<p><strong>ಬದಾನ್:</strong> ಉತ್ತರ ಪ್ರದೇಶದ ತಿಗಳ್ಪುರ್ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಕಲಿ ಮದ್ಯ ಹಂಚಿದ್ದು, ಅದನ್ನು ಸೇವಿಸಿದ್ದವರ ಪೈಕಿ ಇಬ್ಬರು ಸಾವನ್ನಪ್ಪಿದ್ದರೆ, ಓರ್ವ ದೃಷ್ಟಿ ಕಳೆದುಕೊಂಡಿದುಕೊಂಡಿದ್ದಾನೆ, ಹಲವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಹೋಳಿ ಸಂದರ್ಭದಲ್ಲಿ ಪಂಚಾಯತ್ ಚುನಾವಣೆ ಸಂಬಂಧ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಮದ್ಯ ಹಂಚಿದ್ದರು. ಅದನ್ನು ಸೇವಿಸಿದ ಸಂಜಯ್ ಸಿಂಗ್ ಮತ್ತು ಪ್ರೇಮದಾಸ್ ಎಂಬಿಬ್ಬರು ಸಾವನ್ನಪ್ಪಿದ್ದಾರೆ. ಅಮರ್ ಸಿಂಗ್ ಎಂಬವರ ದೃಷ್ಟಿ ಹೊರಟುಹೋಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.</p>.<p>ಮದ್ಯ ಸೇವಿಸಿ ಅಸ್ವಸ್ಥರಾಗಿದ್ದ ಸಂಜಯ್ ಸಿಂಗ್ ಮತ್ತು ಪ್ರೇಮದಾಸ್ ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.</p>.<p>ಈ ಸಂಬಂಧ ಮೂವರನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಾ ರಂಜನ್ ಈ ವಿಚಾರವನ್ನು ತನಿಖೆ ಮಾಡುವುದಾಗಿ ಹೇಳಿದ್ದಾರೆ.</p>.<p><a href="https://www.prajavani.net/india-news/priyanka-self-isolates-after-robert-vadra-tests-covid-positive-cancels-campaign-in-tn-assam-kerala-818676.html" itemprop="url">ರಾಬರ್ಟ್ ವಾದ್ರಾಗೆ ಕೋವಿಡ್: ಪ್ರಿಯಾಂಕಾ ಪ್ರತ್ಯೇಕವಾಸ, ಚುನಾವಣಾ ಪ್ರಚಾರ ರದ್ದು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದಾನ್:</strong> ಉತ್ತರ ಪ್ರದೇಶದ ತಿಗಳ್ಪುರ್ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಕಲಿ ಮದ್ಯ ಹಂಚಿದ್ದು, ಅದನ್ನು ಸೇವಿಸಿದ್ದವರ ಪೈಕಿ ಇಬ್ಬರು ಸಾವನ್ನಪ್ಪಿದ್ದರೆ, ಓರ್ವ ದೃಷ್ಟಿ ಕಳೆದುಕೊಂಡಿದುಕೊಂಡಿದ್ದಾನೆ, ಹಲವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಹೋಳಿ ಸಂದರ್ಭದಲ್ಲಿ ಪಂಚಾಯತ್ ಚುನಾವಣೆ ಸಂಬಂಧ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಮದ್ಯ ಹಂಚಿದ್ದರು. ಅದನ್ನು ಸೇವಿಸಿದ ಸಂಜಯ್ ಸಿಂಗ್ ಮತ್ತು ಪ್ರೇಮದಾಸ್ ಎಂಬಿಬ್ಬರು ಸಾವನ್ನಪ್ಪಿದ್ದಾರೆ. ಅಮರ್ ಸಿಂಗ್ ಎಂಬವರ ದೃಷ್ಟಿ ಹೊರಟುಹೋಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.</p>.<p>ಮದ್ಯ ಸೇವಿಸಿ ಅಸ್ವಸ್ಥರಾಗಿದ್ದ ಸಂಜಯ್ ಸಿಂಗ್ ಮತ್ತು ಪ್ರೇಮದಾಸ್ ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.</p>.<p>ಈ ಸಂಬಂಧ ಮೂವರನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಾ ರಂಜನ್ ಈ ವಿಚಾರವನ್ನು ತನಿಖೆ ಮಾಡುವುದಾಗಿ ಹೇಳಿದ್ದಾರೆ.</p>.<p><a href="https://www.prajavani.net/india-news/priyanka-self-isolates-after-robert-vadra-tests-covid-positive-cancels-campaign-in-tn-assam-kerala-818676.html" itemprop="url">ರಾಬರ್ಟ್ ವಾದ್ರಾಗೆ ಕೋವಿಡ್: ಪ್ರಿಯಾಂಕಾ ಪ್ರತ್ಯೇಕವಾಸ, ಚುನಾವಣಾ ಪ್ರಚಾರ ರದ್ದು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>