<p>Maratha quota: Jarange ends fast after talks with govt delegation</p> <p>ಜಲ್ನಾ: ಮಹಾರಾಷ್ಟ್ರದ ಸರ್ಕಾರಿ ನಿಯೋಗದ ಜೊತೆಗಿನ ಮಾತುಕತೆ ಬಳಿಕ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.</p><p>ಶನಿವಾರ ಬೆಳಿಗ್ಗೆ ಜಲ್ನಾ ಜಿಲ್ಲೆಯ ತಮ್ಮ ಅಂತರವಾಲಿ ಸಾರತಿ ಗ್ರಾಮದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಜರಾಂಗೆ, ಮಧ್ಯರಾತ್ರಿಯ ನಂತರ ಉಪವಾಸ ಕೊನೆಗೊಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಇದು ಅವರ ಒಂಬತ್ತನೇ ಉಪವಾಸ ಸತ್ಯಾಗ್ರಹವಾಗಿದೆ.</p><p>ಶನಿವಾರ ಸುಡುವ ಬಿಸಿಲನ್ನೂ ಲೆಕ್ಕಿಸದೇ ಜರಾಂಗೆ ಉಪವಾಸ ಕುಳಿತು ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಇದೇ ವೇಳೆ, ತಮ್ಮನ್ನು ಭೇಟಿಯಾದ ಸರ್ಕಾರಿ ನಿಯೋಗಕ್ಕೆ 12 ಅಂಶಗಳ ಪ್ರಸ್ತಾವನೆಯನ್ನು ನೀಡಿದ್ದಾರೆ.</p><p>ಸರ್ಕಾರಿ ತಂಡದ ನೇತೃತ್ವವನ್ನು ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಬಿಜೆಪಿ ಎಂಎಲ್ಸಿ ಪ್ರಸಾದ್ ಲಾಡ್ ವಹಿಸಿದ್ದರು.</p><p>ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಜರಾಂಗೆ, ಈಗಾಗಲೇ ಗುರುತಿಸಲಾದ 58 ಲಕ್ಷ ಕುಂಬಿ ದಾಖಲೆಗಳ( ಹೈದರಾಬಾದ್ ನಿಜಾಮರ ಕಾಲವೂ ಸೇರಿದಂತೆ ಮಹಾರಾಷ್ಟ್ರದ ಐತಿಹಾಸಿಕ ಮತ್ತು ಸರ್ಕಾರಿ ದಾಖಲೆಗಳಾಗಿವೆ) ಆಧಾರದ ಮೇಲೆ ಪ್ರಮಾಣಪತ್ರಗಳನ್ನು ನೀಡಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿದರು. ಈ ದಾಖಲೆಗಳನ್ನು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಪ್ರದರ್ಶಿಸಲಾಗುವುದು. ಆದರೆ, ಅನುಷ್ಠಾನದ ಜವಾಬ್ದಾರಿ ವಿಭಾಗೀಯ ಆಯುಕ್ತರ ಕಚೇರಿಯ ಮೇಲಿರುತ್ತದೆ ಎಂದು ಹೇಳಿದರು. </p><p>ಮಹಾರಾಷ್ಟ್ರದಲ್ಲಿ ಮರಾಠ-ಕುಂಬಿ ಸಮುದಾಯದವರಿಗೆ ಮೀಸಲಾತಿ ಪಡೆಯಲು ಕುಂಬಿ ಪ್ರಮಾಣಪತ್ರ ಅತ್ಯಗತ್ಯವಾಗಿದೆ.</p><p>ದಾಖಲೆಗಳಿದ್ದರೂ ಪ್ರಮಾಣಪತ್ರಗಳನ್ನು ನೀಡಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜರಾಂಗೆ ಒತ್ತಾಯಿಸಿದ್ದಾರೆ. ಈ ಕುರಿತಂತೆ ಅಧಿಕೃತ ಆದೇಶಗಳನ್ನು ಹೊರಡಿಸಲು ಮತ್ತು ಅವುಗಳನ್ನು ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲು ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.</p><p>ಮರಾಠ ಮೀಸಲಾತಿ ಚಳವಳಿಯ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದವರ ಕುಟುಂಬಗಳಿಗೆ 15 ದಿನಗಳಲ್ಲಿ ಆರ್ಥಿಕ ನೆರವು ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಜರಾಂಗೆ ತಿಳಿಸಿದ್ದಾರೆ.