<p><strong>ಲಖನೌ:</strong> ‘ವೈದ್ಯೆಯೊಬ್ಬರ ನಖಾಬ್ ಎಳೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಷಾದ ವ್ಯಕ್ತಪಡಿಸಬೇಕು ಮತ್ತು ವಿವಾದವನ್ನು ಅಂತ್ಯಗೊಳಿಸಲು ಯತ್ನಿಸಬೇಕು’ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಶನಿವಾರ ಕರೆ ನೀಡಿದ್ದಾರೆ.</p>.<p>‘ನಖಾಬ್ ವಿವಾದವು ದುರದೃಷ್ಟಕರ. ಕೆಲ ಸಚಿವರ ಹೇಳಿಕೆಗಳಿಂದ ವಿವಾದ ಮುಂದುವರಿಯುತ್ತಲೇ ಇದೆ. ಈ ಪ್ರಕರಣವು ಮಹಿಳೆಯರ ಸುರಕ್ಷತೆ ಮತ್ತು ಘನತೆಗೆ ಸಂಬಂಧಿಸಿದೆ. ಹೀಗಾಗಿ ನಿತೀಶ್ ಕುಮಾರ್ ಅವರು ನೇರವಾಗಿ ಮಧ್ಯಪ್ರವೇಶಿಸುವ ಮೂಲಕ ವಿವಾದವನ್ನು ಬಗೆಹರಿಸಬೇಕಿದೆ’ ಎಂದು ‘ಎಕ್ಸ್’ನಲ್ಲಿ ಒತ್ತಾಯಿಸಿದ್ದಾರೆ. </p>.<p class="bodytext">ನೇಮಕಾತಿ ಪತ್ರ ವಿತರಣೆ ವೇಳೆ ವೈದ್ಯೆಯೊಬ್ಬರು ಧರಿಸಿದ್ದ ನಖಾಬ್ ಅನ್ನು ನಿತೀಶ್ ಕುಮಾರ್ ಅವರು ಎಳೆದಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಘಟನೆ ಬೆನ್ನಲ್ಲೇ, ಮುಖ್ಯಮಂತ್ರಿ ಅವರು ಕ್ಷಮೆಯಾಚಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ‘ವೈದ್ಯೆಯೊಬ್ಬರ ನಖಾಬ್ ಎಳೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಷಾದ ವ್ಯಕ್ತಪಡಿಸಬೇಕು ಮತ್ತು ವಿವಾದವನ್ನು ಅಂತ್ಯಗೊಳಿಸಲು ಯತ್ನಿಸಬೇಕು’ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಶನಿವಾರ ಕರೆ ನೀಡಿದ್ದಾರೆ.</p>.<p>‘ನಖಾಬ್ ವಿವಾದವು ದುರದೃಷ್ಟಕರ. ಕೆಲ ಸಚಿವರ ಹೇಳಿಕೆಗಳಿಂದ ವಿವಾದ ಮುಂದುವರಿಯುತ್ತಲೇ ಇದೆ. ಈ ಪ್ರಕರಣವು ಮಹಿಳೆಯರ ಸುರಕ್ಷತೆ ಮತ್ತು ಘನತೆಗೆ ಸಂಬಂಧಿಸಿದೆ. ಹೀಗಾಗಿ ನಿತೀಶ್ ಕುಮಾರ್ ಅವರು ನೇರವಾಗಿ ಮಧ್ಯಪ್ರವೇಶಿಸುವ ಮೂಲಕ ವಿವಾದವನ್ನು ಬಗೆಹರಿಸಬೇಕಿದೆ’ ಎಂದು ‘ಎಕ್ಸ್’ನಲ್ಲಿ ಒತ್ತಾಯಿಸಿದ್ದಾರೆ. </p>.<p class="bodytext">ನೇಮಕಾತಿ ಪತ್ರ ವಿತರಣೆ ವೇಳೆ ವೈದ್ಯೆಯೊಬ್ಬರು ಧರಿಸಿದ್ದ ನಖಾಬ್ ಅನ್ನು ನಿತೀಶ್ ಕುಮಾರ್ ಅವರು ಎಳೆದಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಘಟನೆ ಬೆನ್ನಲ್ಲೇ, ಮುಖ್ಯಮಂತ್ರಿ ಅವರು ಕ್ಷಮೆಯಾಚಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>