<p><strong>ಲಖನೌ</strong>: ಸೋದರಳಿಯ ಆಕಾಶ್ ಆನಂದ್ ಅವರೇ ತಮ್ಮ ಉತ್ತರಾಧಿಕಾರಿ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಭಾನುವಾರ ಘೋಷಿಸಿದ್ದಾರೆ. ಜೊತೆಗೆ ಅವರನ್ನೇ ಪಕ್ಷದ ರಾಷ್ಟ್ರೀಯ ಸಂಚಾಲಕರನ್ನಾಗಿಯೂ ನೇಮಿಸಿದ್ದಾರೆ.</p>.<p>ಲೋಕಸಭೆ ಚುನಾವಣೆ ನಡೆಯುತ್ತಿದ್ದ ವೇಳೆಯೇ ಆಕಾಶ್ ಅವರನ್ನು ಪಕ್ಷದ ಸಂಚಾಲಕ ಹುದ್ದೆಯಿಂದ ಕೆಳಗಿಳಿಸಿದ್ದ ಮಾಯಾವತಿ, ಅವರನ್ನು ಅಪ್ರಬುದ್ಧ ಎಂದೂ ಕರೆದಿದ್ದರು.</p>.<p>ಪಕ್ಷದ ರಾಷ್ಟ್ರಮಟ್ಟದ ಸಭೆಯು ಭಾನುವಾರ ನಡೆಯಿತು. ಸಭೆಯಲ್ಲಿ ಬಿಡುಗಡೆ ಮಾಡಲಾದ ಪ್ರಕಟಣೆಯಲ್ಲಿ, ‘ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಆಕಾಶ್ ಆನಂದ್ಗೆ ತಮ್ಮ ಹಿಂದಿನ ಹುದ್ದೆಯನ್ನು ಮರಳಿ ನೀಡಿದ್ದಾರೆ. ಆಕಾಶ್ ಅವರೇ ಮಾಯಾವತಿ ಅವರ ಉತ್ತರಾಧಿಕಾರಿಯಾಗಿ ಮುಂದುವರಿಯಲಿದ್ದಾರೆ’ ಎಂದು ಹೇಳಲಾಗಿದೆ. </p>.<p>‘ಪಕ್ಷ ಹಿತದೃಷ್ಟಿಯಿಂದ ಆಕಾಶ್ ಪ್ರಬುದ್ಧ ನಾಯಕನಾಗಿ ಹೊರಹೊಮ್ಮಲಿದ್ದಾನೆ ಎಂಬ ವಿಶ್ವಾಸವಿದೆ. ಮೊದಲಿಗಿಂತಲೂ ಹೆಚ್ಚಿನ ಗೌರವ ನೀಡುವ ಮೂಲಕ ಪಕ್ಷದ ಸದಸ್ಯರು ಆತನನ್ನು ಪ್ರೋತ್ಸಾಹಿಸಲಿದ್ದಾರೆ. ಭವಿಷ್ಯದಲ್ಲಿ ಅವನು ನನ್ನ ನಿರೀಕ್ಷೆ ಈಡೇರಿಸಲಿದ್ದಾನೆ ಎಂಬ ನಂಬಿಕೆಯಿದೆ’ ಎಂದು ಮಾಯಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಆಕಾಶ್ ಆನಂದ್ ತಮ್ಮ ಉತ್ತರಾಧಿಕಾರಿ ಎಂದು ಮಾಯಾವತಿ ಅವರು ಕಳೆದ ವರ್ಷ ಡಿಸೆಂಬರ್ನಲ್ಲಿ ಘೋಷಿಸಿದ್ದರು. ಲೋಕಸಭೆ ಚುನಾಣೆಯ ಮೂರನೇ ಹಂತದ ಮತದಾನ ನಡೆಯುವ ವೇಳೆ ತಮ್ಮ ನಿರ್ಧಾರ ಬದಲಿಸಿದ್ದರು.</p>.<p>ಚುನಾವಣಾ ಪ್ರಚಾರದ ವೇಳೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎಂಬ ಆರೋಪದ ಮೇರೆಗೆ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಅಡಿ ದೂರು ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಸೋದರಳಿಯ ಆಕಾಶ್ ಆನಂದ್ ಅವರೇ ತಮ್ಮ ಉತ್ತರಾಧಿಕಾರಿ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಭಾನುವಾರ ಘೋಷಿಸಿದ್ದಾರೆ. ಜೊತೆಗೆ ಅವರನ್ನೇ ಪಕ್ಷದ ರಾಷ್ಟ್ರೀಯ ಸಂಚಾಲಕರನ್ನಾಗಿಯೂ ನೇಮಿಸಿದ್ದಾರೆ.</p>.<p>ಲೋಕಸಭೆ ಚುನಾವಣೆ ನಡೆಯುತ್ತಿದ್ದ ವೇಳೆಯೇ ಆಕಾಶ್ ಅವರನ್ನು ಪಕ್ಷದ ಸಂಚಾಲಕ ಹುದ್ದೆಯಿಂದ ಕೆಳಗಿಳಿಸಿದ್ದ ಮಾಯಾವತಿ, ಅವರನ್ನು ಅಪ್ರಬುದ್ಧ ಎಂದೂ ಕರೆದಿದ್ದರು.</p>.<p>ಪಕ್ಷದ ರಾಷ್ಟ್ರಮಟ್ಟದ ಸಭೆಯು ಭಾನುವಾರ ನಡೆಯಿತು. ಸಭೆಯಲ್ಲಿ ಬಿಡುಗಡೆ ಮಾಡಲಾದ ಪ್ರಕಟಣೆಯಲ್ಲಿ, ‘ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಆಕಾಶ್ ಆನಂದ್ಗೆ ತಮ್ಮ ಹಿಂದಿನ ಹುದ್ದೆಯನ್ನು ಮರಳಿ ನೀಡಿದ್ದಾರೆ. ಆಕಾಶ್ ಅವರೇ ಮಾಯಾವತಿ ಅವರ ಉತ್ತರಾಧಿಕಾರಿಯಾಗಿ ಮುಂದುವರಿಯಲಿದ್ದಾರೆ’ ಎಂದು ಹೇಳಲಾಗಿದೆ. </p>.<p>‘ಪಕ್ಷ ಹಿತದೃಷ್ಟಿಯಿಂದ ಆಕಾಶ್ ಪ್ರಬುದ್ಧ ನಾಯಕನಾಗಿ ಹೊರಹೊಮ್ಮಲಿದ್ದಾನೆ ಎಂಬ ವಿಶ್ವಾಸವಿದೆ. ಮೊದಲಿಗಿಂತಲೂ ಹೆಚ್ಚಿನ ಗೌರವ ನೀಡುವ ಮೂಲಕ ಪಕ್ಷದ ಸದಸ್ಯರು ಆತನನ್ನು ಪ್ರೋತ್ಸಾಹಿಸಲಿದ್ದಾರೆ. ಭವಿಷ್ಯದಲ್ಲಿ ಅವನು ನನ್ನ ನಿರೀಕ್ಷೆ ಈಡೇರಿಸಲಿದ್ದಾನೆ ಎಂಬ ನಂಬಿಕೆಯಿದೆ’ ಎಂದು ಮಾಯಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಆಕಾಶ್ ಆನಂದ್ ತಮ್ಮ ಉತ್ತರಾಧಿಕಾರಿ ಎಂದು ಮಾಯಾವತಿ ಅವರು ಕಳೆದ ವರ್ಷ ಡಿಸೆಂಬರ್ನಲ್ಲಿ ಘೋಷಿಸಿದ್ದರು. ಲೋಕಸಭೆ ಚುನಾಣೆಯ ಮೂರನೇ ಹಂತದ ಮತದಾನ ನಡೆಯುವ ವೇಳೆ ತಮ್ಮ ನಿರ್ಧಾರ ಬದಲಿಸಿದ್ದರು.</p>.<p>ಚುನಾವಣಾ ಪ್ರಚಾರದ ವೇಳೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎಂಬ ಆರೋಪದ ಮೇರೆಗೆ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಅಡಿ ದೂರು ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>