<p><strong>ಛತ್ರಪತಿ ಸಂಭಾಜಿ ನಗರ, ಮಹಾರಾಷ್ಟ್ರ:</strong> ಈ ವರ್ಷದ ಜನವರಿಯಿಂದ ಮಾರ್ಚ್ ಅವಧಿಯಲ್ಲಿ ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದಲ್ಲಿ 269 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕಳೆದ ವರ್ಷ ಇದೇ ಅವಧಿಯಲ್ಲಿ 204 ಮಂದಿ ಮೃತಪಟ್ಟಿದ್ದರು ಎಂದು ವಿಭಾಗೀಯ ಆಯುಕ್ತರ ಕಚೇರಿ ಬಿಡುಗಡೆಗೊಳಿಸಿದ ವರದಿ ತಿಳಿಸಿದೆ.</p>.<p>ಮರಾಠವಾಡ ವಿಭಾಗವು 8 ಜಿಲ್ಲೆಗಳನ್ನು ಒಳಗೊಂಡಿದ್ದು, ಕಡಿಮೆ ಮಳೆ ಹಾಗೂ ನೀರಿನ ಕೊರತೆಯಿಂದ ‘ಅರೆ ಶುಷ್ಕ ವಲಯ’ವಾಗಿ ಗುರುತಿಸಿಕೊಂಡಿದೆ.</p>.<p>ಬೀಡ್ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಮಾಣದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಈ ವರ್ಷದ ಮೂರು ತಿಂಗಳಲ್ಲಿ 71 ಮಂದಿ ಮೃತಪಟ್ಟಿದ್ದು, ಕಳೆದ ವರ್ಷ ಈ ಅವಧಿಯಲ್ಲಿ 44 ಮಂದಿ ಮೃತಪಟ್ಟಿದ್ದರು. </p>.<p>ಬೀಡ್ (71), ಛತ್ರಪತಿ ಸಂಭಾಜಿ ನಗರ (50), ನಾಂದೇಡ್ (37), ಪರ್ಭಾಣಿ(33), ಧಾರಾಶಿವ (31), ಲಾತೂರ್ (18), ಹಿಂಗೋಲಿ (16), ಜಲ್ನಾ (13) ಮಂದಿ ಮೃತಪಟ್ಟಿದ್ದಾರೆ.</p>.<p>‘ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರವು ರೈತರ ಆತ್ಮಹತ್ಯೆ ತಡೆಯುವಲ್ಲಿ ಸಂಪೂರ್ಣವಾಗಿ ವೈಫಲ್ಯವಾಗಿದ್ದು, ಕೂಡಲೇ ರೈತರ ಸಾಲಮನ್ನಾ ಮಾಡಬೇಕು’ ಎಂದು ರೈತಪರ ಸಂಘಟನೆ ಶೇತ್ಕರಿ ಸಂಘಟನೆ ಅಧ್ಯಕ್ಷ ರಾಜು ಶೆಟ್ಟಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛತ್ರಪತಿ ಸಂಭಾಜಿ ನಗರ, ಮಹಾರಾಷ್ಟ್ರ:</strong> ಈ ವರ್ಷದ ಜನವರಿಯಿಂದ ಮಾರ್ಚ್ ಅವಧಿಯಲ್ಲಿ ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದಲ್ಲಿ 269 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕಳೆದ ವರ್ಷ ಇದೇ ಅವಧಿಯಲ್ಲಿ 204 ಮಂದಿ ಮೃತಪಟ್ಟಿದ್ದರು ಎಂದು ವಿಭಾಗೀಯ ಆಯುಕ್ತರ ಕಚೇರಿ ಬಿಡುಗಡೆಗೊಳಿಸಿದ ವರದಿ ತಿಳಿಸಿದೆ.</p>.<p>ಮರಾಠವಾಡ ವಿಭಾಗವು 8 ಜಿಲ್ಲೆಗಳನ್ನು ಒಳಗೊಂಡಿದ್ದು, ಕಡಿಮೆ ಮಳೆ ಹಾಗೂ ನೀರಿನ ಕೊರತೆಯಿಂದ ‘ಅರೆ ಶುಷ್ಕ ವಲಯ’ವಾಗಿ ಗುರುತಿಸಿಕೊಂಡಿದೆ.</p>.<p>ಬೀಡ್ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಮಾಣದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಈ ವರ್ಷದ ಮೂರು ತಿಂಗಳಲ್ಲಿ 71 ಮಂದಿ ಮೃತಪಟ್ಟಿದ್ದು, ಕಳೆದ ವರ್ಷ ಈ ಅವಧಿಯಲ್ಲಿ 44 ಮಂದಿ ಮೃತಪಟ್ಟಿದ್ದರು. </p>.<p>ಬೀಡ್ (71), ಛತ್ರಪತಿ ಸಂಭಾಜಿ ನಗರ (50), ನಾಂದೇಡ್ (37), ಪರ್ಭಾಣಿ(33), ಧಾರಾಶಿವ (31), ಲಾತೂರ್ (18), ಹಿಂಗೋಲಿ (16), ಜಲ್ನಾ (13) ಮಂದಿ ಮೃತಪಟ್ಟಿದ್ದಾರೆ.</p>.<p>‘ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರವು ರೈತರ ಆತ್ಮಹತ್ಯೆ ತಡೆಯುವಲ್ಲಿ ಸಂಪೂರ್ಣವಾಗಿ ವೈಫಲ್ಯವಾಗಿದ್ದು, ಕೂಡಲೇ ರೈತರ ಸಾಲಮನ್ನಾ ಮಾಡಬೇಕು’ ಎಂದು ರೈತಪರ ಸಂಘಟನೆ ಶೇತ್ಕರಿ ಸಂಘಟನೆ ಅಧ್ಯಕ್ಷ ರಾಜು ಶೆಟ್ಟಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>