<p><strong>ಮುಂಬೈ</strong>: ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದಿಂದ ಮರಾಠರಿಗೆ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಒಬಿಸಿಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಪುನರುಚ್ಚರಿಸಿದ್ದಾರೆ.</p>.<p>‘ರಾಜ್ಯದಲ್ಲಿ ಜಾತಿಗಣತಿ ನಡೆಸುವಂತೆ’ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರೂ ಆಗಿರುವ ಭುಜಬಲ್ ಆಗ್ರಹಿಸಿದ್ದಾರೆ.</p>.<p>ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಒಬಿಸಿ ಹೋರಾಟಗಾರರಾದ ಲಕ್ಷ್ಮಣ ಹಾಕೆ ಹಾಗೂ ನವನಾಥ್ ವಾಘ್ಮೋರೆ ಅವರನ್ನು ಸರ್ಕಾರದ ನಿಯೋಗವೊಂದು ಸೋಮವಾರ ಭೇಟಿಯಾಗಿ ಧರಣಿ ಕೈಬಿಡುವಂತೆ ಮನವಿ ಮಾಡಿತು. ನಿಯೋಗದ ಈ ಕೋರಿಕೆಯನ್ನು ಮುಷ್ಕರ ನಿರತರಿಬ್ಬರು ನಿರಾಕರಿಸಿದ ಬೆನ್ನಿಗೆ ಸಚಿವರು ಈ ಹೇಳಿಕೆ ನೀಡಿದ್ದಾರೆ.</p>.<p>‘ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಒಬಿಸಿ ಕೋಟಾಗೆ ತೊಂದರೆ ಆಗಬಾರದು ಎಂಬುದಷ್ಟೇ’ ನಮ್ಮ ಬೇಡಿಕೆ ಎಂದು ಪ್ರತಿಭಟನಕಾರರು ಹೇಳಿದ್ದಾರೆ.</p>.<p>ಕುಣಬಿಗಳನ್ನು ಮರಾಠರ ರಕ್ತ ಸಂಬಂಧಿಗಳು ಎಂದು ಉಲ್ಲೇಖಿಸಿ ಮಹಾರಾಷ್ಟ್ರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಮುಷ್ಕರ ನಡೆಸುತ್ತಿರುವ ಹೋರಾಟಗಾರರು ಒತ್ತಾಯಿಸಿದ್ದಾರೆ.</p>.<p>‘ಒಬಿಸಿ ಕೋಟಾದಿಂದ ಮರಾಠರಿಗೆ ಮೀಸಲಾತಿ ನೀಡಲು ಆಗುವುದಿಲ್ಲ. ಇದನ್ನು ನಾವು ಹೇಳುತ್ತಿಲ್ಲ. ಮೀಸಲಾತಿಗೆ ಸಂಬಂಧಿಸಿದಂತೆ ಈ ಹಿಂದೆ ರಚಿಸಿದ್ದ ನಾಲ್ಕು ಆಯೋಗಗಳೇ ಹೇಳಿವೆ. ಸುಪ್ರೀಂ ಕೋರ್ಟ್ ಸಹ ಇದನ್ನೇ ಹೇಳಿದೆ’ ಆದರೆ, ಇದೀಗ ಮತ್ತೆ ಒಬಿಸಿ ಕೋಟಾದಡಿ ಮೀಸಲಾತಿ ನೀಡುವಂತೆ ಬೇಡಿಕೆ ಮಂಡಿಸಲಾಗುತ್ತಿದೆ ಎಂದು ಮರಾಠ ಹೋರಾಟಗಾರ ಮನೋಜ್ ಜರಾಂಗೆ ಅವರ ಪ್ರತಿಭಟನೆಯನ್ನು ಉಲ್ಲೇಖಿಸಿ ಸಚಿವ ಛಗನ್ ಹೇಳಿದರು.</p>.