<p><strong>ಲಖನೌ</strong>: ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಸಂಸ್ಥಾಪಕ ಕಾನ್ಶಿರಾಮ್ ಅವರಿಗೆ ಭಾರತ ರತ್ನ ನೀಡುವಂತೆ ಬಿಎಸ್ಪಿ ನಾಯಕಿ ಮಾಯಾವತಿ ಒತ್ತಾಯಿಸಿದ್ದಾರೆ.</p><p>ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ(ಮರಣೋತ್ತರ) ಪ್ರಶಸ್ತಿ ನೀಡಿ ಗೌರವಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಅವರು ಕಾನ್ಶಿರಾಮ್ ಅವರಿಗೂ ಈ ಗೌರವ ಸಲ್ಲಬೇಕಿದೆ ಎಂದಿದ್ದಾರೆ.</p><p>ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ದೇಶದ ಅತ್ಯಂತ ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕು, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಜೀವನದುದ್ದಕ್ಕೂ ಹೋರಾಡಿದ ಮಹಾನ್ ನಾಯಕ ಕರ್ಪೂರಿ ಅವರಿಗೆ ಅವರ ಜನ್ಮ ಶತಮಾನೋತ್ಸವ ದಿನವಾದ ಇಂದು ಗೌರವವನ್ನು ಸಲ್ಲಿಸುತ್ತೇನೆ’ ಎಂದರು.</p><p>‘ದಲಿತರು ಮತ್ತು ಇತರ ನಿರ್ಲಕ್ಷಿತ ಜನರು ಸ್ವಾಭಿಮಾನದಿಂದ ಬದುಕಲು ಸಹಾಯ ಮಾಡುವ ಮೂಲಕ ಅವರ ಸಬಲೀಕರಣಕ್ಕೆ ದುಡಿದ ಕಾನ್ಶಿರಾಮ್ ಅವರ ಕೊಡುಗೆ ಅವಿಸ್ಮರಣೀಯ. ಅವರಿಗೂ ಭಾರತ ರತ್ನ ನೀಡಿ ಗೌರವಿಸಬೇಕೆಂಬುವುದು ಕೋಟ್ಯಂತರ ಜನರ ಆಶಯವಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಸಂಸ್ಥಾಪಕ ಕಾನ್ಶಿರಾಮ್ ಅವರಿಗೆ ಭಾರತ ರತ್ನ ನೀಡುವಂತೆ ಬಿಎಸ್ಪಿ ನಾಯಕಿ ಮಾಯಾವತಿ ಒತ್ತಾಯಿಸಿದ್ದಾರೆ.</p><p>ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ(ಮರಣೋತ್ತರ) ಪ್ರಶಸ್ತಿ ನೀಡಿ ಗೌರವಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಅವರು ಕಾನ್ಶಿರಾಮ್ ಅವರಿಗೂ ಈ ಗೌರವ ಸಲ್ಲಬೇಕಿದೆ ಎಂದಿದ್ದಾರೆ.</p><p>ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ದೇಶದ ಅತ್ಯಂತ ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕು, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಜೀವನದುದ್ದಕ್ಕೂ ಹೋರಾಡಿದ ಮಹಾನ್ ನಾಯಕ ಕರ್ಪೂರಿ ಅವರಿಗೆ ಅವರ ಜನ್ಮ ಶತಮಾನೋತ್ಸವ ದಿನವಾದ ಇಂದು ಗೌರವವನ್ನು ಸಲ್ಲಿಸುತ್ತೇನೆ’ ಎಂದರು.</p><p>‘ದಲಿತರು ಮತ್ತು ಇತರ ನಿರ್ಲಕ್ಷಿತ ಜನರು ಸ್ವಾಭಿಮಾನದಿಂದ ಬದುಕಲು ಸಹಾಯ ಮಾಡುವ ಮೂಲಕ ಅವರ ಸಬಲೀಕರಣಕ್ಕೆ ದುಡಿದ ಕಾನ್ಶಿರಾಮ್ ಅವರ ಕೊಡುಗೆ ಅವಿಸ್ಮರಣೀಯ. ಅವರಿಗೂ ಭಾರತ ರತ್ನ ನೀಡಿ ಗೌರವಿಸಬೇಕೆಂಬುವುದು ಕೋಟ್ಯಂತರ ಜನರ ಆಶಯವಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>