<p><strong>ನವದೆಹಲಿ:</strong> ಮಥುರಾದ ಶಾಹಿ ಈದ್ಗಾ ಮಸೀದಿ ಆವರಣವನ್ನು ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ನೀಡಿದ್ದ ತಡೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಣೆ ಮಾಡಿದೆ.</p>.ಮಥುರಾ ಸಮೀಪ ದನಗಳ ಶವ ಪತ್ತೆ | ರಸ್ತೆ ತಡೆದು ಪ್ರತಿಭಟನೆ: ಭಾರಿ ಟ್ರಾಫಿಕ್ ಜಾಮ್.<p>‘ಶಾಹಿ ಮಸೀದಿ ಈದ್ಗಾ ಮಸೀದಿ ಟ್ರಸ್ಟ್’ನ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠ, ಏಪ್ರಿಲ್ ಮೊದಲ ವಾರಕ್ಕೆ ವಿಚಾರಣೆ ಮುಂದೂಡಿತು.</p><p>1991ರ ಪೂಜಾ ಸ್ಥಳಗಳು (ವಿಶೇಷ ನಿಬಂಧನೆಗಳು) ಕಾಯ್ದೆ ಸೇರಿ, ಸುಪ್ರೀಂ ಕೋರ್ಟ್ ಮುಂದೆ ಮೂರು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಇದನ್ನು ಏ.1ರಿಂದ ಆರಂಭವಾಗುವ ವಾರಕ್ಕೆ ಪಟ್ಟಿ ಮಾಡಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.ಮಥುರಾ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಮಸೀದಿ ಸಮಿತಿ ಅರ್ಜಿ ತಿರಸ್ಕೃತ.<p>ಅಲ್ಲದೆ ಹೈಕೋರ್ಟ್ ಆದೇಶಕ್ಕೆ ನೀಡಲಾದ ಮಧ್ಯಂತರ ತಡೆ ಮುಂದುವರಿಯಲಿದೆ ಎಂದು ಕೋರ್ಟ್ ಹೇಳಿದೆ.</p><p>2023ರ ಡಿಸೆಂಬರ್ 23ರಂದು ಕೋರ್ಟ್ ಮೇಲ್ವಿಚಾರಣೆಯಲ್ಲಿ ಶಾಹಿ ಇದ್ಗಾ ಆವರಣದಲ್ಲಿ ಸಮೀಕ್ಷೆ ನಡೆಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಅಲ್ಲದೆ ಸರ್ವೆಯ ಉಸ್ತುವಾರಿಗೆ ವಿಶೇಷ ಆಯುಕ್ತರನ್ನೂ ನೇಮಿಸಿತ್ತು.</p><p>ಹೈಕೋರ್ಟ್ನ ಈ ಆದೇಶಕ್ಕೆ 2024ರ ಜನವರಿ 16ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು.</p> .ಮಥುರಾ: ವಕ್ಫ್ ಕಾಯ್ದೆ ನಿಯಮ ಅನ್ವಯವಾಗದು –ಹಿಂದೂ ಪರ ವಾದ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಥುರಾದ ಶಾಹಿ ಈದ್ಗಾ ಮಸೀದಿ ಆವರಣವನ್ನು ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ನೀಡಿದ್ದ ತಡೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಣೆ ಮಾಡಿದೆ.</p>.ಮಥುರಾ ಸಮೀಪ ದನಗಳ ಶವ ಪತ್ತೆ | ರಸ್ತೆ ತಡೆದು ಪ್ರತಿಭಟನೆ: ಭಾರಿ ಟ್ರಾಫಿಕ್ ಜಾಮ್.<p>‘ಶಾಹಿ ಮಸೀದಿ ಈದ್ಗಾ ಮಸೀದಿ ಟ್ರಸ್ಟ್’ನ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠ, ಏಪ್ರಿಲ್ ಮೊದಲ ವಾರಕ್ಕೆ ವಿಚಾರಣೆ ಮುಂದೂಡಿತು.</p><p>1991ರ ಪೂಜಾ ಸ್ಥಳಗಳು (ವಿಶೇಷ ನಿಬಂಧನೆಗಳು) ಕಾಯ್ದೆ ಸೇರಿ, ಸುಪ್ರೀಂ ಕೋರ್ಟ್ ಮುಂದೆ ಮೂರು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಇದನ್ನು ಏ.1ರಿಂದ ಆರಂಭವಾಗುವ ವಾರಕ್ಕೆ ಪಟ್ಟಿ ಮಾಡಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.ಮಥುರಾ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಮಸೀದಿ ಸಮಿತಿ ಅರ್ಜಿ ತಿರಸ್ಕೃತ.<p>ಅಲ್ಲದೆ ಹೈಕೋರ್ಟ್ ಆದೇಶಕ್ಕೆ ನೀಡಲಾದ ಮಧ್ಯಂತರ ತಡೆ ಮುಂದುವರಿಯಲಿದೆ ಎಂದು ಕೋರ್ಟ್ ಹೇಳಿದೆ.</p><p>2023ರ ಡಿಸೆಂಬರ್ 23ರಂದು ಕೋರ್ಟ್ ಮೇಲ್ವಿಚಾರಣೆಯಲ್ಲಿ ಶಾಹಿ ಇದ್ಗಾ ಆವರಣದಲ್ಲಿ ಸಮೀಕ್ಷೆ ನಡೆಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಅಲ್ಲದೆ ಸರ್ವೆಯ ಉಸ್ತುವಾರಿಗೆ ವಿಶೇಷ ಆಯುಕ್ತರನ್ನೂ ನೇಮಿಸಿತ್ತು.</p><p>ಹೈಕೋರ್ಟ್ನ ಈ ಆದೇಶಕ್ಕೆ 2024ರ ಜನವರಿ 16ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು.</p> .ಮಥುರಾ: ವಕ್ಫ್ ಕಾಯ್ದೆ ನಿಯಮ ಅನ್ವಯವಾಗದು –ಹಿಂದೂ ಪರ ವಾದ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>