‘ಸರ್ಕಾರವು ನಮ್ಮ ನಿರೀಕ್ಷೆಯನ್ನು ಮೀರಿ ಕೆಲಸ ಮಾಡಿದೆ ಎಂದು ಶೇ 26ರಷ್ಟು ಮಂದಿ ಹೇಳಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿದೆ ಎಂದು ಶೇ 36ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ. ಭಯೋತ್ಪಾದನೆಯ ವಿರುದ್ಧ ಸರ್ಕಾರದ ಗಟ್ಟಿ ನಿಲುವು, ವಿವಿಧ ದೇಶಗಳ ಜತೆಗೆ ಸಂಬಂಧ ವೃದ್ಧಿಯ ಯತ್ನ, ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ಏರಿಕೆ, ಸಂಸತ್ತಿನಲ್ಲಿ ಬಾಕಿ ಇದ್ದ ಮಸೂದೆಗಳ ಅಂಗೀಕಾರ, ಕೋವಿಡ್ ಪಿಡುಗು ನಿರ್ವಹಣೆಗೆ ಕೈಗೊಂಡ ಕ್ರಮಗಳು ಜನರ ಈ ನಿಲುವಿಗೆ ಕಾರಣ ಆಗಿರಬಹುದು’ ಎಂದು ‘ಲೋಕಲ್ ಸರ್ಕಲ್ಸ್’ ಹೇಳಿಕೊಂಡಿದೆ.