</p><p>ಜರಾಂಗೆ ಉಪವಾಸ ಅಂತ್ಯಗೊಳಿಸುವ ಮೊದಲು, ಸರ್ಕಾರಿ ವೈದ್ಯರು ಸ್ಥಳಕ್ಕೆ ತೆರಳಿ ಅವರ ಆರೋಗ್ಯ ತಪಾಸಣೆ ನಡೆಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>Maratha quota: Jarange ends fast after talks with govt delegation</p> <p>ಜಲ್ನಾ: ಮಹಾರಾಷ್ಟ್ರದ ಸರ್ಕಾರಿ ನಿಯೋಗದ ಜೊತೆಗಿನ ಮಾತುಕತೆ ಬಳಿಕ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.</p><p>ಶನಿವಾರ ಬೆಳಿಗ್ಗೆ ಜಲ್ನಾ ಜಿಲ್ಲೆಯ ತಮ್ಮ ಅಂತರವಾಲಿ ಸಾರತಿ ಗ್ರಾಮದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಜರಾಂಗೆ, ಮಧ್ಯರಾತ್ರಿಯ ನಂತರ ಉಪವಾಸ ಕೊನೆಗೊಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಇದು ಅವರ ಒಂಬತ್ತನೇ ಉಪವಾಸ ಸತ್ಯಾಗ್ರಹವಾಗಿದೆ.</p><p>ಶನಿವಾರ ಸುಡುವ ಬಿಸಿಲನ್ನೂ ಲೆಕ್ಕಿಸದೇ ಜರಾಂಗೆ ಉಪವಾಸ ಕುಳಿತು ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಇದೇ ವೇಳೆ, ತಮ್ಮನ್ನು ಭೇಟಿಯಾದ ಸರ್ಕಾರಿ ನಿಯೋಗಕ್ಕೆ 12 ಅಂಶಗಳ ಪ್ರಸ್ತಾವನೆಯನ್ನು ನೀಡಿದ್ದಾರೆ.</p><p>ಸರ್ಕಾರಿ ತಂಡದ ನೇತೃತ್ವವನ್ನು ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಬಿಜೆಪಿ ಎಂಎಲ್ಸಿ ಪ್ರಸಾದ್ ಲಾಡ್ ವಹಿಸಿದ್ದರು.</p><p>ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಜರಾಂಗೆ, ಈಗಾಗಲೇ ಗುರುತಿಸಲಾದ 58 ಲಕ್ಷ ಕುಂಬಿ ದಾಖಲೆಗಳ( ಹೈದರಾಬಾದ್ ನಿಜಾಮರ ಕಾಲವೂ ಸೇರಿದಂತೆ ಮಹಾರಾಷ್ಟ್ರದ ಐತಿಹಾಸಿಕ ಮತ್ತು ಸರ್ಕಾರಿ ದಾಖಲೆಗಳಾಗಿವೆ) ಆಧಾರದ ಮೇಲೆ ಪ್ರಮಾಣಪತ್ರಗಳನ್ನು ನೀಡಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿದರು. ಈ ದಾಖಲೆಗಳನ್ನು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಪ್ರದರ್ಶಿಸಲಾಗುವುದು. ಆದರೆ, ಅನುಷ್ಠಾನದ ಜವಾಬ್ದಾರಿ ವಿಭಾಗೀಯ ಆಯುಕ್ತರ ಕಚೇರಿಯ ಮೇಲಿರುತ್ತದೆ ಎಂದು ಹೇಳಿದರು. </p><p>ಮಹಾರಾಷ್ಟ್ರದಲ್ಲಿ ಮರಾಠ-ಕುಂಬಿ ಸಮುದಾಯದವರಿಗೆ ಮೀಸಲಾತಿ ಪಡೆಯಲು ಕುಂಬಿ ಪ್ರಮಾಣಪತ್ರ ಅತ್ಯಗತ್ಯವಾಗಿದೆ.</p><p>ದಾಖಲೆಗಳಿದ್ದರೂ ಪ್ರಮಾಣಪತ್ರಗಳನ್ನು ನೀಡಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜರಾಂಗೆ ಒತ್ತಾಯಿಸಿದ್ದಾರೆ. ಈ ಕುರಿತಂತೆ ಅಧಿಕೃತ ಆದೇಶಗಳನ್ನು ಹೊರಡಿಸಲು ಮತ್ತು ಅವುಗಳನ್ನು ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲು ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.</p><p>ಮರಾಠ ಮೀಸಲಾತಿ ಚಳವಳಿಯ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದವರ ಕುಟುಂಬಗಳಿಗೆ 15 ದಿನಗಳಲ್ಲಿ ಆರ್ಥಿಕ ನೆರವು ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಜರಾಂಗೆ ತಿಳಿಸಿದ್ದಾರೆ.</p><p>ಜರಾಂಗೆ ಉಪವಾಸ ಅಂತ್ಯಗೊಳಿಸುವ ಮೊದಲು, ಸರ್ಕಾರಿ ವೈದ್ಯರು ಸ್ಥಳಕ್ಕೆ ತೆರಳಿ ಅವರ ಆರೋಗ್ಯ ತಪಾಸಣೆ ನಡೆಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>