<p><strong>ಅಹಮದಾಬಾದ್</strong>: ಗುಜರಾತ್ನ ಬನಾಸ್ಕಾಂಠ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸ್ಫೋಟ ಸಂಭವಿಸಿ ಚಾವಣಿ ಕುಸಿದ ಪರಿಣಾಮ 18 ಮಂದಿ ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ.</p><p>‘ದೀಸಾ ನಗರದ ಕೈಗಾರಿಕಾ ಪ್ರದೇಶದಲ್ಲಿ ಬೆಳಿಗ್ಗೆ 9.45ಕ್ಕೆ ಈ ದುರಂತ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮಧ್ಯಪ್ರದೇಶ ಮೂಲದ ಕಾರ್ಮಿಕರು ತಮ್ಮ ಕುಟುಂಬಸ್ಥರೊಂದಿಗೆ ಕಾರ್ಖಾನೆಯಲ್ಲಿಯೇ ವಾಸಿಸುತ್ತಿದ್ದರು. ಸ್ಫೋಟದ ಪರಿಣಾಮವಾಗಿ ಗೋದಾಮಿನ ಚಾವಣಿಯು ಕುಸಿದುಬಿದ್ದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.</p><p>‘ಅವಶೇಷಗಳಡಿ ಸಿಲುಕಿದವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಹಲವರ ದೇಹಗಳು ಪೂರ್ಣವಾಗಿ ಸುಟ್ಟು ಹೋಗಿರುವುದರಿಂದ ಗುರುತು ಹಿಡಿಯಲು ಕಷ್ಟವಾಗುತ್ತಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>‘ಈ ಸ್ಥಳದಲ್ಲಿ ಗೋದಾಮಿಗೆ ಮಾತ್ರ ಪರವಾನಿಗೆ ನೀಡಲಾಗಿದೆ, ಪಟಾಕಿ ತಯಾರಿಕೆಗೆ ಅನುಮತಿ ನೀಡಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಸ್ಥಳದಲ್ಲಿ ಅನುಮತಿ ಇಲ್ಲದೆ ಪಟಾಕಿ ತಯಾರಿಸಲಾಗುತ್ತಿತ್ತು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನೇಹಾ ಪಾಂಚಾಲ್ ಅವರು ತಿಳಿಸಿದ್ದಾರೆ.</p><p>ಸುರಕ್ಷತಾ ಕ್ರಮಗಳನ್ನು ಅನುಸರಿಸದ ಕಾರಣ ಗೋದಾಮಿನ ಪರವಾನಗಿಯನ್ನು ನವೀಕರಿಸಿರಲಿಲ್ಲ. ಪೊಲೀಸ್ ಪರಿಶೀಲನೆಯ ವೇಳೆ ಗೋದಾಮು ಖಾಲಿ ಇತ್ತು ಎಂದು ಗುಜರಾತ್ ಸರ್ಕಾರದ ವಕ್ತಾರರೊಬ್ಬರು ತಿಳಿಸಿದ್ದಾರೆ.</p><p>‘ಕಾರ್ಖಾನೆಯು ಖೂಬ್ಚಾಂದ್ ಸಿಂಧಿ ಅವರಿಗೆ ಸೇರಿದೆ. ಘಟನೆಗೆ ಕಾರಣರಾದವರ ಪತ್ತೆಗಾಗಿ ರಾಜಸ್ಥಾನ ಮತ್ತು ಅಹಮದಾಬಾದ್ಗೆ ವಿಶೇಷ ತಂಡಗಳನ್ನು ಕಳುಹಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ‘ದೀಸಾ ಪಟ್ಟಣದ ಪಟಾಕಿ ಗೋದಾಮಿನಲ್ಲಿ ಬೆಂಕಿ ಸ್ಫೋಟ ಮತ್ತು ಸ್ಲ್ಯಾಬ್ ಕುಸಿದು ಕಾರ್ಮಿಕರು ಮೃತಪಟ್ಟಿರುವುದು ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳಿಗೆ ಶೀಘ್ರ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ₹4 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಆರ್ಥಿಕ ನೆರವು ಘೋಷಿಸಿದೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.ಮೂರನೇ ಬಾರಿ ಅಧ್ಯಕ್ಷರಾಗುವ ಟ್ರಂಪ್ ಬಯಕೆ: ಸಂವಿಧಾನ ಮೀರಿ ಸಾಧ್ಯವೇ ಎಂಬ ಚರ್ಚೆ!.