<p><strong>ನವದೆಹಲಿ:</strong> ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠರಾದ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಮುಖ್ಯ ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಿಸಿದ್ದಾರೆ.</p>.<p>ಆನಂದ್ ಅವರ ಅಧೀನದಲ್ಲಿ ಮೂವರು ರಾಷ್ಟ್ರೀಯ ಸಂಯೋಜಕರು ಕಾರ್ಯನಿರ್ವಹಿಸಲಿದ್ದಾರೆ.</p>.<p>ಹೊಸ ಹುದ್ದೆಯನ್ನು ಆನಂದ್ಗಾಗಿಯೇ ಸೃಷ್ಟಿಸಲಾಗಿದ್ದು, ಪಕ್ಷದಲ್ಲಿ ಮಾಯಾವತಿ ನಂತರದ ಸ್ಥಾನವನ್ನು ಹೊಂದಿದ್ದಾರೆ.</p>.<p>ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ನಡೆದ ಪಕ್ಷದ ಸಂಘಟಕರ ಸಭೆಯಲ್ಲಿ ಮಾಯಾವತಿ ಅವರು ಆನಂದ್ಗೆ ಉನ್ನತ ಹುದ್ದೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ.</p>.<p>‘ಮಾಯಾವತಿ ಅವರು ನನ್ನ ತಪ್ಪುಗಳನ್ನು ಕ್ಷಮಿಸಿದ್ದಾರೆ. ಬಹುಜನರ ಚಳವಳಿಯನ್ನು ಬಲಪಡಿಸಲು ಅವಕಾಶ ನೀಡಿದ್ದಾರೆ’ ಎಂದು ಆಕಾಶ್ ಆನಂದ್ ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಕಳೆದ ತಿಂಗಳು ಸಾರ್ವಜನಿಕವಾಗಿ ಕ್ಷಮೆ ಕೋರಿದ ಬಳಿಕ ಹಾಗೂ ‘ಮಾಯಾವತಿ ಒಬ್ಬರೇ ನನ್ನ ರಾಜಕೀಯ ಗುರು’ ಎಂದು ಆನಂದ್ ಹೇಳಿಕೆ ನೀಡಿದ ನಂತರ ಬಿಎಸ್ಪಿಗೆ ಮರುಸೇರ್ಪಡೆ ಮಾಡಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠರಾದ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಮುಖ್ಯ ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಿಸಿದ್ದಾರೆ.</p>.<p>ಆನಂದ್ ಅವರ ಅಧೀನದಲ್ಲಿ ಮೂವರು ರಾಷ್ಟ್ರೀಯ ಸಂಯೋಜಕರು ಕಾರ್ಯನಿರ್ವಹಿಸಲಿದ್ದಾರೆ.</p>.<p>ಹೊಸ ಹುದ್ದೆಯನ್ನು ಆನಂದ್ಗಾಗಿಯೇ ಸೃಷ್ಟಿಸಲಾಗಿದ್ದು, ಪಕ್ಷದಲ್ಲಿ ಮಾಯಾವತಿ ನಂತರದ ಸ್ಥಾನವನ್ನು ಹೊಂದಿದ್ದಾರೆ.</p>.<p>ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ನಡೆದ ಪಕ್ಷದ ಸಂಘಟಕರ ಸಭೆಯಲ್ಲಿ ಮಾಯಾವತಿ ಅವರು ಆನಂದ್ಗೆ ಉನ್ನತ ಹುದ್ದೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ.</p>.<p>‘ಮಾಯಾವತಿ ಅವರು ನನ್ನ ತಪ್ಪುಗಳನ್ನು ಕ್ಷಮಿಸಿದ್ದಾರೆ. ಬಹುಜನರ ಚಳವಳಿಯನ್ನು ಬಲಪಡಿಸಲು ಅವಕಾಶ ನೀಡಿದ್ದಾರೆ’ ಎಂದು ಆಕಾಶ್ ಆನಂದ್ ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಕಳೆದ ತಿಂಗಳು ಸಾರ್ವಜನಿಕವಾಗಿ ಕ್ಷಮೆ ಕೋರಿದ ಬಳಿಕ ಹಾಗೂ ‘ಮಾಯಾವತಿ ಒಬ್ಬರೇ ನನ್ನ ರಾಜಕೀಯ ಗುರು’ ಎಂದು ಆನಂದ್ ಹೇಳಿಕೆ ನೀಡಿದ ನಂತರ ಬಿಎಸ್ಪಿಗೆ ಮರುಸೇರ್ಪಡೆ ಮಾಡಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>