ಜಾಲ್ನಾ: ಮರಾಠ ಸಮುದಾಯಕ್ಕೆ ಒಬಿಸಿ ಪ್ರವರ್ಗದಲ್ಲಿ ಮೀಸಲಾತಿ ನೀಡಬೇಕು ಎಂಬ ಆಗ್ರಹದೊಂದಿಗೆ ಹೋರಾಟ ನಡೆಸುತ್ತಿರುವ ಮನೋಜ್ ಜರಾಂಗೆ ಅವರು, ಕಳೆದ ತಿಂಗಳು ಹೊರಡಿಸಿರುವ ಕರಡು ಅಧಿಸೂಚನೆಯಲ್ಲಿ ಇರುವ ‘ರಕ್ತಸಂಬಂಧಿಗಳು’ ಎಂಬ ಪದದ ಅರ್ಥವ್ಯಾಪ್ತಿಯ ಬಗ್ಗೆ ವಿವರಣೆ ನೀಡಲು ಸರ್ಕಾರ ವಿಫಲವಾದಲ್ಲಿ ಫೆಬ್ರುವರಿ 10ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.