<p><strong>ಅವಂತಿಪುರ</strong>: ಪಹಲ್ಗಾಮ್ನಲ್ಲಿ ನಡೆದ ದಾಳಿಯ ಬಳಿಕ ದಕ್ಷಿಣ ಕಾಶ್ಮೀರದ ವಿವಿಧೆಡೆ ಉಗ್ರರ ನಿಗ್ರಹ ಕಾರ್ಯಾಚರಣೆ ತೀವ್ರಗೊಳಿಸಿರುವ ಸೇನಾ ಪಡೆಗಳು, ಮೂರು ದಿನಗಳಲ್ಲಿ 6 ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. </p>.<p>ಈ ಕುರಿತು ಪ್ರತಿಕ್ರಿಯಿಸಿದ ಕಾಶ್ಮೀರದ ಐಜಿಪಿ ವಿ.ಕೆ. ಬಿರ್ದಿ, ‘ಕಳೆದೊಂದು ತಿಂಗಳಿನಿಂದ ಭಯೋತ್ಪಾದಕರ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಅಲ್ಲದೆ, ಪರಿಸ್ಥಿತಿಗೆ ಅನುಗುಣವಾಗಿ ಭದ್ರತಾ ತಂಡಗಳ ಕಾರ್ಯ ತಂತ್ರಗಳಲ್ಲಿ ಬದಲಾವಣೆ ಮಾಡಲಾಗಿದೆ’ ಎಂದರು. </p>.<p>ಭದ್ರತಾ ಪಡೆಗಳ ನಡುವಿನ ಸಹಕಾರದಿಂದಾಗಿ ಮೂರು ದಿನಗಳಲ್ಲಿ ನಡೆದ ಎರಡು ಯಶಸ್ವಿ ಕಾರ್ಯಾಚರಣೆಯಲ್ಲಿ ಆರು ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇದು ಮಹತ್ವದ ಸಾಧನೆ ಎಂದು ತಿಳಿಸಿದರು. </p>.<p>ಮಂಗಳವಾರ ಮತ್ತು ಗುರುವಾರ ಶೋಪಿಯಾನ್ನ ಕೆಲ್ಲೆರ್ ಮತ್ತು ಪುಲ್ವಾಮದ ಟ್ರಾಲ್ನ ನಾಡರ್ ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ನಲ್ಲಿ ತಲಾ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅವಂತಿಪುರ</strong>: ಪಹಲ್ಗಾಮ್ನಲ್ಲಿ ನಡೆದ ದಾಳಿಯ ಬಳಿಕ ದಕ್ಷಿಣ ಕಾಶ್ಮೀರದ ವಿವಿಧೆಡೆ ಉಗ್ರರ ನಿಗ್ರಹ ಕಾರ್ಯಾಚರಣೆ ತೀವ್ರಗೊಳಿಸಿರುವ ಸೇನಾ ಪಡೆಗಳು, ಮೂರು ದಿನಗಳಲ್ಲಿ 6 ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. </p>.<p>ಈ ಕುರಿತು ಪ್ರತಿಕ್ರಿಯಿಸಿದ ಕಾಶ್ಮೀರದ ಐಜಿಪಿ ವಿ.ಕೆ. ಬಿರ್ದಿ, ‘ಕಳೆದೊಂದು ತಿಂಗಳಿನಿಂದ ಭಯೋತ್ಪಾದಕರ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಅಲ್ಲದೆ, ಪರಿಸ್ಥಿತಿಗೆ ಅನುಗುಣವಾಗಿ ಭದ್ರತಾ ತಂಡಗಳ ಕಾರ್ಯ ತಂತ್ರಗಳಲ್ಲಿ ಬದಲಾವಣೆ ಮಾಡಲಾಗಿದೆ’ ಎಂದರು. </p>.<p>ಭದ್ರತಾ ಪಡೆಗಳ ನಡುವಿನ ಸಹಕಾರದಿಂದಾಗಿ ಮೂರು ದಿನಗಳಲ್ಲಿ ನಡೆದ ಎರಡು ಯಶಸ್ವಿ ಕಾರ್ಯಾಚರಣೆಯಲ್ಲಿ ಆರು ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇದು ಮಹತ್ವದ ಸಾಧನೆ ಎಂದು ತಿಳಿಸಿದರು. </p>.<p>ಮಂಗಳವಾರ ಮತ್ತು ಗುರುವಾರ ಶೋಪಿಯಾನ್ನ ಕೆಲ್ಲೆರ್ ಮತ್ತು ಪುಲ್ವಾಮದ ಟ್ರಾಲ್ನ ನಾಡರ್ ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ನಲ್ಲಿ ತಲಾ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>