<p><strong>ಜೈಪುರ (ರಾಜಸ್ಥಾನ):</strong> ಜಿಲ್ಲೆಯ ಬಸ್ಸಿ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>'ಬಾಯ್ಲರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಗಾಯಾಳುಗಳನ್ನು ಇಲ್ಲಿನ ಸವಾಯಿ ಮಾನ್ ಸಿಂಗ್ ಸರ್ಕಾರಿ (ಎಸ್ಎಂಎಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತಿದ್ದಾರೆ' ಎಂದು ಜೈಪುರ ಜಿಲ್ಲಾಧಿಕಾರಿ ಪ್ರಕಾಶ್ ರಾಜ್ಪುರೋಹಿತ್ ಹೇಳಿದ್ದಾರೆ.</p><p>'ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಬೆಂಕಿ ನಂದಿಸಲಾಗಿದೆ' ಎಂದು ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಮಾಹಿತಿ ನೀಡಿದ್ದಾರೆ.</p><p>'ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಶೇ 95ರಷ್ಟು ಸುಟ್ಟಗಾಯಗಳಾಗಿದ್ದ ಒಬ್ಬರು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶೇ 65ರಷ್ಟು ಸುಟ್ಟಗಾಯವಾಗಿರುವ ಮತ್ತೊಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ' ಎಂದು ಎಸ್ಎಂಎಸ್ ಆಸ್ಪತ್ರೆಯ ವೈದ್ಯ ಡಾ. ಅಚಲ್ ಶರ್ಮಾ ತಿಳಿಸಿದ್ದಾರೆ.</p><p>ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ್ದ ಸ್ಥಳೀಯರು, ಪ್ರಕರಣ ಸಂಬಂಧ ತನಿಖೆ ನಡೆಸಬೇಕು. ತಲೆಮರೆಸಿಕೊಂಡಿರುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p><p>ಮೃತರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ (ರಾಜಸ್ಥಾನ):</strong> ಜಿಲ್ಲೆಯ ಬಸ್ಸಿ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>'ಬಾಯ್ಲರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಗಾಯಾಳುಗಳನ್ನು ಇಲ್ಲಿನ ಸವಾಯಿ ಮಾನ್ ಸಿಂಗ್ ಸರ್ಕಾರಿ (ಎಸ್ಎಂಎಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತಿದ್ದಾರೆ' ಎಂದು ಜೈಪುರ ಜಿಲ್ಲಾಧಿಕಾರಿ ಪ್ರಕಾಶ್ ರಾಜ್ಪುರೋಹಿತ್ ಹೇಳಿದ್ದಾರೆ.</p><p>'ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಬೆಂಕಿ ನಂದಿಸಲಾಗಿದೆ' ಎಂದು ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಮಾಹಿತಿ ನೀಡಿದ್ದಾರೆ.</p><p>'ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಶೇ 95ರಷ್ಟು ಸುಟ್ಟಗಾಯಗಳಾಗಿದ್ದ ಒಬ್ಬರು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶೇ 65ರಷ್ಟು ಸುಟ್ಟಗಾಯವಾಗಿರುವ ಮತ್ತೊಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ' ಎಂದು ಎಸ್ಎಂಎಸ್ ಆಸ್ಪತ್ರೆಯ ವೈದ್ಯ ಡಾ. ಅಚಲ್ ಶರ್ಮಾ ತಿಳಿಸಿದ್ದಾರೆ.</p><p>ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ್ದ ಸ್ಥಳೀಯರು, ಪ್ರಕರಣ ಸಂಬಂಧ ತನಿಖೆ ನಡೆಸಬೇಕು. ತಲೆಮರೆಸಿಕೊಂಡಿರುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p><p>ಮೃತರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>