ಛತ್ರಪತಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಜರಾಂಗೆ, ‘ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾತಿ, ಸರ್ಕಾರಿ ಕೆಲಸಗಳಿಗೆ ನೇಮಕಾತಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲು ಒತ್ತಾಯಿಸಿ ಜೂನ್ 8ರಂದು ರ್ಯಾಲಿ ಆಯೋಜಿಸಲಾಗುವುದು. ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಮಗೆ ಮೀಸಲಾತಿ ಬೇಕಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಡಿಯಲ್ಲಿ ನಮಗೆ ಶೇ 10 ಮೀಸಲಾತಿ ಕಲ್ಪಿಸಲಾಗಿದೆ. ಆದರೆ, ಇದು ಪ್ರಯೋಜನವೇ ಇಲ್ಲ ಎಂಬುದು ಈಗಾಗಲೇ ನಡೆಯುತ್ತಿರುವ ಪೊಲೀಸ್ ನೇಮಕಾತಿಯಲ್ಲಿ ಸಾಬೀತಾಗಿದೆ’ ಎಂದರು.