<p><strong>ವಾರಾಣಸಿ (ಉತ್ತರ ಪ್ರದೇಶ):</strong> ಮಾರಿಷಸ್ ಪ್ರಧಾನಿ ನವೀನ್ಚಂದ್ರ ರಾಮಗುಲಾಂ ಅವರು ತಮ್ಮ ಪತ್ನಿಯೊಂದಿಗೆ ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಇಂದು(ಶುಕ್ರವಾರ) ಭೇಟಿ ನೀಡಿದ್ದಾರೆ.</p>.<p>ರಾಮಗುಲಾಂ ಅವರು ತಮ್ಮ ಪತ್ನಿ ವೀಣಾ ಅವರರೊಂದಿಗೆ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಪೂಜೆಯ ವೇಳೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ , ರಾಜ್ಯ ಹಣಕಾಸು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಖನ್ನಾ ಅವರು ಉಪಸ್ಥಿತರಿದ್ದರು.</p>.<p>ರಾಮಗುಲಾಂ ಅವರು ಸೆ.9ರಂದು ಮುಂಬೈಗೆ ಬಂದಿದ್ದು, ಸೆ.16ರವರೆಗೆ ಅವರು ಭಾರತದಲ್ಲಿ ಇರಲಿದ್ದಾರೆ.</p>.<p>ಬುಧವಾರ ವಾರಾಣಸಿಗೆ ಆಗಮಿಸಿದ್ದ ರಾಮಗುಲಾಂ ಅವರನ್ನು ರಾಜ್ಯಪಾಲರು ಮತ್ತು ಹಣಕಾಸು ಸಚಿವ ಸುರೇಶ್ ಖನ್ನಾ ಬರಮಾಡಿಕೊಂಡಿದ್ದರು. ಗುರುವಾರ ಸಂಜೆ ಇಲ್ಲಿನ ದಶಾಶ್ವಮೇಧ ಘಾಟ್ನಲ್ಲಿ ನಡೆದ ಗಂಗಾ ಆರತಿಯಲ್ಲೂ ಅವರು ಪಾಲ್ಗೊಂಡಿದ್ದರು.</p>.<h2> ರಾಮ ಮಂದಿರದಲ್ಲಿ ಪ್ರಾರ್ಥನೆ:</h2><p>ರಾಮಗುಲಾಂ ಅವರು ಅಯೋಧ್ಯೆಗೂ ಭೇಟಿ ನೀಡಿದ್ದು, ಇಲ್ಲಿನ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.</p> .ಭಾರತ-ಮಾರಿಷಸ್ ನಡುವೆ ಸ್ಥಳೀಯ ಕರೆನ್ಸಿಗಳಲ್ಲಿ ವ್ಯಾಪಾರ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ (ಉತ್ತರ ಪ್ರದೇಶ):</strong> ಮಾರಿಷಸ್ ಪ್ರಧಾನಿ ನವೀನ್ಚಂದ್ರ ರಾಮಗುಲಾಂ ಅವರು ತಮ್ಮ ಪತ್ನಿಯೊಂದಿಗೆ ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಇಂದು(ಶುಕ್ರವಾರ) ಭೇಟಿ ನೀಡಿದ್ದಾರೆ.</p>.<p>ರಾಮಗುಲಾಂ ಅವರು ತಮ್ಮ ಪತ್ನಿ ವೀಣಾ ಅವರರೊಂದಿಗೆ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಪೂಜೆಯ ವೇಳೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ , ರಾಜ್ಯ ಹಣಕಾಸು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಖನ್ನಾ ಅವರು ಉಪಸ್ಥಿತರಿದ್ದರು.</p>.<p>ರಾಮಗುಲಾಂ ಅವರು ಸೆ.9ರಂದು ಮುಂಬೈಗೆ ಬಂದಿದ್ದು, ಸೆ.16ರವರೆಗೆ ಅವರು ಭಾರತದಲ್ಲಿ ಇರಲಿದ್ದಾರೆ.</p>.<p>ಬುಧವಾರ ವಾರಾಣಸಿಗೆ ಆಗಮಿಸಿದ್ದ ರಾಮಗುಲಾಂ ಅವರನ್ನು ರಾಜ್ಯಪಾಲರು ಮತ್ತು ಹಣಕಾಸು ಸಚಿವ ಸುರೇಶ್ ಖನ್ನಾ ಬರಮಾಡಿಕೊಂಡಿದ್ದರು. ಗುರುವಾರ ಸಂಜೆ ಇಲ್ಲಿನ ದಶಾಶ್ವಮೇಧ ಘಾಟ್ನಲ್ಲಿ ನಡೆದ ಗಂಗಾ ಆರತಿಯಲ್ಲೂ ಅವರು ಪಾಲ್ಗೊಂಡಿದ್ದರು.</p>.<h2> ರಾಮ ಮಂದಿರದಲ್ಲಿ ಪ್ರಾರ್ಥನೆ:</h2><p>ರಾಮಗುಲಾಂ ಅವರು ಅಯೋಧ್ಯೆಗೂ ಭೇಟಿ ನೀಡಿದ್ದು, ಇಲ್ಲಿನ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.</p> .ಭಾರತ-ಮಾರಿಷಸ್ ನಡುವೆ ಸ್ಥಳೀಯ ಕರೆನ್ಸಿಗಳಲ್ಲಿ ವ್ಯಾಪಾರ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>