<p><strong>ಕೊಚ್ಚಿ:</strong> ‘ಪತ್ನಿಯ ದೇಹ ಪತಿಗಾಗಿಯೇ ಮೀಸಲಾಗಿದೆ ಎಂದು ಭಾವಿಸಿಕೊಂಡು, ಆಕೆಯ ಇಚ್ಛೆಯ ವಿರುದ್ಧ ಲೈಂಗಿಕ ಕ್ರಿಯೆ ನಡೆಸುವುದು ವೈವಾಹಿಕ ಅತ್ಯಾಚಾರ’ ಎಂದು ಕೇರಳ ಹೈಕೋರ್ಟ್ ಹೇಳಿದೆ.</p>.<p>‘ವಿವಾಹ ಮತ್ತು ವಿಚ್ಛೇದನವು ಜಾತ್ಯತೀತ ಕಾನೂನು ವ್ಯಾಪ್ತಿಯಲ್ಲೇ ಇರಬೇಕು’ ಎಂದು ನ್ಯಾಯಮೂರ್ತಿಗಳಾದ ಎ. ಮುಹಮ್ಮದ್ ಮುಸ್ತಾಖ್ ಮತ್ತು ಕೌಸರ್ ಎಡಪ್ಪಗಾಥ್ ಅವರನ್ನೊಳಗೊಂಡ ಪೀಠವು ಅಭಿಪ್ರಾಯಪಟ್ಟಿದೆ.</p>.<p>‘ವಿವಾಹದ ಸಂದರ್ಭದಲ್ಲಿ ಪತಿ ಮತ್ತು ಪತ್ನಿ ಇಬ್ಬರೂ ಸಮಾನರು ಎಂದು ಪರಿಗಣಿಸಲಾಗುತ್ತದೆ. ಪತ್ನಿಗಿಂತ ತಾನು ಹೆಚ್ಚು ಶ್ರೇಷ್ಠ ಎಂದು ಪತಿ ಭಾವಿಸಿಕೊಳ್ಳಬಾರದು. ಇದು ಆಕೆಯ ದೇಹವಾಗಿರಬಹುದು ಅಥವಾ ವೈಯಕ್ತಿಕ ಸ್ಥಾನಮಾನಕ್ಕೆ ಸಂಬಂಧಪಟ್ಟದ್ದಾಗಿರಬಹುದು’ ಎಂದು ಪೀಠವು ಹೇಳಿದೆ.</p>.<p>ವಿಚ್ಛೇದನ ನೀಡಿದ ಕೌಟುಂಬಿಕ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ತಿರಸ್ಕರಿಸಿದ ನ್ಯಾಯಾಲಯ, ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.</p>.<p>‘ವೈವಾಹಿಕ ಅತ್ಯಾಚಾರವು ವಿಚ್ಛೇದನ ಪಡೆದುಕೊಳ್ಳಲು ಪ್ರಮುಖ ಅಂಶವಾಗಿದೆ’ ಎಂದು ಪೀಠವು ಹೇಳಿದೆ. ‘ಈ ಪ್ರಕರಣದಲ್ಲಿ ಮಹಿಳೆಯು ವಿಚ್ಛೇದನ ಪಡೆದುಕೊಳ್ಳಲು 12 ವರ್ಷಗಳಿಂದ ನ್ಯಾಯಾಂಗದ ದೇವಾಲಯದಲ್ಲಿ ಕಾಯುತ್ತಿದ್ದಾರೆ. ವಿಳಂಬವಾಗಿರು<br />ವುದನ್ನು ಸಹಿಸಿಕೊಳ್ಳಲು ಈ ಮಹಿಳೆಯಿಂದ ಸಾಧ್ಯವಿಲ್ಲ. ಅವಳ ಕಣ್ಣೀರಿಗೆ ನಾವು ಸಹ ಉತ್ತರದಾಯಿತ್ವವಾಗಿದ್ದೇವೆ’ ಎಂದು ನ್ಯಾಯಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ‘ಪತ್ನಿಯ ದೇಹ ಪತಿಗಾಗಿಯೇ ಮೀಸಲಾಗಿದೆ ಎಂದು ಭಾವಿಸಿಕೊಂಡು, ಆಕೆಯ ಇಚ್ಛೆಯ ವಿರುದ್ಧ ಲೈಂಗಿಕ ಕ್ರಿಯೆ ನಡೆಸುವುದು ವೈವಾಹಿಕ ಅತ್ಯಾಚಾರ’ ಎಂದು ಕೇರಳ ಹೈಕೋರ್ಟ್ ಹೇಳಿದೆ.</p>.<p>‘ವಿವಾಹ ಮತ್ತು ವಿಚ್ಛೇದನವು ಜಾತ್ಯತೀತ ಕಾನೂನು ವ್ಯಾಪ್ತಿಯಲ್ಲೇ ಇರಬೇಕು’ ಎಂದು ನ್ಯಾಯಮೂರ್ತಿಗಳಾದ ಎ. ಮುಹಮ್ಮದ್ ಮುಸ್ತಾಖ್ ಮತ್ತು ಕೌಸರ್ ಎಡಪ್ಪಗಾಥ್ ಅವರನ್ನೊಳಗೊಂಡ ಪೀಠವು ಅಭಿಪ್ರಾಯಪಟ್ಟಿದೆ.</p>.<p>‘ವಿವಾಹದ ಸಂದರ್ಭದಲ್ಲಿ ಪತಿ ಮತ್ತು ಪತ್ನಿ ಇಬ್ಬರೂ ಸಮಾನರು ಎಂದು ಪರಿಗಣಿಸಲಾಗುತ್ತದೆ. ಪತ್ನಿಗಿಂತ ತಾನು ಹೆಚ್ಚು ಶ್ರೇಷ್ಠ ಎಂದು ಪತಿ ಭಾವಿಸಿಕೊಳ್ಳಬಾರದು. ಇದು ಆಕೆಯ ದೇಹವಾಗಿರಬಹುದು ಅಥವಾ ವೈಯಕ್ತಿಕ ಸ್ಥಾನಮಾನಕ್ಕೆ ಸಂಬಂಧಪಟ್ಟದ್ದಾಗಿರಬಹುದು’ ಎಂದು ಪೀಠವು ಹೇಳಿದೆ.</p>.<p>ವಿಚ್ಛೇದನ ನೀಡಿದ ಕೌಟುಂಬಿಕ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ತಿರಸ್ಕರಿಸಿದ ನ್ಯಾಯಾಲಯ, ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.</p>.<p>‘ವೈವಾಹಿಕ ಅತ್ಯಾಚಾರವು ವಿಚ್ಛೇದನ ಪಡೆದುಕೊಳ್ಳಲು ಪ್ರಮುಖ ಅಂಶವಾಗಿದೆ’ ಎಂದು ಪೀಠವು ಹೇಳಿದೆ. ‘ಈ ಪ್ರಕರಣದಲ್ಲಿ ಮಹಿಳೆಯು ವಿಚ್ಛೇದನ ಪಡೆದುಕೊಳ್ಳಲು 12 ವರ್ಷಗಳಿಂದ ನ್ಯಾಯಾಂಗದ ದೇವಾಲಯದಲ್ಲಿ ಕಾಯುತ್ತಿದ್ದಾರೆ. ವಿಳಂಬವಾಗಿರು<br />ವುದನ್ನು ಸಹಿಸಿಕೊಳ್ಳಲು ಈ ಮಹಿಳೆಯಿಂದ ಸಾಧ್ಯವಿಲ್ಲ. ಅವಳ ಕಣ್ಣೀರಿಗೆ ನಾವು ಸಹ ಉತ್ತರದಾಯಿತ್ವವಾಗಿದ್ದೇವೆ’ ಎಂದು ನ್ಯಾಯಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>