ಮೃತಪಟ್ಟವರಲ್ಲಿ ಉತ್ತರ ಪ್ರದೇಶದ ಏಳು ಮಂದಿ, ದೆಹಲಿಯ ಮೂವರು ಮತ್ತು ಹರಿಯಾಣದ ಇಬ್ಬರು ಸೇರಿದ್ದಾರೆ. ಘಟನೆಯನ್ನು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಮಾತಾ ವೈಷ್ಣೋದೇವಿ ದೇಗುಲದ ಕಾಲ್ತುಳಿತದಲ್ಲಿ ಪ್ರಾಣ
ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಂತಾಪ ಸೂಚಿಸಿದ್ದಾರೆ.