<p>ಒಬಿಸಿ ಸಮುದಾಯಕ್ಕೆ ಹೆಚ್ಚಿನ ಹಣವನ್ನು ನೀಡಲು ಜಾತಿ ಜನಗಣತಿಯು ದಾರಿ ಮಾಡಿಕೊಡುತ್ತದೆ ಎಂದು ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದಿಂದ ಮರಾಠರಿಗೆ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಒಬಿಸಿಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಪುನರುಚ್ಚರಿಸಿದ್ದಾರೆ.</p>.<p>‘ರಾಜ್ಯದಲ್ಲಿ ಜಾತಿಗಣತಿ ನಡೆಸುವಂತೆ’ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರೂ ಆಗಿರುವ ಭುಜಬಲ್ ಆಗ್ರಹಿಸಿದ್ದಾರೆ.</p>.<p>ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಒಬಿಸಿ ಹೋರಾಟಗಾರರಾದ ಲಕ್ಷ್ಮಣ ಹಾಕೆ ಹಾಗೂ ನವನಾಥ್ ವಾಘ್ಮೋರೆ ಅವರನ್ನು ಸರ್ಕಾರದ ನಿಯೋಗವೊಂದು ಸೋಮವಾರ ಭೇಟಿಯಾಗಿ ಧರಣಿ ಕೈಬಿಡುವಂತೆ ಮನವಿ ಮಾಡಿತು. ನಿಯೋಗದ ಈ ಕೋರಿಕೆಯನ್ನು ಮುಷ್ಕರ ನಿರತರಿಬ್ಬರು ನಿರಾಕರಿಸಿದ ಬೆನ್ನಿಗೆ ಸಚಿವರು ಈ ಹೇಳಿಕೆ ನೀಡಿದ್ದಾರೆ.</p>.<p>‘ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಒಬಿಸಿ ಕೋಟಾಗೆ ತೊಂದರೆ ಆಗಬಾರದು ಎಂಬುದಷ್ಟೇ’ ನಮ್ಮ ಬೇಡಿಕೆ ಎಂದು ಪ್ರತಿಭಟನಕಾರರು ಹೇಳಿದ್ದಾರೆ.</p>.<p>ಕುಣಬಿಗಳನ್ನು ಮರಾಠರ ರಕ್ತ ಸಂಬಂಧಿಗಳು ಎಂದು ಉಲ್ಲೇಖಿಸಿ ಮಹಾರಾಷ್ಟ್ರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಮುಷ್ಕರ ನಡೆಸುತ್ತಿರುವ ಹೋರಾಟಗಾರರು ಒತ್ತಾಯಿಸಿದ್ದಾರೆ.</p>.<p>‘ಒಬಿಸಿ ಕೋಟಾದಿಂದ ಮರಾಠರಿಗೆ ಮೀಸಲಾತಿ ನೀಡಲು ಆಗುವುದಿಲ್ಲ. ಇದನ್ನು ನಾವು ಹೇಳುತ್ತಿಲ್ಲ. ಮೀಸಲಾತಿಗೆ ಸಂಬಂಧಿಸಿದಂತೆ ಈ ಹಿಂದೆ ರಚಿಸಿದ್ದ ನಾಲ್ಕು ಆಯೋಗಗಳೇ ಹೇಳಿವೆ. ಸುಪ್ರೀಂ ಕೋರ್ಟ್ ಸಹ ಇದನ್ನೇ ಹೇಳಿದೆ’ ಆದರೆ, ಇದೀಗ ಮತ್ತೆ ಒಬಿಸಿ ಕೋಟಾದಡಿ ಮೀಸಲಾತಿ ನೀಡುವಂತೆ ಬೇಡಿಕೆ ಮಂಡಿಸಲಾಗುತ್ತಿದೆ ಎಂದು ಮರಾಠ ಹೋರಾಟಗಾರ ಮನೋಜ್ ಜರಾಂಗೆ ಅವರ ಪ್ರತಿಭಟನೆಯನ್ನು ಉಲ್ಲೇಖಿಸಿ ಸಚಿವ ಛಗನ್ ಹೇಳಿದರು.</p>.<p>ಒಬಿಸಿ ಸಮುದಾಯಕ್ಕೆ ಹೆಚ್ಚಿನ ಹಣವನ್ನು ನೀಡಲು ಜಾತಿ ಜನಗಣತಿಯು ದಾರಿ ಮಾಡಿಕೊಡುತ್ತದೆ ಎಂದು ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>