<p><strong>ಲಖನೌ:</strong> ಉತ್ತರಪ್ರದೇಶದ ಚುನಾವಣಾ ರಾಜಕಾರಣದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುತ್ತಿರುವ ಬಿಎಸ್ಪಿ ನಾಯಕಿ ಮಾಯಾವತಿ ಅವರು ಗುರುವಾರ ಪಕ್ಷದ ಅಪಾರ ಕಾರ್ಯಕರ್ತರೊಂದಿಗೆ ಬೃಹತ್ ರ್ಯಾಲಿ ನಡೆಸಿದರು.</p>.<p>ಬಿಎಸ್ಪಿ ಸಂಸ್ಥಾಪಕ ಕಾನ್ಶಿರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಎಸ್ಪಿ, ಕಾಂಗ್ರೆಸ್ ಹಾಗೂ ದಲಿತ ನಾಯಕ ಚಂದ್ರಶೇಖರ್ (ರಾವಣ್) ವಿರುದ್ಧ ಮಾಯಾವತಿ ವಾಗ್ದಾಳಿ ನಡೆಸಿದರು. ಆದರೆ ಬಿಜೆಪಿ ಬಗ್ಗೆ ಮೃದು ಧೋರಣೆ ಅನುಸರಿಸಿದರು.</p>.<p>2027ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ರ್ಯಾಲಿಯಲ್ಲಿ ಘೋಷಿಸಿದ ಮಾಯಾವತಿ, ವೇದಿಕೆಯಲ್ಲಿದ್ದ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್ಪಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಪ್ರಕಟಿಸಿದರು.</p>.<p><strong>ಮತಪತ್ರಕ್ಕೆ ಮಾಯಾವತಿ ಆಗ್ರಹ:</strong></p>.<p>‘ನಮ್ಮ ಪಕ್ಷದ ಪರಂಪರಾಗತ ದಲಿತ ಮತಗಳನ್ನು ನಮ್ಮಿಂದ ದೂರ ಮಾಡುವ ಷಡ್ಯಂತ್ರ ನಡೆದಿದೆ. ಮುಂಬರುವ ಚುನಾವಣೆಗಳನ್ನು ಮತಪತ್ರಗಳನ್ನು ಬಳಸಿ ನಡೆಸಬೇಕು’ ಎಂದು ಮಾಯಾವತಿ ಆಗ್ರಹಿಸಿದರು.</p>.<p>ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಹೆಸರು ಹೇಳದೇ ಟೀಕಿಸಿದ ಮಾಯಾವತಿ, ‘ ಪಿಡಿಎ(ಹಿಂದುಳಿದ, ದಲಿತ, ಅಲ್ಪಸಂಖ್ಯಾತ) ಸೂತ್ರದ ಮೂಲಕ ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಸಮಾಜವಾದಿ ಪಕ್ಷ ಯತ್ನಿಸುತ್ತಿದೆ. ಅಧಿಕಾರದಲ್ಲಿದ್ದಾಗ ಕಾನ್ಶಿರಾಮ್ ಅವರನ್ನು ಒಂದು ದಿನವೂ ಅದು ಸ್ಮರಿಸಲಿಲ್ಲ’ ಎಂದರು.</p>.<p>‘ಕಾಂಗ್ರೆಸ್ನವರು ಅಂಬೇಡ್ಕರ್ಗೆ ಅಗೌರವ ತೋರಿದರು. ಈಗ ಸಂವಿಧಾನದ ಹೆಸರಿನಲ್ಲಿ ನಾಟಕ ಆಡುತ್ತಿದ್ದಾರೆ’ ಎಂದು ಮಾಯಾವತಿ ಟೀಕಿಸಿದರು.</p>.<p>2012ರಲ್ಲಿ ಅಧಿಕಾರ ಕಳೆದುಕೊಂಡಿದ್ದ ಬಿಎಸ್ಪಿ, 2022ರ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನ ಗೆದ್ದಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಖಾತೆ ತೆರೆಯಲೂ ಆಗಿರಲಿಲ್ಲ. </p>.<div><blockquote>ಯೋಗಿ ಆದಿತ್ಯನಾಥರ ಸರ್ಕಾರ ನನ್ನ ಮನವಿ ನಂತರ ಪ್ರವೇಶ ಶುಲ್ಕದ ಹಣದಲ್ಲಿ ಕಾನ್ಶಿರಾಮ್ ಅವರ ಸ್ಮಾರಕವನ್ನು ನವೀಕರಿಸಿತು.</blockquote><span class="attribution">ಮಾಯಾವತಿ ಬಿಎಸ್ಪಿ ನಾಯಕಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರಪ್ರದೇಶದ ಚುನಾವಣಾ ರಾಜಕಾರಣದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುತ್ತಿರುವ ಬಿಎಸ್ಪಿ ನಾಯಕಿ ಮಾಯಾವತಿ ಅವರು ಗುರುವಾರ ಪಕ್ಷದ ಅಪಾರ ಕಾರ್ಯಕರ್ತರೊಂದಿಗೆ ಬೃಹತ್ ರ್ಯಾಲಿ ನಡೆಸಿದರು.</p>.<p>ಬಿಎಸ್ಪಿ ಸಂಸ್ಥಾಪಕ ಕಾನ್ಶಿರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಎಸ್ಪಿ, ಕಾಂಗ್ರೆಸ್ ಹಾಗೂ ದಲಿತ ನಾಯಕ ಚಂದ್ರಶೇಖರ್ (ರಾವಣ್) ವಿರುದ್ಧ ಮಾಯಾವತಿ ವಾಗ್ದಾಳಿ ನಡೆಸಿದರು. ಆದರೆ ಬಿಜೆಪಿ ಬಗ್ಗೆ ಮೃದು ಧೋರಣೆ ಅನುಸರಿಸಿದರು.</p>.<p>2027ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ರ್ಯಾಲಿಯಲ್ಲಿ ಘೋಷಿಸಿದ ಮಾಯಾವತಿ, ವೇದಿಕೆಯಲ್ಲಿದ್ದ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್ಪಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಪ್ರಕಟಿಸಿದರು.</p>.<p><strong>ಮತಪತ್ರಕ್ಕೆ ಮಾಯಾವತಿ ಆಗ್ರಹ:</strong></p>.<p>‘ನಮ್ಮ ಪಕ್ಷದ ಪರಂಪರಾಗತ ದಲಿತ ಮತಗಳನ್ನು ನಮ್ಮಿಂದ ದೂರ ಮಾಡುವ ಷಡ್ಯಂತ್ರ ನಡೆದಿದೆ. ಮುಂಬರುವ ಚುನಾವಣೆಗಳನ್ನು ಮತಪತ್ರಗಳನ್ನು ಬಳಸಿ ನಡೆಸಬೇಕು’ ಎಂದು ಮಾಯಾವತಿ ಆಗ್ರಹಿಸಿದರು.</p>.<p>ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಹೆಸರು ಹೇಳದೇ ಟೀಕಿಸಿದ ಮಾಯಾವತಿ, ‘ ಪಿಡಿಎ(ಹಿಂದುಳಿದ, ದಲಿತ, ಅಲ್ಪಸಂಖ್ಯಾತ) ಸೂತ್ರದ ಮೂಲಕ ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಸಮಾಜವಾದಿ ಪಕ್ಷ ಯತ್ನಿಸುತ್ತಿದೆ. ಅಧಿಕಾರದಲ್ಲಿದ್ದಾಗ ಕಾನ್ಶಿರಾಮ್ ಅವರನ್ನು ಒಂದು ದಿನವೂ ಅದು ಸ್ಮರಿಸಲಿಲ್ಲ’ ಎಂದರು.</p>.<p>‘ಕಾಂಗ್ರೆಸ್ನವರು ಅಂಬೇಡ್ಕರ್ಗೆ ಅಗೌರವ ತೋರಿದರು. ಈಗ ಸಂವಿಧಾನದ ಹೆಸರಿನಲ್ಲಿ ನಾಟಕ ಆಡುತ್ತಿದ್ದಾರೆ’ ಎಂದು ಮಾಯಾವತಿ ಟೀಕಿಸಿದರು.</p>.<p>2012ರಲ್ಲಿ ಅಧಿಕಾರ ಕಳೆದುಕೊಂಡಿದ್ದ ಬಿಎಸ್ಪಿ, 2022ರ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನ ಗೆದ್ದಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಖಾತೆ ತೆರೆಯಲೂ ಆಗಿರಲಿಲ್ಲ. </p>.<div><blockquote>ಯೋಗಿ ಆದಿತ್ಯನಾಥರ ಸರ್ಕಾರ ನನ್ನ ಮನವಿ ನಂತರ ಪ್ರವೇಶ ಶುಲ್ಕದ ಹಣದಲ್ಲಿ ಕಾನ್ಶಿರಾಮ್ ಅವರ ಸ್ಮಾರಕವನ್ನು ನವೀಕರಿಸಿತು.</blockquote><span class="attribution">ಮಾಯಾವತಿ ಬಿಎಸ್ಪಿ ನಾಯಕಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>