ದೆಹಲಿ ಗಲಭೆ ಪ್ರಕರಣ | ಸಚಿವ ಕಪಿಲ್ ಮಿಶ್ರಾ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಗುಜರಾತ್ನ ಬನಾಸ್ಕಾಂಠ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸ್ಫೋಟ ಸಂಭವಿಸಿ ಚಾವಣಿ ಕುಸಿದ ಪರಿಣಾಮ 18 ಮಂದಿ ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ.</p><p>‘ದೀಸಾ ನಗರದ ಕೈಗಾರಿಕಾ ಪ್ರದೇಶದಲ್ಲಿ ಬೆಳಿಗ್ಗೆ 9.45ಕ್ಕೆ ಈ ದುರಂತ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮಧ್ಯಪ್ರದೇಶ ಮೂಲದ ಕಾರ್ಮಿಕರು ತಮ್ಮ ಕುಟುಂಬಸ್ಥರೊಂದಿಗೆ ಕಾರ್ಖಾನೆಯಲ್ಲಿಯೇ ವಾಸಿಸುತ್ತಿದ್ದರು. ಸ್ಫೋಟದ ಪರಿಣಾಮವಾಗಿ ಗೋದಾಮಿನ ಚಾವಣಿಯು ಕುಸಿದುಬಿದ್ದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.</p><p>‘ಅವಶೇಷಗಳಡಿ ಸಿಲುಕಿದವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಹಲವರ ದೇಹಗಳು ಪೂರ್ಣವಾಗಿ ಸುಟ್ಟು ಹೋಗಿರುವುದರಿಂದ ಗುರುತು ಹಿಡಿಯಲು ಕಷ್ಟವಾಗುತ್ತಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>‘ಈ ಸ್ಥಳದಲ್ಲಿ ಗೋದಾಮಿಗೆ ಮಾತ್ರ ಪರವಾನಿಗೆ ನೀಡಲಾಗಿದೆ, ಪಟಾಕಿ ತಯಾರಿಕೆಗೆ ಅನುಮತಿ ನೀಡಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಸ್ಥಳದಲ್ಲಿ ಅನುಮತಿ ಇಲ್ಲದೆ ಪಟಾಕಿ ತಯಾರಿಸಲಾಗುತ್ತಿತ್ತು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನೇಹಾ ಪಾಂಚಾಲ್ ಅವರು ತಿಳಿಸಿದ್ದಾರೆ.</p><p>ಸುರಕ್ಷತಾ ಕ್ರಮಗಳನ್ನು ಅನುಸರಿಸದ ಕಾರಣ ಗೋದಾಮಿನ ಪರವಾನಗಿಯನ್ನು ನವೀಕರಿಸಿರಲಿಲ್ಲ. ಪೊಲೀಸ್ ಪರಿಶೀಲನೆಯ ವೇಳೆ ಗೋದಾಮು ಖಾಲಿ ಇತ್ತು ಎಂದು ಗುಜರಾತ್ ಸರ್ಕಾರದ ವಕ್ತಾರರೊಬ್ಬರು ತಿಳಿಸಿದ್ದಾರೆ.</p><p>‘ಕಾರ್ಖಾನೆಯು ಖೂಬ್ಚಾಂದ್ ಸಿಂಧಿ ಅವರಿಗೆ ಸೇರಿದೆ. ಘಟನೆಗೆ ಕಾರಣರಾದವರ ಪತ್ತೆಗಾಗಿ ರಾಜಸ್ಥಾನ ಮತ್ತು ಅಹಮದಾಬಾದ್ಗೆ ವಿಶೇಷ ತಂಡಗಳನ್ನು ಕಳುಹಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ‘ದೀಸಾ ಪಟ್ಟಣದ ಪಟಾಕಿ ಗೋದಾಮಿನಲ್ಲಿ ಬೆಂಕಿ ಸ್ಫೋಟ ಮತ್ತು ಸ್ಲ್ಯಾಬ್ ಕುಸಿದು ಕಾರ್ಮಿಕರು ಮೃತಪಟ್ಟಿರುವುದು ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳಿಗೆ ಶೀಘ್ರ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ₹4 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಆರ್ಥಿಕ ನೆರವು ಘೋಷಿಸಿದೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.ಮೂರನೇ ಬಾರಿ ಅಧ್ಯಕ್ಷರಾಗುವ ಟ್ರಂಪ್ ಬಯಕೆ: ಸಂವಿಧಾನ ಮೀರಿ ಸಾಧ್ಯವೇ ಎಂಬ ಚರ್ಚೆ!.ದೆಹಲಿ ಗಲಭೆ ಪ್ರಕರಣ | ಸಚಿವ ಕಪಿಲ್ ಮಿಶ್ರಾ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>