<p><strong>ರಾಂಚಿ:</strong> ಜಾರ್ಖಂಡ್ನ ಜೆಮ್ಶೆಡ್ಪುರದಲ್ಲಿರುವ ಮೃಗಾಲಯದಲ್ಲಿ ಮಾರಣಾಂತಿಕ ಬ್ಯಾಕ್ಟೀರಿಯಾ ಸೋಂಕಿನಿಂದ 10 ಕೃಷ್ಣಮೃಗಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಜೆಮ್ಶೆಡ್ಪುರದಲ್ಲಿರುವ ಟಾಟಾ ಸ್ಟೀಲ್ ಜೈವಿಕ ಉದ್ಯಾನದಲ್ಲಿ ಡಿಸೆಂಬರ್ 1ರಿಂದ 6ರವರೆಗೆ 10 ಕೃಷ್ಣಮೃಗಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. </p><p>‘ಉದ್ಯಾನವನದಲ್ಲಿ ಇದುವರೆಗೆ 10 ಕೃಷ್ಣಮೃಗಗಳು ಸಾವಿಗೀಡಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಂಚಿ ಪಶುವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಬ್ಯಾಕ್ಟೀರಿಯಾ ಸೋಂಕಿನಿಂದಾಗಿ ಕೃಷ್ಣಮೃಗಗಳು ಮೃತಪಟ್ಟಿರುವ ಸಾಧ್ಯತೆ ಇದೆ’ ಎಂದು ಉದ್ಯಾನವನದ ಉಪನಿರ್ದೇಶಕ ಡಾ. ನಯೀಮ್ ಅಖ್ತರ್ ತಿಳಿಸಿದ್ದಾರೆ.</p><p>‘ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಅವುಗಳಿಗೆ ‘ಹೆಮರೇಜ್ ಸೆಪ್ಟೆಸೀಮಿಯಾ’ ಹೆಸರಿನ ಬ್ಯಾಕ್ಟೀರಿಯಾ ಸೋಂಕು ತಗುಲಿರುವುದು ದೃಢಪಟ್ಟಿದೆ’ ಎಂದು ರಾಂಚಿಯ ಪಶುವೈದ್ಯಕೀಯ ಕಾಲೇಜಿನ (ಆರ್ವಿಸಿ) ರೋಗಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಲಕ್ರಾ ತಿಳಿಸಿದ್ದಾರೆ. </p><p>ಟಾಟಾ ಸ್ಟೀಲ್ ಜೈವಿಕ ಉದ್ಯಾನದಲ್ಲಿ 18 ಕೃಷ್ಣಮೃಗಗಳು ಸೇರಿದಂತೆ ವಿವಿಧ ಜಾತಿಯ 370 ಪ್ರಾಣಿಗಳಿದ್ದವು. ಸೋಂಕಿನಿಂದಾಗಿ 10 ಕೃಷ್ಣಮೃಗಗಳು ಮೃತಪಟ್ಟಿದ್ದು, ಇನ್ನುಳಿದ 8 ಕೃಷ್ಣಮೃಗಗಳು ಸುರಕ್ಷಿತವಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p><p>ನವೆಂಬರ್ನಲ್ಲಿ ಕರ್ನಾಟಕದ ಬೆಳಗಾವಿ ಜಿಲ್ಲೆಯ ಭೂತರಾಮನ ಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿನ 31 ಕೃಷ್ಣಮೃಗಗಳು ಸಾವಿಗೀಡಾಗಿದ್ದವು. </p><p>ಮೃಗಾಲಯದಲ್ಲಿ ಒಟ್ಟು 38 ಕೃಷ್ಣಮೃಗಗಳಿದ್ದು, ಅವುಗಳ ಪೈಕಿ 31 ಮೃತಪಟ್ಟಿದ್ದವು. ಮಾರಣಾಂತಿಕ ಬ್ಯಾಕ್ಟೀರಿಯಾ ಸೋಂಕು ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿತ್ತು. ‘ಹೆಮರೇಜ್ ಸೆಪ್ಟೆಸೀಮಿಯಾ’ ಹೆಸರಿನ ಈ ಸೋಂಕು ಪ್ರಾಣಿಗಳಲ್ಲಿ ಆಂತರಿಕ ರಕ್ತಸ್ರಾವಕ್ಕೆ ಕಾರಣವಾಗುವುದರ ಜೊತೆಗೆ ಅಂಗಾಂಗಗಳನ್ನು ತೀವ್ರವಾಗಿ ಗಾಸಿಗೊಳಿಸುತ್ತದೆ. ಸೋಂಕು ಉಂಟಾದ 24 ಗಂಟೆಗಳಲ್ಲೇ ಪ್ರಾಣಿಗಳು ಜೀವ ಕಳೆದುಕೊಳ್ಳುವ ಸಾಧ್ಯತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಜಾರ್ಖಂಡ್ನ ಜೆಮ್ಶೆಡ್ಪುರದಲ್ಲಿರುವ ಮೃಗಾಲಯದಲ್ಲಿ ಮಾರಣಾಂತಿಕ ಬ್ಯಾಕ್ಟೀರಿಯಾ ಸೋಂಕಿನಿಂದ 10 ಕೃಷ್ಣಮೃಗಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಜೆಮ್ಶೆಡ್ಪುರದಲ್ಲಿರುವ ಟಾಟಾ ಸ್ಟೀಲ್ ಜೈವಿಕ ಉದ್ಯಾನದಲ್ಲಿ ಡಿಸೆಂಬರ್ 1ರಿಂದ 6ರವರೆಗೆ 10 ಕೃಷ್ಣಮೃಗಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. </p><p>‘ಉದ್ಯಾನವನದಲ್ಲಿ ಇದುವರೆಗೆ 10 ಕೃಷ್ಣಮೃಗಗಳು ಸಾವಿಗೀಡಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಂಚಿ ಪಶುವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಬ್ಯಾಕ್ಟೀರಿಯಾ ಸೋಂಕಿನಿಂದಾಗಿ ಕೃಷ್ಣಮೃಗಗಳು ಮೃತಪಟ್ಟಿರುವ ಸಾಧ್ಯತೆ ಇದೆ’ ಎಂದು ಉದ್ಯಾನವನದ ಉಪನಿರ್ದೇಶಕ ಡಾ. ನಯೀಮ್ ಅಖ್ತರ್ ತಿಳಿಸಿದ್ದಾರೆ.</p><p>‘ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಅವುಗಳಿಗೆ ‘ಹೆಮರೇಜ್ ಸೆಪ್ಟೆಸೀಮಿಯಾ’ ಹೆಸರಿನ ಬ್ಯಾಕ್ಟೀರಿಯಾ ಸೋಂಕು ತಗುಲಿರುವುದು ದೃಢಪಟ್ಟಿದೆ’ ಎಂದು ರಾಂಚಿಯ ಪಶುವೈದ್ಯಕೀಯ ಕಾಲೇಜಿನ (ಆರ್ವಿಸಿ) ರೋಗಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಲಕ್ರಾ ತಿಳಿಸಿದ್ದಾರೆ. </p><p>ಟಾಟಾ ಸ್ಟೀಲ್ ಜೈವಿಕ ಉದ್ಯಾನದಲ್ಲಿ 18 ಕೃಷ್ಣಮೃಗಗಳು ಸೇರಿದಂತೆ ವಿವಿಧ ಜಾತಿಯ 370 ಪ್ರಾಣಿಗಳಿದ್ದವು. ಸೋಂಕಿನಿಂದಾಗಿ 10 ಕೃಷ್ಣಮೃಗಗಳು ಮೃತಪಟ್ಟಿದ್ದು, ಇನ್ನುಳಿದ 8 ಕೃಷ್ಣಮೃಗಗಳು ಸುರಕ್ಷಿತವಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p><p>ನವೆಂಬರ್ನಲ್ಲಿ ಕರ್ನಾಟಕದ ಬೆಳಗಾವಿ ಜಿಲ್ಲೆಯ ಭೂತರಾಮನ ಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿನ 31 ಕೃಷ್ಣಮೃಗಗಳು ಸಾವಿಗೀಡಾಗಿದ್ದವು. </p><p>ಮೃಗಾಲಯದಲ್ಲಿ ಒಟ್ಟು 38 ಕೃಷ್ಣಮೃಗಗಳಿದ್ದು, ಅವುಗಳ ಪೈಕಿ 31 ಮೃತಪಟ್ಟಿದ್ದವು. ಮಾರಣಾಂತಿಕ ಬ್ಯಾಕ್ಟೀರಿಯಾ ಸೋಂಕು ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿತ್ತು. ‘ಹೆಮರೇಜ್ ಸೆಪ್ಟೆಸೀಮಿಯಾ’ ಹೆಸರಿನ ಈ ಸೋಂಕು ಪ್ರಾಣಿಗಳಲ್ಲಿ ಆಂತರಿಕ ರಕ್ತಸ್ರಾವಕ್ಕೆ ಕಾರಣವಾಗುವುದರ ಜೊತೆಗೆ ಅಂಗಾಂಗಗಳನ್ನು ತೀವ್ರವಾಗಿ ಗಾಸಿಗೊಳಿಸುತ್ತದೆ. ಸೋಂಕು ಉಂಟಾದ 24 ಗಂಟೆಗಳಲ್ಲೇ ಪ್ರಾಣಿಗಳು ಜೀವ ಕಳೆದುಕೊಳ್ಳುವ ಸಾಧ್ಯತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>