<p><strong>ಹೈದರಾಬಾದ್:</strong> ಸಿಪಿಐನ ಆರು ಮಂದಿ ಹಿರಿಯ ಪದಾಧಿಕಾರಿಗಳು ಸೇರಿದಂತೆ 41 ಮಂದಿ ಕಾರ್ಯಕರ್ತರು ತೆಲಂಗಾಣ ಪೊಲೀಸರ ಎದುರು ಶರಣಾಗಿದ್ದಾರೆ. </p><p>ಈ ಬೆಳವಣಿಗೆಯು ನಿಷೇಧಿತ ಸಿಪಿಐ ಸಂಘಟನೆಗೆ ತೀವ್ರ ಹಿನ್ನಡೆಯನ್ನು ತಂದಿದೆ. ‘ಸಿಪಿಐ ಕಾರ್ಯಕರ್ತರು ಶಸ್ತ್ರತ್ಯಾಗ ಮಾಡಿ ಮುಖ್ಯವಾಹಿನಿಗೆ ಸೇರ್ಪಡೆಯಾಗಿದ್ದಾರೆ’ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಬಿ.ಶಿವಧಾರ್ ರೆಡ್ಡಿ ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p><p>‘ಶರಣಾದ ನಕ್ಸಲರು 24 ಬಂದೂಕುಗಳು ಮತ್ತು 733 ಜೀವಂತ ಗುಂಡುಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ’ ಎಂದಿದ್ದಾರೆ.</p><p>‘ಸಿಪಿಐ ಸಂಘಟನೆಯು ತನ್ನ ಸದಸ್ಯರನ್ನು ಎಲ್ಲೆಂದರಲ್ಲಿ ಮನಬಂದಂತೆ ನಿಯೋಜಿಸುತ್ತಿತ್ತು. ಸದಸ್ಯರ ಅಭಿಪ್ರಾಯವನ್ನೇ ಕೇಳುತ್ತಿರಲಿಲ್ಲ. ಇದರಿಂದ ಬೇಸತ್ತ ಸದಸ್ಯರು ಶರಣಾಗತಿ ನಿರ್ಧಾರ ಕೈಗೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.</p><p><strong>ಛತ್ತೀಸಗಢ: ನಕ್ಸಲ್ ಹತ್ಯೆ</strong></p><p>ಬಿಜಾಪುರ (ಪಿಟಿಐ): ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ್ ಮೃತಪಟ್ಟಿದ್ದಾನೆ.</p><p>ಮೃತನನ್ನು ಫಗ್ನು ಮಾದ್ವಿ (35) ಎಂದು ಗುರುತಿಸಲಾಗಿದ್ದು, ಈತನ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು. </p><p>ಭೈರಾಮಗಢ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಬಗ್ಗೆ ಮಾಹಿತಿ ದೊರೆತ ಕಾರಣ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಮುಂದಾಗಿದ್ದಾರೆ. </p><p>ಘಟನಾ ಸ್ಥಳದಿಂದ .303 ರೈಫಲ್, 9 ಎಂಎಂ ಪಿಸ್ತೂಲ್, ಕೆಲವು ಸ್ಫೋಟಕಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಸಿಪಿಐನ ಆರು ಮಂದಿ ಹಿರಿಯ ಪದಾಧಿಕಾರಿಗಳು ಸೇರಿದಂತೆ 41 ಮಂದಿ ಕಾರ್ಯಕರ್ತರು ತೆಲಂಗಾಣ ಪೊಲೀಸರ ಎದುರು ಶರಣಾಗಿದ್ದಾರೆ. </p><p>ಈ ಬೆಳವಣಿಗೆಯು ನಿಷೇಧಿತ ಸಿಪಿಐ ಸಂಘಟನೆಗೆ ತೀವ್ರ ಹಿನ್ನಡೆಯನ್ನು ತಂದಿದೆ. ‘ಸಿಪಿಐ ಕಾರ್ಯಕರ್ತರು ಶಸ್ತ್ರತ್ಯಾಗ ಮಾಡಿ ಮುಖ್ಯವಾಹಿನಿಗೆ ಸೇರ್ಪಡೆಯಾಗಿದ್ದಾರೆ’ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಬಿ.ಶಿವಧಾರ್ ರೆಡ್ಡಿ ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p><p>‘ಶರಣಾದ ನಕ್ಸಲರು 24 ಬಂದೂಕುಗಳು ಮತ್ತು 733 ಜೀವಂತ ಗುಂಡುಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ’ ಎಂದಿದ್ದಾರೆ.</p><p>‘ಸಿಪಿಐ ಸಂಘಟನೆಯು ತನ್ನ ಸದಸ್ಯರನ್ನು ಎಲ್ಲೆಂದರಲ್ಲಿ ಮನಬಂದಂತೆ ನಿಯೋಜಿಸುತ್ತಿತ್ತು. ಸದಸ್ಯರ ಅಭಿಪ್ರಾಯವನ್ನೇ ಕೇಳುತ್ತಿರಲಿಲ್ಲ. ಇದರಿಂದ ಬೇಸತ್ತ ಸದಸ್ಯರು ಶರಣಾಗತಿ ನಿರ್ಧಾರ ಕೈಗೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.</p><p><strong>ಛತ್ತೀಸಗಢ: ನಕ್ಸಲ್ ಹತ್ಯೆ</strong></p><p>ಬಿಜಾಪುರ (ಪಿಟಿಐ): ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ್ ಮೃತಪಟ್ಟಿದ್ದಾನೆ.</p><p>ಮೃತನನ್ನು ಫಗ್ನು ಮಾದ್ವಿ (35) ಎಂದು ಗುರುತಿಸಲಾಗಿದ್ದು, ಈತನ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು. </p><p>ಭೈರಾಮಗಢ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಬಗ್ಗೆ ಮಾಹಿತಿ ದೊರೆತ ಕಾರಣ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಮುಂದಾಗಿದ್ದಾರೆ. </p><p>ಘಟನಾ ಸ್ಥಳದಿಂದ .303 ರೈಫಲ್, 9 ಎಂಎಂ ಪಿಸ್ತೂಲ್, ಕೆಲವು ಸ್ಫೋಟಕಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>