<p><strong>ನವದೆಹಲಿ</strong>: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ಅಧ್ಯಕ್ಷೆ ಮಾಯಾವತಿ ಹೇಳಿದರು. </p>.<p>ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮಾತ್ರವಲ್ಲದೇ ಮುಂಬರಲಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ ಹಾಗೂ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕೂಡ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದರು.</p><p>ನಾವು ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಮತ್ತು ಹೊಸದಾಗಿ ರಚನೆಯಾಗಿರುವ ‘ಇಂಡಿಯಾ’ ಒಕ್ಕೂಟದಿಂದ ದೂರ ಇರುವುದಾಗಿ ಪ್ರಕಟಿಸಿದರು. ಪಂಜಾಬ್ ಮತ್ತು ಹರಿಯಾಣದಲ್ಲಿ ಈ ಎರಡು ಮೈತ್ರಿಕೂಟಗಳಿಂದ ಹೊರಗಿರುವ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಎಸ್ಪಿ ಮುಕ್ತವಾಗಿದೆ ಎಂದು ಮಾಯವತಿ ಹೇಳಿದರು. </p>.<p>ಎನ್ಡಿಎ ಮತ್ತು ಇಂಡಿಯಾ ಮೈತ್ರಿಕೂಟಗಳು ದಲಿತರು ಮತ್ತು ತುಳಿತಕ್ಕೊಳಗಾದ ಸಮುದಾಯಗಳ ಪರವಾಗಿಲ್ಲ ಎಂದು ಮಾಯಾವತಿ ಆರೋಪಿಸಿದರು.</p><p>ಕಾಂಗ್ರೆಸ್ ಜಾತಿವಾದಿ ಮನಸ್ಥಿತಿ ಅಳವಡಿಸಿಕೊಂಡಿದೆ ಮತ್ತು ದಲಿತರ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡಿದೆ, ಬಿಜೆಪಿ ಕೂಡ ಜಾತಿವಾದಿ ಮತ್ತು ಬಂಡವಾಳಶಾಹಿ ಮನಸ್ಥಿತಿ ಹೊಂದಿದೆ. ಈ ಕಾರಣಕ್ಕೆ ತುಳಿತಕ್ಕೊಳಗಾದ ಸಮುದಾಯಗಳು ಬಿಎಸ್ಪಿಯನ್ನು ಬೆಂಬಲಿಸಬೇಕು ಎಂದರು. </p>.<p>ಕಾಂಗ್ರೆಸ್ ಪಕ್ಷ ಬಡವರು ಮತ್ತು ತುಳಿತಕ್ಕೊಳಗಾದವರ ಪರವಾಗಿ ಕೆಲಸ ಮಾಡಿದ್ದರೆ ಹಾಗೂ ಅಂಬೇಡ್ಕರ್ ಮಾತು ಪಾಲಿಸಿದ್ದರೇ ಬಿಎಸ್ಪಿ ರಚಿಸುವ ಅಗತ್ಯ ಇರುತ್ತಿರಲಿಲ್ಲ ಎಂದು ಮಾಯಾವತಿ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ಅಧ್ಯಕ್ಷೆ ಮಾಯಾವತಿ ಹೇಳಿದರು. </p>.<p>ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮಾತ್ರವಲ್ಲದೇ ಮುಂಬರಲಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ ಹಾಗೂ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕೂಡ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದರು.</p><p>ನಾವು ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಮತ್ತು ಹೊಸದಾಗಿ ರಚನೆಯಾಗಿರುವ ‘ಇಂಡಿಯಾ’ ಒಕ್ಕೂಟದಿಂದ ದೂರ ಇರುವುದಾಗಿ ಪ್ರಕಟಿಸಿದರು. ಪಂಜಾಬ್ ಮತ್ತು ಹರಿಯಾಣದಲ್ಲಿ ಈ ಎರಡು ಮೈತ್ರಿಕೂಟಗಳಿಂದ ಹೊರಗಿರುವ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಎಸ್ಪಿ ಮುಕ್ತವಾಗಿದೆ ಎಂದು ಮಾಯವತಿ ಹೇಳಿದರು. </p>.<p>ಎನ್ಡಿಎ ಮತ್ತು ಇಂಡಿಯಾ ಮೈತ್ರಿಕೂಟಗಳು ದಲಿತರು ಮತ್ತು ತುಳಿತಕ್ಕೊಳಗಾದ ಸಮುದಾಯಗಳ ಪರವಾಗಿಲ್ಲ ಎಂದು ಮಾಯಾವತಿ ಆರೋಪಿಸಿದರು.</p><p>ಕಾಂಗ್ರೆಸ್ ಜಾತಿವಾದಿ ಮನಸ್ಥಿತಿ ಅಳವಡಿಸಿಕೊಂಡಿದೆ ಮತ್ತು ದಲಿತರ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡಿದೆ, ಬಿಜೆಪಿ ಕೂಡ ಜಾತಿವಾದಿ ಮತ್ತು ಬಂಡವಾಳಶಾಹಿ ಮನಸ್ಥಿತಿ ಹೊಂದಿದೆ. ಈ ಕಾರಣಕ್ಕೆ ತುಳಿತಕ್ಕೊಳಗಾದ ಸಮುದಾಯಗಳು ಬಿಎಸ್ಪಿಯನ್ನು ಬೆಂಬಲಿಸಬೇಕು ಎಂದರು. </p>.<p>ಕಾಂಗ್ರೆಸ್ ಪಕ್ಷ ಬಡವರು ಮತ್ತು ತುಳಿತಕ್ಕೊಳಗಾದವರ ಪರವಾಗಿ ಕೆಲಸ ಮಾಡಿದ್ದರೆ ಹಾಗೂ ಅಂಬೇಡ್ಕರ್ ಮಾತು ಪಾಲಿಸಿದ್ದರೇ ಬಿಎಸ್ಪಿ ರಚಿಸುವ ಅಗತ್ಯ ಇರುತ್ತಿರಲಿಲ್ಲ ಎಂದು ಮಾಯಾವತಿ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>