<p><strong>ಹಾಥರಸ್(ಉತ್ತರ ಪ್ರದೇಶ)</strong>: ಹಾಥರಸ್ ಜಿಲ್ಲೆಯಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಮುಖ್ಯ ಆರೋಪಿ ದೇವಪ್ರಕಾಶ ಮಧುಕರ್ ಪತ್ತೆಗಾಗಿ ಉತ್ತರ ಪ್ರದೇಶ ಪೊಲೀಸರು ಶೋಧಕಾರ್ಯವನ್ನು ತೀವ್ರಗೊಳಿಸಿದ್ದಾರೆ. ನೆರೆ ರಾಜ್ಯಗಳಾದ ರಾಜಸ್ಥಾನ ಮತ್ತು ಹರಿಯಾಣದಲ್ಲಿಯೂ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ಶುಕ್ರವಾರ ಹೇಳಿವೆ.</p>.<p>ರಾಜ್ಯ ಪೊಲೀಸರು ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳು, ‘ಭೋಲೆ ಬಾಬಾ’ ಎಂದು ಕರೆಯಲಾಗುವ ಸೂರಜ್ಪಾಲ್ ಸಿಂಗ್ ಅಲಿಯಾಸ್ ನಾರಾಯಣ ಸಾಕಾರ ವಿಶ್ವಹರಿ ಬಾಬಾ ಅವರನ್ನು ವಿಚಾರಣೆಗೆ ಒಳಪಡಿಸಲಿದ್ದು, ಅವರ ಪತ್ತೆಗಾಗಿಯೂ ಜಾಲ ಬೀಸಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ತನಿಖಾ ತಂಡಗಳು ರಾಜ್ಯದ ಪಶ್ಚಿಮ ಮತ್ತು ಪೂರ್ವ ಭಾಗಗಳ ಹಲವು ಜಿಲ್ಲೆಗಳಿಗೆ ಭೇಟಿ ನೀಡಿವೆ’ ಎಂದು ತಿಳಿಸಿದ್ದಾರೆ.</p>.<p>ಜುಲೈ 2ರಂದು ಆಯೋಜಿಸಿದ್ದ ‘ಸತ್ಸಂಗ’ ಕಾರ್ಯಕ್ರಮದ ‘ಮುಖ್ಯ ಸೇವಾದಾರ’ ಮಧುಕರ್ ಹೆಸರನ್ನು ಮಾತ್ರ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ‘ಹಲವು ಅಪರಿಚಿತ ಸಂಘಟಕರ’ ವಿರುದ್ಧವೂ ಸಿಕಂದ್ರಾರಾವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿ ಈ ವರೆಗೆ 6 ಜನ ಶಂಕಿತರನ್ನು ಬಂಧಿಸಲಾಗಿದೆ.</p>.<p><strong>ವರದಿ ಸಲ್ಲಿಕೆ:</strong> ಕಾಲ್ತುಳಿತ ಕುರಿತಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಸಿದ್ಧಪಡಿಸಿರುವ ಪ್ರಾಥಮಿಕ ವರದಿ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಎಡಿಜಿಪಿ (ಆಗ್ರಾ ವಲಯ) ಅನುಪಮ್ ಕುಲಶ್ರೇಷ್ಠ ಸೇರಿದಂತೆ ಹಿರಿಯ ಅಧಿಕಾರಿಗಳಿಗೂ ಈ ವರದಿಯನ್ನು ಸಲ್ಲಿಸಲಾಗಿದೆ. ಹಾಥರಸ್ ಜಿಲ್ಲಾಧಿಕಾರಿ ಆಶಿಶ್ ಕುಮಾರ್, ಎಸ್ಪಿ ನಿಪುಣ್ ಅಗರವಾಲ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಹೇಳಿಕೆಗಳನ್ನು ಈ ವರದಿ ಒಳಗೊಂಡಿದೆ ಎಂದು ತಿಳಿಸಿದ್ದಾರೆ.</p>.<p><strong>‘90ಕ್ಕೂ ಹೆಚ್ಚು ಹೇಳಿಕೆಗಳ ದಾಖಲು’:</strong> ಕಾಲ್ತುಳಿತ ಘಟನೆಗೆ ಸಂಬಂಧಿಸಿ ವಿಶೇಷ ತನಿಖಾ ತಂಡವು (ಎಸ್ಐಟಿ) 90ಕ್ಕೂ ಹೆಚ್ಚು ಹೇಳಿಕೆಗಳನ್ನು ದಾಖಲಿಸಿಕೊಂಡಿದೆ ಎಂದು ತಂಡದ ಮುಖ್ಯಸ್ಥರಾಗಿರುವ ಎಡಿಜಿಪಿ (ಆಗ್ರಾ ವಲಯ) ಅನುಪಮ್ ಕುಲಶ್ರೇಷ್ಠ ಶುಕ್ರವಾರ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಥರಸ್(ಉತ್ತರ ಪ್ರದೇಶ)</strong>: ಹಾಥರಸ್ ಜಿಲ್ಲೆಯಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಮುಖ್ಯ ಆರೋಪಿ ದೇವಪ್ರಕಾಶ ಮಧುಕರ್ ಪತ್ತೆಗಾಗಿ ಉತ್ತರ ಪ್ರದೇಶ ಪೊಲೀಸರು ಶೋಧಕಾರ್ಯವನ್ನು ತೀವ್ರಗೊಳಿಸಿದ್ದಾರೆ. ನೆರೆ ರಾಜ್ಯಗಳಾದ ರಾಜಸ್ಥಾನ ಮತ್ತು ಹರಿಯಾಣದಲ್ಲಿಯೂ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ಶುಕ್ರವಾರ ಹೇಳಿವೆ.</p>.<p>ರಾಜ್ಯ ಪೊಲೀಸರು ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳು, ‘ಭೋಲೆ ಬಾಬಾ’ ಎಂದು ಕರೆಯಲಾಗುವ ಸೂರಜ್ಪಾಲ್ ಸಿಂಗ್ ಅಲಿಯಾಸ್ ನಾರಾಯಣ ಸಾಕಾರ ವಿಶ್ವಹರಿ ಬಾಬಾ ಅವರನ್ನು ವಿಚಾರಣೆಗೆ ಒಳಪಡಿಸಲಿದ್ದು, ಅವರ ಪತ್ತೆಗಾಗಿಯೂ ಜಾಲ ಬೀಸಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ತನಿಖಾ ತಂಡಗಳು ರಾಜ್ಯದ ಪಶ್ಚಿಮ ಮತ್ತು ಪೂರ್ವ ಭಾಗಗಳ ಹಲವು ಜಿಲ್ಲೆಗಳಿಗೆ ಭೇಟಿ ನೀಡಿವೆ’ ಎಂದು ತಿಳಿಸಿದ್ದಾರೆ.</p>.<p>ಜುಲೈ 2ರಂದು ಆಯೋಜಿಸಿದ್ದ ‘ಸತ್ಸಂಗ’ ಕಾರ್ಯಕ್ರಮದ ‘ಮುಖ್ಯ ಸೇವಾದಾರ’ ಮಧುಕರ್ ಹೆಸರನ್ನು ಮಾತ್ರ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ‘ಹಲವು ಅಪರಿಚಿತ ಸಂಘಟಕರ’ ವಿರುದ್ಧವೂ ಸಿಕಂದ್ರಾರಾವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿ ಈ ವರೆಗೆ 6 ಜನ ಶಂಕಿತರನ್ನು ಬಂಧಿಸಲಾಗಿದೆ.</p>.<p><strong>ವರದಿ ಸಲ್ಲಿಕೆ:</strong> ಕಾಲ್ತುಳಿತ ಕುರಿತಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಸಿದ್ಧಪಡಿಸಿರುವ ಪ್ರಾಥಮಿಕ ವರದಿ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಎಡಿಜಿಪಿ (ಆಗ್ರಾ ವಲಯ) ಅನುಪಮ್ ಕುಲಶ್ರೇಷ್ಠ ಸೇರಿದಂತೆ ಹಿರಿಯ ಅಧಿಕಾರಿಗಳಿಗೂ ಈ ವರದಿಯನ್ನು ಸಲ್ಲಿಸಲಾಗಿದೆ. ಹಾಥರಸ್ ಜಿಲ್ಲಾಧಿಕಾರಿ ಆಶಿಶ್ ಕುಮಾರ್, ಎಸ್ಪಿ ನಿಪುಣ್ ಅಗರವಾಲ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಹೇಳಿಕೆಗಳನ್ನು ಈ ವರದಿ ಒಳಗೊಂಡಿದೆ ಎಂದು ತಿಳಿಸಿದ್ದಾರೆ.</p>.<p><strong>‘90ಕ್ಕೂ ಹೆಚ್ಚು ಹೇಳಿಕೆಗಳ ದಾಖಲು’:</strong> ಕಾಲ್ತುಳಿತ ಘಟನೆಗೆ ಸಂಬಂಧಿಸಿ ವಿಶೇಷ ತನಿಖಾ ತಂಡವು (ಎಸ್ಐಟಿ) 90ಕ್ಕೂ ಹೆಚ್ಚು ಹೇಳಿಕೆಗಳನ್ನು ದಾಖಲಿಸಿಕೊಂಡಿದೆ ಎಂದು ತಂಡದ ಮುಖ್ಯಸ್ಥರಾಗಿರುವ ಎಡಿಜಿಪಿ (ಆಗ್ರಾ ವಲಯ) ಅನುಪಮ್ ಕುಲಶ್ರೇಷ್ಠ ಶುಕ್ರವಾರ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>