<p><strong>ಪುಣೆ:</strong> ಮಹಾರಾಷ್ಟ್ರದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗೆ ಒತ್ತಾಯಿಸಿ ಮರಾಠ ಸಮುದಾಯ ನಡೆಸುತ್ತಿರುವ ಪ್ರತಿಭಟನೆಯ ಕಿಚ್ಚು ಚಕನ್ ಮತ್ತು ಖೇದ್ ಪ್ರದೇಶಗಳಿಗೂ ವ್ಯಾಪಿಸಿದೆ.ಈ ಪ್ರತಿಭಟನೆಯಲ್ಲಿ 20 ವಾಹನಗಳು ಸುಟ್ಟು ಭಸ್ಮಗೊಂಡಿದ್ದು, 40 ವಾಹನಗಳಿಗೆ ಹಾನಿಯಾಗಿದೆ.</p>.<p>ಪ್ರತಿಭಟನಾಕಾರರು ಪುಣೆ-ನಾಶಿಕ್ ರಾಷ್ಟ್ರೀಯ ಹೆದ್ದಾರಿಯನ್ನು7 ಗಂಟೆಗಳ ಕಾಲ ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಹಿಂಸಾಚಾರದಲ್ಲಿ ಏಳು ಪೊಲೀಸರಿಗೆ ಗಾಯಗಳಾಗಿವೆ.</p>.<p>ಸೊಲ್ಲಾಪುರದಲ್ಲೂ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಬಸ್ಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.</p>.<p>35 ವರ್ಷದ ವ್ಯಕ್ತಿಯೊಬ್ಬ ಔರಾಂಗಾಬಾದ್ನಲ್ಲಿ ಚಲಿಸುತ್ತಿರುವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಜೈಸಿಂಗ್ ಎಂದು ಈತನನ್ನು ಗುರುತಿಸಲಾಗಿದೆ. ಮೀಸಲಾತಿಗಾಗಿ ಜೀವ ಕೊಡುವುದಾಗಿ ಈತ ಆತ್ಮಹತ್ಯೆಗೆ ಮುನ್ನ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದ. ಈ ಸಂದೇಶವನ್ನುವ್ಯಾಟ್ಸ್ ಆಪ್ನಲ್ಲೂ ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಮಹಾರಾಷ್ಟ್ರದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗೆ ಒತ್ತಾಯಿಸಿ ಮರಾಠ ಸಮುದಾಯ ನಡೆಸುತ್ತಿರುವ ಪ್ರತಿಭಟನೆಯ ಕಿಚ್ಚು ಚಕನ್ ಮತ್ತು ಖೇದ್ ಪ್ರದೇಶಗಳಿಗೂ ವ್ಯಾಪಿಸಿದೆ.ಈ ಪ್ರತಿಭಟನೆಯಲ್ಲಿ 20 ವಾಹನಗಳು ಸುಟ್ಟು ಭಸ್ಮಗೊಂಡಿದ್ದು, 40 ವಾಹನಗಳಿಗೆ ಹಾನಿಯಾಗಿದೆ.</p>.<p>ಪ್ರತಿಭಟನಾಕಾರರು ಪುಣೆ-ನಾಶಿಕ್ ರಾಷ್ಟ್ರೀಯ ಹೆದ್ದಾರಿಯನ್ನು7 ಗಂಟೆಗಳ ಕಾಲ ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಹಿಂಸಾಚಾರದಲ್ಲಿ ಏಳು ಪೊಲೀಸರಿಗೆ ಗಾಯಗಳಾಗಿವೆ.</p>.<p>ಸೊಲ್ಲಾಪುರದಲ್ಲೂ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಬಸ್ಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.</p>.<p>35 ವರ್ಷದ ವ್ಯಕ್ತಿಯೊಬ್ಬ ಔರಾಂಗಾಬಾದ್ನಲ್ಲಿ ಚಲಿಸುತ್ತಿರುವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಜೈಸಿಂಗ್ ಎಂದು ಈತನನ್ನು ಗುರುತಿಸಲಾಗಿದೆ. ಮೀಸಲಾತಿಗಾಗಿ ಜೀವ ಕೊಡುವುದಾಗಿ ಈತ ಆತ್ಮಹತ್ಯೆಗೆ ಮುನ್ನ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದ. ಈ ಸಂದೇಶವನ್ನುವ್ಯಾಟ್ಸ್ ಆಪ್ನಲ್ಲೂ ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>