<p><strong>ವಯನಾಡು</strong>(<strong>ಕೇರಳ</strong>): ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತಗಳು ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.</p><p>ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿ 4 ಮಂದಿ ಮೃತಪಟ್ಟಿದ್ದಾರೆ. ತೊಂಡೇರ್ನಾಡು ಹಳ್ಳಿಯಲ್ಲಿ ನೇಪಾಳ ಕುಟುಂಬದ ಒಂದು ವರ್ಷದ ಮಗು ಮೃತಪಟ್ಟಿದೆ ಎಂದು ವಯನಾಡಿನ ಜಿಲ್ಲಾ ಹಂತದ ಅಧಿಕಾರಿಗಳು ತಿಳಿಸಿದ್ದಾರೆ.</p><p>ದಿ ಮುಂಡಕ್ಕಾಯ್, ಚೂರಲ್ಮಲಾ, ಅತ್ತಮಲಾ ಮತ್ತು ನೂಳಪ್ಪುಳ ಗ್ರಾಮಗಳಲ್ಲಿ ಭೂಕುಸಿತದ ಪರಿಣಾಮ ಎದುರಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮುಂಡಕ್ಕಾಯ್ ಪ್ರದೇಶದಲ್ಲಿ ಸಿಲುಕಿರುವ ಜನರನ್ನು ವಾಯು ಮಾರ್ಗದ ಮೂಲಕ ರಕ್ಷಣೆಗೆ ಜಿಲ್ಲಾ ಹಂತದ ಅಧಿಕಾರಿಗಳು ಯೋಜನೆ ಮಾಡುತ್ತಿದ್ದಾರೆ ಎಂದು ಯುಡಿಎಫ್ ಶಾಸಕ ಟಿ. ಸಿದ್ಧಿಕ್ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.</p><p>‘ಭೂಕುಸಿತದಲ್ಲಿ ಕಾಣೆಯಾದವರು ಮತ್ತು ಮೃತರ ಕುರಿತಂತೆ ನಮ್ಮ ಬಳಿ ಸಂಪೂರ್ಣ ಮಾಹಿತಿ ಇಲ್ಲ. ಹಲವು ಪ್ರದೇಶಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಘಟನಾ ಸ್ಥಳಗಳಿಗೆ ತೆರಳಲು ಎನ್ಡಿಆರ್ಎಫ್ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.</p> <p>ಈ ನಡುವೆ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ವಾಯುಪಡೆಯ ಎರಡು ಹೆಲಿಕಾಪ್ಟರ್ಗಳು ಸುಲೂರ್ನಿಂದ ವಯನಾಡುಗೆ ತೆರಳಿವೆ ಎಂದು ಸಿಎಂ ಪಿಣರಾಯಿ ವಿಜಯನ್ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ಭೂಕುಸಿತದ ಬಳಿಕ ಸುತ್ತಮುತ್ತಲಿನ ಪ್ರದೇಶಗಳ ಜನರು ವಿವಿಧ ಶಿಬಿರಗಳು ಮತ್ತು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .ವಯನಾಡು; ಭಾರಿ ಮಳೆಯಿಂದಾಗಿ ಭೂಕುಸಿತ: ಹಲವರು ಮಂದಿ ಸಿಲುಕಿರುವ ಶಂಕೆ .ವಯನಾಡು | ಮೃತರ ಸಂಖ್ಯೆ 123ಕ್ಕೆ ಏರಿಕೆ: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡು</strong>(<strong>ಕೇರಳ</strong>): ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತಗಳು ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.</p><p>ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿ 4 ಮಂದಿ ಮೃತಪಟ್ಟಿದ್ದಾರೆ. ತೊಂಡೇರ್ನಾಡು ಹಳ್ಳಿಯಲ್ಲಿ ನೇಪಾಳ ಕುಟುಂಬದ ಒಂದು ವರ್ಷದ ಮಗು ಮೃತಪಟ್ಟಿದೆ ಎಂದು ವಯನಾಡಿನ ಜಿಲ್ಲಾ ಹಂತದ ಅಧಿಕಾರಿಗಳು ತಿಳಿಸಿದ್ದಾರೆ.</p><p>ದಿ ಮುಂಡಕ್ಕಾಯ್, ಚೂರಲ್ಮಲಾ, ಅತ್ತಮಲಾ ಮತ್ತು ನೂಳಪ್ಪುಳ ಗ್ರಾಮಗಳಲ್ಲಿ ಭೂಕುಸಿತದ ಪರಿಣಾಮ ಎದುರಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮುಂಡಕ್ಕಾಯ್ ಪ್ರದೇಶದಲ್ಲಿ ಸಿಲುಕಿರುವ ಜನರನ್ನು ವಾಯು ಮಾರ್ಗದ ಮೂಲಕ ರಕ್ಷಣೆಗೆ ಜಿಲ್ಲಾ ಹಂತದ ಅಧಿಕಾರಿಗಳು ಯೋಜನೆ ಮಾಡುತ್ತಿದ್ದಾರೆ ಎಂದು ಯುಡಿಎಫ್ ಶಾಸಕ ಟಿ. ಸಿದ್ಧಿಕ್ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.</p><p>‘ಭೂಕುಸಿತದಲ್ಲಿ ಕಾಣೆಯಾದವರು ಮತ್ತು ಮೃತರ ಕುರಿತಂತೆ ನಮ್ಮ ಬಳಿ ಸಂಪೂರ್ಣ ಮಾಹಿತಿ ಇಲ್ಲ. ಹಲವು ಪ್ರದೇಶಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಘಟನಾ ಸ್ಥಳಗಳಿಗೆ ತೆರಳಲು ಎನ್ಡಿಆರ್ಎಫ್ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.</p> <p>ಈ ನಡುವೆ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ವಾಯುಪಡೆಯ ಎರಡು ಹೆಲಿಕಾಪ್ಟರ್ಗಳು ಸುಲೂರ್ನಿಂದ ವಯನಾಡುಗೆ ತೆರಳಿವೆ ಎಂದು ಸಿಎಂ ಪಿಣರಾಯಿ ವಿಜಯನ್ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ಭೂಕುಸಿತದ ಬಳಿಕ ಸುತ್ತಮುತ್ತಲಿನ ಪ್ರದೇಶಗಳ ಜನರು ವಿವಿಧ ಶಿಬಿರಗಳು ಮತ್ತು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .ವಯನಾಡು; ಭಾರಿ ಮಳೆಯಿಂದಾಗಿ ಭೂಕುಸಿತ: ಹಲವರು ಮಂದಿ ಸಿಲುಕಿರುವ ಶಂಕೆ .ವಯನಾಡು | ಮೃತರ ಸಂಖ್ಯೆ 123ಕ್ಕೆ ಏರಿಕೆ: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>