ಈ ಹಿಂದೆ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಪ್ರತಿಪಕ್ಷಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್,ತಾಳೆಮಾಡುವ ವಿವಿಪ್ಯಾಟ್ಗಳ ಸಂಖ್ಯೆಯನ್ನು ಹೆಚ್ಚಿಸಿದರೆ ಫಲಿತಾಂಶ ಘೋಷಣೆಗೆ ವಿಳಂಬವಾಗಬಹುದು ಎಂದಿತ್ತು. ಜತೆಗೆ, ಪ್ರತಿ ವಿಧಾನಸಭಾ ಕ್ಷೇತ್ರದ ಕನಿಷ್ಠ 5 ಮತಗಟ್ಟೆಗಳ ವಿವಿಪ್ಯಾಟ್ಗಳನ್ನು ಮತಯಂತ್ರಕ್ಕೆ ತಾಳೆ ಮಾಡುವಂತೆ ಏಪ್ರಿಲ್ 8ರಂದು ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.ಆದರೆ, ಮೊದಲ 3 ಹಂತಗಳ ಚುನಾವಣೆಯಲ್ಲಿ ಅನೇಕ ಮತ ಯಂತ್ರಗಳು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂಬ ದೂರು ದಾಖಲಾಗಿವೆ. ಹೀಗಾಗಿ ಏಪ್ರಿಲ್ 8ರ ಸೂಚನೆಯನ್ನು ಮರುಪರಿಶೀಲಿಸಬೇಕು ಎಂದು ಪ್ರತಿಪಕ್ಷಗಳು ಪುನಃ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದವು.