ ವೈಫಲ್ಯದಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.</p><p>'ಬೆಂಗಾವಲಿನಲ್ಲಿದ್ದ ಕೊನೇ ಬಸ್, ನಿಯಂತ್ರಣ ಕಳೆದುಕೊಂಡು ಮುಂದೆ ಇದ್ದ ಬಸ್ಗಳಿಗೆ ಗುದ್ದಿದೆ. ಈ ವೇಳೆ 36 ಯಾತ್ರಿಕರು ಗಾಯಗೊಂಡಿದ್ದಾರೆ' ಎಂದು ರಾಮಬನ್ ಡಿಸಿಪಿ ಮೊಹಮ್ಮದ್ ಅಲ್ಯಾಸ್ ಖಾನ್ ಮಾಹಿತಿ ನೀಡಿದ್ದಾರೆ.</p><p>ಅಧಿಕಾರಿಗಳು ಈಗಾಗಲೇ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>