<p><strong>ಪಿಥೋರ್ಗಢ</strong>: ಉತ್ತರಾಖಂಡದ ಧಾರ್ಚುಲಾದಿಂದ 45 ಕಿ.ಮೀ ದೂರದಲ್ಲಿರುವ ನಜಾಂಗ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, 200ಕ್ಕೂ ಹೆಚ್ಚು ಆದಿ ಕೈಲಾಸ ಯಾತ್ರಿಗಳು ವಿವಿಧ ಪ್ರದೇಶಗಳಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>ದೊಡ್ಡ ಪ್ರಮಾಣದಲ್ಲಿ ಮಣ್ಣು ರಸ್ತೆಯ ಮೇಲೆ ಬಿದ್ದಿದ್ದು, ಆದಿ ಕೈಲಾಸಕ್ಕೆ ಹೋಗುವ ಮತ್ತು ಹಿಂದಿರುಗುವ ಮಾರ್ಗದ ವಿವಿಧೆಡೆ ಯಾತ್ರಿಗಳು ಸಿಲುಕಿಕೊಂಡಿದ್ದಾರೆ ಎಂದು ಧಾರ್ಚುಲಾದ ಉಪ ವಿಭಾಗಾಧಿಕಾರಿ (ಎಸ್ಡಿಎಂ) ದೇವೇಶ್ ಶಶ್ನಿ ಮಾಹಿತಿ ನೀಡಿದ್ದಾರೆ.</p><p>‘ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ. ಧಾರ್ಚುಲಾ, ನಪಾಲ್ಚು, ಗುಂಜಿ ಮತ್ತು ಬುಂಡಿ ಪ್ರದೇಶಗಳಲ್ಲಿ ಭೂಕುಸಿತದ ಅವಶೇಷಗಳನ್ನು ತೆರವುಗಳಿಸುವುದಕ್ಕಾಗಿ ಕಾಯುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.</p><p>ಮೇ 30ರಂದು ಸಂಜೆ ಸಂಭವಿಸಿದ ಭೂಕುಸಿತದಿಂದ 100 ಮೀಟರ್ಗೂ ಹೆಚ್ಚು ರಸ್ತೆ ಹಾಳಾಗಿದೆ ಎಂದು ಅವರು ವಿವರಿಸಿದ್ದಾರೆ.</p><p>ಜೂನ್ 4ರ ಮೊದಲು ರಸ್ತೆ ಪುನರಾರಂಭ ಆಗುವ ಸಾಧ್ಯತೆ ಇಲ್ಲ ಎಂದು ಅವರು ಹೇಳಿದ್ದಾರೆ. ಈ ವರ್ಷ ಮೇ 4 ರಂದು ಆದಿ ಕೈಲಾಸ ಯಾತ್ರೆ ಆರಂಭವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿಥೋರ್ಗಢ</strong>: ಉತ್ತರಾಖಂಡದ ಧಾರ್ಚುಲಾದಿಂದ 45 ಕಿ.ಮೀ ದೂರದಲ್ಲಿರುವ ನಜಾಂಗ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, 200ಕ್ಕೂ ಹೆಚ್ಚು ಆದಿ ಕೈಲಾಸ ಯಾತ್ರಿಗಳು ವಿವಿಧ ಪ್ರದೇಶಗಳಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>ದೊಡ್ಡ ಪ್ರಮಾಣದಲ್ಲಿ ಮಣ್ಣು ರಸ್ತೆಯ ಮೇಲೆ ಬಿದ್ದಿದ್ದು, ಆದಿ ಕೈಲಾಸಕ್ಕೆ ಹೋಗುವ ಮತ್ತು ಹಿಂದಿರುಗುವ ಮಾರ್ಗದ ವಿವಿಧೆಡೆ ಯಾತ್ರಿಗಳು ಸಿಲುಕಿಕೊಂಡಿದ್ದಾರೆ ಎಂದು ಧಾರ್ಚುಲಾದ ಉಪ ವಿಭಾಗಾಧಿಕಾರಿ (ಎಸ್ಡಿಎಂ) ದೇವೇಶ್ ಶಶ್ನಿ ಮಾಹಿತಿ ನೀಡಿದ್ದಾರೆ.</p><p>‘ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ. ಧಾರ್ಚುಲಾ, ನಪಾಲ್ಚು, ಗುಂಜಿ ಮತ್ತು ಬುಂಡಿ ಪ್ರದೇಶಗಳಲ್ಲಿ ಭೂಕುಸಿತದ ಅವಶೇಷಗಳನ್ನು ತೆರವುಗಳಿಸುವುದಕ್ಕಾಗಿ ಕಾಯುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.</p><p>ಮೇ 30ರಂದು ಸಂಜೆ ಸಂಭವಿಸಿದ ಭೂಕುಸಿತದಿಂದ 100 ಮೀಟರ್ಗೂ ಹೆಚ್ಚು ರಸ್ತೆ ಹಾಳಾಗಿದೆ ಎಂದು ಅವರು ವಿವರಿಸಿದ್ದಾರೆ.</p><p>ಜೂನ್ 4ರ ಮೊದಲು ರಸ್ತೆ ಪುನರಾರಂಭ ಆಗುವ ಸಾಧ್ಯತೆ ಇಲ್ಲ ಎಂದು ಅವರು ಹೇಳಿದ್ದಾರೆ. ಈ ವರ್ಷ ಮೇ 4 ರಂದು ಆದಿ ಕೈಲಾಸ ಯಾತ್ರೆ ಆರಂಭವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>