<p class="title"><strong>ಲಖನೌ:</strong> ಗೊಂಡ ಜಿಲ್ಲೆಯ ದೇವಾಲಯದ ಅರ್ಚಕರ ಮೇಲೆ ನಡೆದಿರುವ ಹಲ್ಲೆಯನ್ನು ’ನಾಚಿಕೆಗೇಡಿನ ಸಂಗತಿ’ ಎಂದು ಖಂಡಿಸಿರುವ ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ, ಸಂತನೇ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶ ರಾಜ್ಯದಲ್ಲಿ ಸಂತರೂ ಸುರಕ್ಷಿತವಾಗಿಲ್ಲ’ ಎಂದು ಟೀಕಿಸಿದ್ದಾರೆ.</p>.<p class="bodytext">ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಮಾಯಾವತಿ, ’ಗೊಂಡ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡುಹಾರಿಸಿರುವ ಪ್ರಕರಣವನ್ನು ಉಲ್ಲೇಖಿಸಿ, ಇದು ನಾಚಿಕೆಗೇಡಿನ ಸಂಗತಿ’ ಎಂದಿದ್ದಾರೆ.</p>.<p class="bodytext">’ರಾಜಸ್ತಾನದಂತೆ, ಗೊಂಡ ಜಿಲ್ಲೆಯಲ್ಲೂ ಅರ್ಚಕರ ಮೇಲೆ ಭೂಗಳ್ಳರಿಂದ (ಲ್ಯಾಂಡ್ ಮಾಫಿಯಾದವರಿಂದ) ದಾಳಿ ನಡೆದಿದೆ. ದೇವಾಲಯದ ಜಮೀನನ್ನು ಆಕ್ರಮಿಸಿಕೊಳ್ಳುವ ಇಂಥ ಪ್ರಯತ್ನ ನಿಜಕ್ಕೂ ನಾಚಿಕೆಗೇಡಿನ ವಿಷಯ. ಸಂತರ ಆಳ್ವಿಕೆಯ ಈ ರಾಜ್ಯದಲ್ಲಿ ಸಾಧು–ಸಂತರೂ ಸುರಕ್ಷಿತವಾಗಿಲ್ಲ. ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಆರೋಪಿಸಿದ್ದಾರೆ.</p>.<p class="bodytext">ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಘಟನೆಗೆ ಸಂಬಂಧಿಸಿದ ಎಲ್ಲಾ ಭೂಗಳ್ಳರ ಎಲ್ಲ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮಾಯಾವತಿ ಉತ್ತರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಾಗಯೇ, ಸಾಧು–ಸಂತರಿಗೆ ರಕ್ಷಣೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.</p>.<p class="bodytext">ಗೊಂಡ ಜಿಲ್ಲೆಯ ತಿರ್ರೆ ಮನೋರಮಾ ಗ್ರಾಮದ 30 ಎಕರೆಯಲ್ಲಿರುವ ರಾಮ್ಜಂಕಿ ದೇವಾಲಯದ ಅರ್ಚಕ ಮತ್ತು ಕೆಲವು ಗ್ರಾಮಸ್ಥರ ನಡುವೆ ಜಮೀನು ಕುರಿತು ವಿವಾದವಿತ್ತು. ಅರ್ಚಕ ಅತುಲ್ ಬಾಬಾ ಅಲಿಯಾಸ್ ಸಾಮ್ರಾಟ್ ದಾಸ್ ಮೇಲೆ ಭಾನುವಾರ ಬೆಳಿಗ್ಗೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಈ ಘಟನೆಯಲ್ಲಿ ಅವರ ಎಡಬುಜಕ್ಕೆ ಗಾಯವಾಗಿತ್ತು. ಗಾಯಗೊಂಡ ಅರ್ಚಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಲಖನೌದ ಕಿಂಜ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಕಳುಹಿಸಲಾಗಿತ್ತು. ದಾಸ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ:</strong> ಗೊಂಡ ಜಿಲ್ಲೆಯ ದೇವಾಲಯದ ಅರ್ಚಕರ ಮೇಲೆ ನಡೆದಿರುವ ಹಲ್ಲೆಯನ್ನು ’ನಾಚಿಕೆಗೇಡಿನ ಸಂಗತಿ’ ಎಂದು ಖಂಡಿಸಿರುವ ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ, ಸಂತನೇ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶ ರಾಜ್ಯದಲ್ಲಿ ಸಂತರೂ ಸುರಕ್ಷಿತವಾಗಿಲ್ಲ’ ಎಂದು ಟೀಕಿಸಿದ್ದಾರೆ.</p>.<p class="bodytext">ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಮಾಯಾವತಿ, ’ಗೊಂಡ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡುಹಾರಿಸಿರುವ ಪ್ರಕರಣವನ್ನು ಉಲ್ಲೇಖಿಸಿ, ಇದು ನಾಚಿಕೆಗೇಡಿನ ಸಂಗತಿ’ ಎಂದಿದ್ದಾರೆ.</p>.<p class="bodytext">’ರಾಜಸ್ತಾನದಂತೆ, ಗೊಂಡ ಜಿಲ್ಲೆಯಲ್ಲೂ ಅರ್ಚಕರ ಮೇಲೆ ಭೂಗಳ್ಳರಿಂದ (ಲ್ಯಾಂಡ್ ಮಾಫಿಯಾದವರಿಂದ) ದಾಳಿ ನಡೆದಿದೆ. ದೇವಾಲಯದ ಜಮೀನನ್ನು ಆಕ್ರಮಿಸಿಕೊಳ್ಳುವ ಇಂಥ ಪ್ರಯತ್ನ ನಿಜಕ್ಕೂ ನಾಚಿಕೆಗೇಡಿನ ವಿಷಯ. ಸಂತರ ಆಳ್ವಿಕೆಯ ಈ ರಾಜ್ಯದಲ್ಲಿ ಸಾಧು–ಸಂತರೂ ಸುರಕ್ಷಿತವಾಗಿಲ್ಲ. ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಆರೋಪಿಸಿದ್ದಾರೆ.</p>.<p class="bodytext">ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಘಟನೆಗೆ ಸಂಬಂಧಿಸಿದ ಎಲ್ಲಾ ಭೂಗಳ್ಳರ ಎಲ್ಲ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮಾಯಾವತಿ ಉತ್ತರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಾಗಯೇ, ಸಾಧು–ಸಂತರಿಗೆ ರಕ್ಷಣೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.</p>.<p class="bodytext">ಗೊಂಡ ಜಿಲ್ಲೆಯ ತಿರ್ರೆ ಮನೋರಮಾ ಗ್ರಾಮದ 30 ಎಕರೆಯಲ್ಲಿರುವ ರಾಮ್ಜಂಕಿ ದೇವಾಲಯದ ಅರ್ಚಕ ಮತ್ತು ಕೆಲವು ಗ್ರಾಮಸ್ಥರ ನಡುವೆ ಜಮೀನು ಕುರಿತು ವಿವಾದವಿತ್ತು. ಅರ್ಚಕ ಅತುಲ್ ಬಾಬಾ ಅಲಿಯಾಸ್ ಸಾಮ್ರಾಟ್ ದಾಸ್ ಮೇಲೆ ಭಾನುವಾರ ಬೆಳಿಗ್ಗೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಈ ಘಟನೆಯಲ್ಲಿ ಅವರ ಎಡಬುಜಕ್ಕೆ ಗಾಯವಾಗಿತ್ತು. ಗಾಯಗೊಂಡ ಅರ್ಚಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಲಖನೌದ ಕಿಂಜ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಕಳುಹಿಸಲಾಗಿತ್ತು. ದಾಸ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>