<p><strong>ಲಖನೌ</strong>: ಗುಂಪುಗಾರಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಆರೋಪದ ಮೇಲೆ ಸೋದರಳಿಯ ಆಕಾಶ್ ಆನಂದ್ ಅವರ ಮಾವ ಅಶೋಕ್ ಸಿದ್ದಾರ್ಥ್ ಅವರನ್ನು ಬಹುಜನ ಸಮಾಜವಾದಿ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಪಕ್ಷದಿಂದ ಉಚ್ಛಾಟಿಸಿದ್ದಾರೆ.</p><p>ಆಕಾಶ್ ಆನಂದ್ ಅವರು ಬಿಎಸ್ಪಿ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿದ್ದು, ಮಾಯಾವತಿ ಅವರ ಉತ್ತರಾಧಿಕಾರಿಯಾಗಿದ್ದಾರೆ.</p><p>ಸಿದ್ದಾರ್ಥ್ ಅವರೊಂದಿಗೆ ಬಿಎಸ್ಪಿಯ ಮೀರತ್ ಜಿಲ್ಲಾ ಉಸ್ತುವಾರಿ ನಿತಿನ್ ಸಿಂಗ್ ಅವರನ್ನೂ ಉಚ್ಛಾಟಿಸಿದ್ದಾರೆ. ಸಿಂಗ್ ಅವರು ದಕ್ಷಿಣ ರಾಜ್ಯಗಳಲ್ಲಿ ಪಕ್ಷದ ಕಾರ್ಯ ಚಟುವಟಿಕೆಯ ಮೇಲುಸ್ತುವಾರಿಯನ್ನು ವಹಿಸಿಕೊಂಡಿದ್ದರು.</p><p>ಈ ಬಗ್ಗೆ ಎಕ್ಸ್ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾವತಿ, ‘ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಮಾಜಿ ರಾಜ್ಯಸಭಾ ಸಂಸದ ಡಾ. ಅಶೋಕ್ ಸಿದ್ದಾರ್ಥ್ ಮತ್ತು ನಿತಿನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ’ ಎಂದಿದ್ದಾರೆ.</p><p>ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯು ಕಳಪೆ ಪ್ರದರ್ಶನ ನೀಡಿದ್ದು, ಸ್ಪರ್ಧಿಸಿದ್ದ ಎಲ್ಲ ಸ್ಥಾನಗಳಲ್ಲಿ ಬಿಎಸ್ಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ವಿರುದ್ಧ ಕಠಿಣ ಕ್ರಮಕ್ಕೆ ಮಾಯಾವತಿ ಅವರು ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಗುಂಪುಗಾರಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಆರೋಪದ ಮೇಲೆ ಸೋದರಳಿಯ ಆಕಾಶ್ ಆನಂದ್ ಅವರ ಮಾವ ಅಶೋಕ್ ಸಿದ್ದಾರ್ಥ್ ಅವರನ್ನು ಬಹುಜನ ಸಮಾಜವಾದಿ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಪಕ್ಷದಿಂದ ಉಚ್ಛಾಟಿಸಿದ್ದಾರೆ.</p><p>ಆಕಾಶ್ ಆನಂದ್ ಅವರು ಬಿಎಸ್ಪಿ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿದ್ದು, ಮಾಯಾವತಿ ಅವರ ಉತ್ತರಾಧಿಕಾರಿಯಾಗಿದ್ದಾರೆ.</p><p>ಸಿದ್ದಾರ್ಥ್ ಅವರೊಂದಿಗೆ ಬಿಎಸ್ಪಿಯ ಮೀರತ್ ಜಿಲ್ಲಾ ಉಸ್ತುವಾರಿ ನಿತಿನ್ ಸಿಂಗ್ ಅವರನ್ನೂ ಉಚ್ಛಾಟಿಸಿದ್ದಾರೆ. ಸಿಂಗ್ ಅವರು ದಕ್ಷಿಣ ರಾಜ್ಯಗಳಲ್ಲಿ ಪಕ್ಷದ ಕಾರ್ಯ ಚಟುವಟಿಕೆಯ ಮೇಲುಸ್ತುವಾರಿಯನ್ನು ವಹಿಸಿಕೊಂಡಿದ್ದರು.</p><p>ಈ ಬಗ್ಗೆ ಎಕ್ಸ್ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾವತಿ, ‘ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಮಾಜಿ ರಾಜ್ಯಸಭಾ ಸಂಸದ ಡಾ. ಅಶೋಕ್ ಸಿದ್ದಾರ್ಥ್ ಮತ್ತು ನಿತಿನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ’ ಎಂದಿದ್ದಾರೆ.</p><p>ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯು ಕಳಪೆ ಪ್ರದರ್ಶನ ನೀಡಿದ್ದು, ಸ್ಪರ್ಧಿಸಿದ್ದ ಎಲ್ಲ ಸ್ಥಾನಗಳಲ್ಲಿ ಬಿಎಸ್ಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ವಿರುದ್ಧ ಕಠಿಣ ಕ್ರಮಕ್ಕೆ ಮಾಯಾವತಿ ಅವರು ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>