<p><strong>ಜಲ್ನಾ:</strong> ಮರಾಠರ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೋರಿ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಮಾಡುವುದಾಗಿ ಹೇಳಿದ್ದು ದಿನಾಂಕವನ್ನು ಘೋಷಿಸಿದ್ದಾರೆ.</p><p>ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠ ಸಮುದಾಯದವರು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದರು.</p><p>ಯಾರೂ ಮನೆಯಲ್ಲಿ ಉಳಿಯಬಾರದು. ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬನ್ನಿ, ನಮ್ಮ ಒಕ್ಕೂಟದ ಶಕ್ತಿಯನ್ನು ತೋರಿಸೋಣ ಎಂದು ಹೇಳಿದರು.</p><p>ಮುಂಬರುವ ಜನವರಿ 25ರಿಂದ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಲಾಗುವುದು ಎಂದು ಜಾರಂಗೆ ಹೇಳಿದರು.</p><p>ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ನಮಗೆ ಮೋಸ ಮಾಡಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ನಾವು ಅವರನ್ನು ಬಿಡುವುದಿಲ್ಲ ಎಂದು ಹೇಳಿದರು.</p><p>ಕಳೆದ ಒಂದು ವರ್ಷದಲ್ಲಿ ಆರು ಉಪವಾಸ ಸತ್ಯಾಗ್ರಹಗಳನ್ನು ನಡೆಸಲಾಗಿದೆ. ಇದು ಸ್ವಯಂಪ್ರೇರಿತವಾಗಿದ್ದು ಮರಾಠಾ ಸಮುದಾಯದ ಯಾವುದೇ ಸದಸ್ಯರು ಭಾಗವಹಿಸಬಹುದು ಎಂದು ಒತ್ತಿಹೇಳಿದರು. ಯಾರು ಬೇಕಾದರೂ ಸೇರಬಹುದು. ಯಾರ ಮೇಲೂ ಬಲವಂತ ಅಥವಾ ಒತ್ತಡವಿಲ್ಲ ಎಂದು ಜಾರಂಗೆ ಸ್ಪಷ್ಟಪಡಿಸಿದರು.</p><p>ಇದೇ ವರ್ಷ ಫೆಬ್ರುವರಿಯಲ್ಲಿ ಶಿಕ್ಷಣ, ಸರ್ಕಾರಿ ಉದ್ಯೋಗಗಳಲ್ಲಿ ಮರಾಠಾಗಳಿಗೆ ಪ್ರತ್ಯೇಕ ವರ್ಗದ ಅಡಿಯಲ್ಲಿ ಶೇ. 10ರಷ್ಟು ಮೀಸಲಾತಿ ಒದಗಿಸುವ ಮಸೂದೆಯನ್ನು ಮಹಾರಾಷ್ಟ್ರ ಸರ್ಕಾರ ಅಂಗೀಕರಿಸಿದೆ. ಆದರೆ ಜರಾಂಗೆ ಅವರು ಮರಠಾ ಸಮುದಾಯಕ್ಕೆ ಓಬಿಸಿ ಅಡಿಯಲ್ಲಿ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಲ್ನಾ:</strong> ಮರಾಠರ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೋರಿ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಮಾಡುವುದಾಗಿ ಹೇಳಿದ್ದು ದಿನಾಂಕವನ್ನು ಘೋಷಿಸಿದ್ದಾರೆ.</p><p>ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠ ಸಮುದಾಯದವರು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದರು.</p><p>ಯಾರೂ ಮನೆಯಲ್ಲಿ ಉಳಿಯಬಾರದು. ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬನ್ನಿ, ನಮ್ಮ ಒಕ್ಕೂಟದ ಶಕ್ತಿಯನ್ನು ತೋರಿಸೋಣ ಎಂದು ಹೇಳಿದರು.</p><p>ಮುಂಬರುವ ಜನವರಿ 25ರಿಂದ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಲಾಗುವುದು ಎಂದು ಜಾರಂಗೆ ಹೇಳಿದರು.</p><p>ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ನಮಗೆ ಮೋಸ ಮಾಡಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ನಾವು ಅವರನ್ನು ಬಿಡುವುದಿಲ್ಲ ಎಂದು ಹೇಳಿದರು.</p><p>ಕಳೆದ ಒಂದು ವರ್ಷದಲ್ಲಿ ಆರು ಉಪವಾಸ ಸತ್ಯಾಗ್ರಹಗಳನ್ನು ನಡೆಸಲಾಗಿದೆ. ಇದು ಸ್ವಯಂಪ್ರೇರಿತವಾಗಿದ್ದು ಮರಾಠಾ ಸಮುದಾಯದ ಯಾವುದೇ ಸದಸ್ಯರು ಭಾಗವಹಿಸಬಹುದು ಎಂದು ಒತ್ತಿಹೇಳಿದರು. ಯಾರು ಬೇಕಾದರೂ ಸೇರಬಹುದು. ಯಾರ ಮೇಲೂ ಬಲವಂತ ಅಥವಾ ಒತ್ತಡವಿಲ್ಲ ಎಂದು ಜಾರಂಗೆ ಸ್ಪಷ್ಟಪಡಿಸಿದರು.</p><p>ಇದೇ ವರ್ಷ ಫೆಬ್ರುವರಿಯಲ್ಲಿ ಶಿಕ್ಷಣ, ಸರ್ಕಾರಿ ಉದ್ಯೋಗಗಳಲ್ಲಿ ಮರಾಠಾಗಳಿಗೆ ಪ್ರತ್ಯೇಕ ವರ್ಗದ ಅಡಿಯಲ್ಲಿ ಶೇ. 10ರಷ್ಟು ಮೀಸಲಾತಿ ಒದಗಿಸುವ ಮಸೂದೆಯನ್ನು ಮಹಾರಾಷ್ಟ್ರ ಸರ್ಕಾರ ಅಂಗೀಕರಿಸಿದೆ. ಆದರೆ ಜರಾಂಗೆ ಅವರು ಮರಠಾ ಸಮುದಾಯಕ್ಕೆ ಓಬಿಸಿ ಅಡಿಯಲ್ಲಿ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>