<p><strong>ಜೈಪುರ</strong>: ರಾಜಸ್ಠಾನದಲ್ಲಿ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್ವೊಂದು ಶುಕ್ರವಾರ ಹಲವು ವಾಹನಗಳಿಗೆ ಗುದ್ದಿದ ಪರಿಣಾಮ ಅಗ್ನಿಅವಘಡ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ ಮತ್ತು 35 ಮಂದಿ ಗಾಯಗೊಂಡಿದ್ದಾರೆ. </p><p>ಜೈಪುರ –ಅಜ್ಮೇರ್ ಹೆದ್ದಾರಿಯಲ್ಲಿ ಶಾಲೆಯೊಂದರ ಮುಂದೆ ಮುಂಜಾನೆ 5.45ಕ್ಕೆ ಅವಘಡ ಸಂಭವಿಸಿದೆ. 30ಕ್ಕೂ ಅಧಿಕ ವಾಹನಗಳು ಬೆಂಕಿಗಾಹುತಿಯಾಗಿವೆ.</p><p>ಗಾಯಗೊಂಡವರಲ್ಲಿ ಅರ್ಧದಷ್ಟು ಜನರ ಆರೋಗ್ಯ ಸ್ಥಿತಿ ಗಂಭಿರವಾಗಿದೆ’ ಎಂದು ರಾಜಸ್ಥಾನದ ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಖಿಮ್ಸರ್ ಅವರು ತಿಳಿಸಿದ್ದಾರೆ. </p><p>‘ಅಪಘಾತದಲ್ಲಿ ಟ್ಯಾಂಕರ್ನ ಪೈಪ್ಗೆ ಹಾನಿಯಾದ ಕಾರಣ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಟ್ಯಾಂಕರ್ ಹಿಂದೆ ನಿಂತಿದ್ದ, ಎದುರಿನಿಂದ ಬರುತ್ತಿದ್ದ ಮತ್ತು ಅಪಘಾತಗೊಂಡ ವಾಹನಗಳು ಬೆಂಕಿಗಾಹುತಿಯಾಗಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ತಕ್ಷಣಕ್ಕೆ ವಾಹನದಿಂದ ಹೊರಬರಲಾಗದೆ ಹಲವರು ಸುಟ್ಟುಕರಕಲಾಗಿದ್ದಾರೆ. ಎಲ್ಲ ವಾಹನಗಳನ್ನು ಪರಿಶೀಲಿಸಿದ ಬಳಿಕ ಪೂರ್ಣ ಮಾಹಿತಿ ಸಿಗಲಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>‘ಹೆದ್ದಾರಿ ಬಳಿ ಇರುವ ಪೈಪ್ ಕಾರ್ಖಾನೆಗೂ ಹಾನಿಯಾಗಿದೆ. ಒಂದು ಕಿ.ಮೀ ವ್ಯಾಪ್ತಿಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಅಗ್ನಿಶಾಮಕ ಪಡೆಯು ಘಟನಾ ಸ್ಥಳಕ್ಕೆ ತಕ್ಷಣಕ್ಕೆ ತಲುಪುವುದು ಕಷ್ಟಕರವಾಯಿತು. ಘಣನೆ ನಡೆದ ಪ್ರದೇಶದಲ್ಲಿ 3 ಪೆಟ್ರೊಲ್ ಬಂಕ್ಗಳಿದ್ದು, ಅದೃಷ್ಟವಶಾತ್ ಅವುಗಳಿಗೆ ಹಾನಿಯಾಗಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಮೃತರ ಕುಟುಂಬದವರಿಗೆ ತಲಾ ಎರಡು ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ ಮೂಲಕ ತಿಳಿಸಿದ್ದಾರೆ. </p><p>ರಾಜಸ್ಥಾನ ಸರ್ಕಾರವು ಮೃತ ಕುಟುಂಬಕ್ಕೆ 5 ಲಕ್ಷ ಮತ್ತು ಗಾಯಗೊಂಡವರಿಗೆ 1 ಲಕ್ಷ ಪರಿಹಾರ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಠಾನದಲ್ಲಿ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್ವೊಂದು ಶುಕ್ರವಾರ ಹಲವು ವಾಹನಗಳಿಗೆ ಗುದ್ದಿದ ಪರಿಣಾಮ ಅಗ್ನಿಅವಘಡ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ ಮತ್ತು 35 ಮಂದಿ ಗಾಯಗೊಂಡಿದ್ದಾರೆ. </p><p>ಜೈಪುರ –ಅಜ್ಮೇರ್ ಹೆದ್ದಾರಿಯಲ್ಲಿ ಶಾಲೆಯೊಂದರ ಮುಂದೆ ಮುಂಜಾನೆ 5.45ಕ್ಕೆ ಅವಘಡ ಸಂಭವಿಸಿದೆ. 30ಕ್ಕೂ ಅಧಿಕ ವಾಹನಗಳು ಬೆಂಕಿಗಾಹುತಿಯಾಗಿವೆ.</p><p>ಗಾಯಗೊಂಡವರಲ್ಲಿ ಅರ್ಧದಷ್ಟು ಜನರ ಆರೋಗ್ಯ ಸ್ಥಿತಿ ಗಂಭಿರವಾಗಿದೆ’ ಎಂದು ರಾಜಸ್ಥಾನದ ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಖಿಮ್ಸರ್ ಅವರು ತಿಳಿಸಿದ್ದಾರೆ. </p><p>‘ಅಪಘಾತದಲ್ಲಿ ಟ್ಯಾಂಕರ್ನ ಪೈಪ್ಗೆ ಹಾನಿಯಾದ ಕಾರಣ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಟ್ಯಾಂಕರ್ ಹಿಂದೆ ನಿಂತಿದ್ದ, ಎದುರಿನಿಂದ ಬರುತ್ತಿದ್ದ ಮತ್ತು ಅಪಘಾತಗೊಂಡ ವಾಹನಗಳು ಬೆಂಕಿಗಾಹುತಿಯಾಗಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ತಕ್ಷಣಕ್ಕೆ ವಾಹನದಿಂದ ಹೊರಬರಲಾಗದೆ ಹಲವರು ಸುಟ್ಟುಕರಕಲಾಗಿದ್ದಾರೆ. ಎಲ್ಲ ವಾಹನಗಳನ್ನು ಪರಿಶೀಲಿಸಿದ ಬಳಿಕ ಪೂರ್ಣ ಮಾಹಿತಿ ಸಿಗಲಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>‘ಹೆದ್ದಾರಿ ಬಳಿ ಇರುವ ಪೈಪ್ ಕಾರ್ಖಾನೆಗೂ ಹಾನಿಯಾಗಿದೆ. ಒಂದು ಕಿ.ಮೀ ವ್ಯಾಪ್ತಿಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಅಗ್ನಿಶಾಮಕ ಪಡೆಯು ಘಟನಾ ಸ್ಥಳಕ್ಕೆ ತಕ್ಷಣಕ್ಕೆ ತಲುಪುವುದು ಕಷ್ಟಕರವಾಯಿತು. ಘಣನೆ ನಡೆದ ಪ್ರದೇಶದಲ್ಲಿ 3 ಪೆಟ್ರೊಲ್ ಬಂಕ್ಗಳಿದ್ದು, ಅದೃಷ್ಟವಶಾತ್ ಅವುಗಳಿಗೆ ಹಾನಿಯಾಗಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಮೃತರ ಕುಟುಂಬದವರಿಗೆ ತಲಾ ಎರಡು ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ ಮೂಲಕ ತಿಳಿಸಿದ್ದಾರೆ. </p><p>ರಾಜಸ್ಥಾನ ಸರ್ಕಾರವು ಮೃತ ಕುಟುಂಬಕ್ಕೆ 5 ಲಕ್ಷ ಮತ್ತು ಗಾಯಗೊಂಡವರಿಗೆ 1 ಲಕ್ಷ ಪರಿಹಾರ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>