ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಮಾಯಾವತಿ, ‘ಕೊರೊನಾ – ಲಾಕ್ಡೌನ್ ಕಾರಣದಿಂದಾಗಿ ಕೋಟ್ಯಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಅನಿರೀಕ್ಷಿತವಾಗಿ ಎದುರಾದ ಈ ಸಮಸ್ಯೆಯಿಂದಾಗಿ ಪೋಷಕರಿಗೆ, ಮಕ್ಕಳ ಶಾಲಾ–ಕಾಲೇಜು ಶುಲ್ಕವನ್ನು ಭರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ದುರ್ದೈವದ ಸಂಗತಿ‘ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.