<p><strong>ನವದೆಹಲಿ</strong>: ಭಾರತೀಯ ಸೇನೆಯನ್ನು ಮೋದಿ ಸೇನೆ ಎಂದ ಉತ್ತರ ಪ್ರದೇಶ ಮುಖ್ಯಮಂತ್ರಿ <a href="https://www.prajavani.net/stories/national/be-careful-future%E2%80%99-election-626554.html" target="_blank">ಯೋಗಿ ಆದಿತ್ಯನಾಥ</a>ರಿಗೆ ಚುನಾವಣಾ ಆಯೋಗವು ಇನ್ನು ಮುಂದೆ ಮಾತನಾಡುವಾಗ ಎಚ್ಚರದಿಂದಿರಿ ಎಂದು ಹೇಳಿತ್ತು.ಚುನಾವಣಾ ