<p><strong>ಮುಂಬೈ:</strong> ಮಹಾರಾಷ್ಟ್ರದ ಮಾರಾಠಾವಾಡ ಪ್ರಾಂತ್ಯದಲ್ಲಿ ಉಂಟಾಗಿರುವ ಪ್ರವಾಹದಿಂದ ಸಂತ್ರಸ್ತರಾಗಿರುವವರ ಪುನರ್ವಸತಿ ಕಾರ್ಯಕ್ಕೆ ಬೆಂಬಲ ನೀಡಲು ಆಡಳಿತರೂಢ ಬಿಜೆಪಿ, ಶಿವಸೇನಾ ಹಾಗೂ ಎನ್ಸಿಪಿ ಮೈತ್ರಿಕೂಟ ‘ಮಹಾಯುತಿ’ಯ ಶಾಸಕರು ಹಾಗೂ ಸಚಿವರು ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದಾನ ಮಾಡಲಿದ್ದಾರೆ.</p>.ಪ್ರವಾಹ ಸಂತ್ರಸ್ತ ರೈತರಿಗೆ ಒಂದು ತಿಂಗಳ ಸಂಬಳ ನೀಡುತ್ತೇನೆ: ಮಹಾರಾಷ್ಟ್ರ ಸಚಿವ.<p> ತಮ್ಮ ಪಕ್ಷದ ಸಂಸದರೂ ಒಂದು ತಿಂಗಳ ವೇತನವನ್ನು ನೀಡಲಿದ್ದಾರೆ ಎಂದು ಬಿಜೆಪಿ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಪಕ್ಷ ಪ್ರತ್ಯೇಕವಾಗಿ ಹೇಳಿದೆ.</p><p>ಮರಾಠವಾಡ ಪ್ರಾಂತ್ಯದಲ್ಲಿ ಸುರಿದ ಭಾರಿ ಮಳೆಗೆ ಪ್ರವಾಹ ಉಂಟಾಗಿದ್ದು, ಸೋಲಾಪುರ ಜಿಲ್ಲೆಯಲ್ಲಿ ಕೃಷಿ, ಜಾನುವಾರು, ಮನೆಗಳು ಹಾಗೂ ಉದ್ಯಮಗಳಿಗೆ ಹಾನಿಯಾಗಿವೆ.</p>.ಕಲಬುರಗಿ | ಕಾಗಿಣಾದಲ್ಲಿ ತಗ್ಗಿದ ಪ್ರವಾಹ: ದಂಡೋತಿ ಸೇತುವೆ ಸಂಚಾರಕ್ಕೆ ಮುಕ್ತ.<p>ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹಾಗೂ ಉಪಮುಖ್ಯಮಂತ್ರಿಗಳಾದ ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದ್ದಾರೆ.</p><p>ಸೋಲಾಪುರ ಹಾಗೂ ಲಾತೂರ್ ಜಿಲ್ಲೆಗಳಿಗೆ ಭೇಟಿ ನೀಡಿದ ಫಡಣವೀಸ್, ಸ್ಥಳೀಯರು ಹಾಗೂ ರೈತರೊಂದಿಗೆ ಮಾತುಕತೆ ನಡೆಸಿದ್ದಾರೆ. ಸೋಲಾಪುರದ ಕರ್ಮಲಾ ತಾಲ್ಲೂಕಿಗೆ ಭೇಟಿ ನೀಡಿ, ರೈತರಿಗೆ ಧೈರ್ಯ ತುಂಬಿದರು.</p><p>ಧಾರಾಶಿವ ಜಿಲ್ಲೆಗೆ ಶಿವಸೇನಾ ನಾಯಕ ತಾನಾಜಿ ಸಾವಂತ್ ಅವರರೊಂದಿಗೆ ಭೇಟಿ ನೀಡಿದ ಏಕನಾಥ ಶಿಂದೆ ಸ್ಥಳೀಯರೊಂದಿಗೆ ಚರ್ಚಿಸಿದ್ದಾರೆ.</p>.ಪಂಜಾಬ್ ಪ್ರವಾಹ: ಕೇಂದ್ರ ನೀಡಿರುವ ₹1,600 ಕೋಟಿ ಎಲ್ಲಿ ಸಾಲುತ್ತೆ; ಮಾನ್ ಅಳಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಮಾರಾಠಾವಾಡ ಪ್ರಾಂತ್ಯದಲ್ಲಿ ಉಂಟಾಗಿರುವ ಪ್ರವಾಹದಿಂದ ಸಂತ್ರಸ್ತರಾಗಿರುವವರ ಪುನರ್ವಸತಿ ಕಾರ್ಯಕ್ಕೆ ಬೆಂಬಲ ನೀಡಲು ಆಡಳಿತರೂಢ ಬಿಜೆಪಿ, ಶಿವಸೇನಾ ಹಾಗೂ ಎನ್ಸಿಪಿ ಮೈತ್ರಿಕೂಟ ‘ಮಹಾಯುತಿ’ಯ ಶಾಸಕರು ಹಾಗೂ ಸಚಿವರು ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದಾನ ಮಾಡಲಿದ್ದಾರೆ.</p>.ಪ್ರವಾಹ ಸಂತ್ರಸ್ತ ರೈತರಿಗೆ ಒಂದು ತಿಂಗಳ ಸಂಬಳ ನೀಡುತ್ತೇನೆ: ಮಹಾರಾಷ್ಟ್ರ ಸಚಿವ.<p> ತಮ್ಮ ಪಕ್ಷದ ಸಂಸದರೂ ಒಂದು ತಿಂಗಳ ವೇತನವನ್ನು ನೀಡಲಿದ್ದಾರೆ ಎಂದು ಬಿಜೆಪಿ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಪಕ್ಷ ಪ್ರತ್ಯೇಕವಾಗಿ ಹೇಳಿದೆ.</p><p>ಮರಾಠವಾಡ ಪ್ರಾಂತ್ಯದಲ್ಲಿ ಸುರಿದ ಭಾರಿ ಮಳೆಗೆ ಪ್ರವಾಹ ಉಂಟಾಗಿದ್ದು, ಸೋಲಾಪುರ ಜಿಲ್ಲೆಯಲ್ಲಿ ಕೃಷಿ, ಜಾನುವಾರು, ಮನೆಗಳು ಹಾಗೂ ಉದ್ಯಮಗಳಿಗೆ ಹಾನಿಯಾಗಿವೆ.</p>.ಕಲಬುರಗಿ | ಕಾಗಿಣಾದಲ್ಲಿ ತಗ್ಗಿದ ಪ್ರವಾಹ: ದಂಡೋತಿ ಸೇತುವೆ ಸಂಚಾರಕ್ಕೆ ಮುಕ್ತ.<p>ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹಾಗೂ ಉಪಮುಖ್ಯಮಂತ್ರಿಗಳಾದ ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದ್ದಾರೆ.</p><p>ಸೋಲಾಪುರ ಹಾಗೂ ಲಾತೂರ್ ಜಿಲ್ಲೆಗಳಿಗೆ ಭೇಟಿ ನೀಡಿದ ಫಡಣವೀಸ್, ಸ್ಥಳೀಯರು ಹಾಗೂ ರೈತರೊಂದಿಗೆ ಮಾತುಕತೆ ನಡೆಸಿದ್ದಾರೆ. ಸೋಲಾಪುರದ ಕರ್ಮಲಾ ತಾಲ್ಲೂಕಿಗೆ ಭೇಟಿ ನೀಡಿ, ರೈತರಿಗೆ ಧೈರ್ಯ ತುಂಬಿದರು.</p><p>ಧಾರಾಶಿವ ಜಿಲ್ಲೆಗೆ ಶಿವಸೇನಾ ನಾಯಕ ತಾನಾಜಿ ಸಾವಂತ್ ಅವರರೊಂದಿಗೆ ಭೇಟಿ ನೀಡಿದ ಏಕನಾಥ ಶಿಂದೆ ಸ್ಥಳೀಯರೊಂದಿಗೆ ಚರ್ಚಿಸಿದ್ದಾರೆ.</p>.ಪಂಜಾಬ್ ಪ್ರವಾಹ: ಕೇಂದ್ರ ನೀಡಿರುವ ₹1,600 ಕೋಟಿ ಎಲ್ಲಿ ಸಾಲುತ್ತೆ; ಮಾನ್ ಅಳಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>