<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ (ಎಸ್ಪಿ) ಬಹುಜನ ಸಮಾಜವಾದಿ ಪಕ್ಷವು (ಬಿಎಸ್ಪಿ) ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳನ್ನು ಪಕ್ಷದ ಮುಖ್ಯಸ್ಥೆ ಮಾಯಾವತಿ ಅಲ್ಲಗಳೆದರು.</p>.<p>ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈತ್ರಿ ಕುರಿತ ವರದಿಗಳು ಸುಳ್ಳುಸುದ್ದಿಗಳಾಗಿವೆ. ನಮ್ಮ ಪಕ್ಷವು ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ’ ಎಂದು ಸ್ಪಷ್ಟಪಡಿಸಿದರು. ‘ನಮ್ಮ ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನದ ಭಾಗವಾಗಿ ಈ ರೀತಿ ವದಂತಿ ಹಬ್ಬಿಸಲಾಗುತ್ತಿದೆ. ಕಾರ್ಯಕರ್ತರು ಇಂತಹ ಸುದ್ದಿಗಳನ್ನು ನಂಬಬಾರದು’ ಎಂದರು.</p>.<p>ಬಿಜೆಪಿ, ಕಾಂಗ್ರೆಸ್ ಮತ್ತು ಎಸ್ಪಿ ಪಕ್ಷಗಳು ಅಂಬೇಡ್ಕರ್ ವಿರೋಧಿಗಳಾಗಿವೆ. ನಮ್ಮ ಪಕ್ಷಕ್ಕೆ ಹಾನಿ ಮಾಡಲು ಮುಂದಾಗಿವೆ ಎಂದು ಆರೋಪಿಸಿದರು. </p>.<p>ಎಸ್ಪಿ ಹಾಗೂ ಬಿಎಸ್ಪಿಗಳ ನಡುವಿನ ಸಂಬಂಧವು ವೃದ್ಧಿಯಾಗುತ್ತಿದ್ದು, ಇದು ಇನ್ನಷ್ಟು ಗಾಢವಾಗಲಿದೆ ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು. </p>.<p>ಹೀಗಾಗಿ ಪಕ್ಷಗಳು ಮೈತ್ರಿ ಮಾಡಿಕೊಂಡು, ಜಂಟಿಯಾಗಿ ಚುನಾವಣೆಗೆ ಸ್ಪರ್ಧಿಸಲಿವೆ ಎನ್ನಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ (ಎಸ್ಪಿ) ಬಹುಜನ ಸಮಾಜವಾದಿ ಪಕ್ಷವು (ಬಿಎಸ್ಪಿ) ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳನ್ನು ಪಕ್ಷದ ಮುಖ್ಯಸ್ಥೆ ಮಾಯಾವತಿ ಅಲ್ಲಗಳೆದರು.</p>.<p>ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈತ್ರಿ ಕುರಿತ ವರದಿಗಳು ಸುಳ್ಳುಸುದ್ದಿಗಳಾಗಿವೆ. ನಮ್ಮ ಪಕ್ಷವು ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ’ ಎಂದು ಸ್ಪಷ್ಟಪಡಿಸಿದರು. ‘ನಮ್ಮ ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನದ ಭಾಗವಾಗಿ ಈ ರೀತಿ ವದಂತಿ ಹಬ್ಬಿಸಲಾಗುತ್ತಿದೆ. ಕಾರ್ಯಕರ್ತರು ಇಂತಹ ಸುದ್ದಿಗಳನ್ನು ನಂಬಬಾರದು’ ಎಂದರು.</p>.<p>ಬಿಜೆಪಿ, ಕಾಂಗ್ರೆಸ್ ಮತ್ತು ಎಸ್ಪಿ ಪಕ್ಷಗಳು ಅಂಬೇಡ್ಕರ್ ವಿರೋಧಿಗಳಾಗಿವೆ. ನಮ್ಮ ಪಕ್ಷಕ್ಕೆ ಹಾನಿ ಮಾಡಲು ಮುಂದಾಗಿವೆ ಎಂದು ಆರೋಪಿಸಿದರು. </p>.<p>ಎಸ್ಪಿ ಹಾಗೂ ಬಿಎಸ್ಪಿಗಳ ನಡುವಿನ ಸಂಬಂಧವು ವೃದ್ಧಿಯಾಗುತ್ತಿದ್ದು, ಇದು ಇನ್ನಷ್ಟು ಗಾಢವಾಗಲಿದೆ ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು. </p>.<p>ಹೀಗಾಗಿ ಪಕ್ಷಗಳು ಮೈತ್ರಿ ಮಾಡಿಕೊಂಡು, ಜಂಟಿಯಾಗಿ ಚುನಾವಣೆಗೆ ಸ್ಪರ್ಧಿಸಲಿವೆ ಎನ್ನಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>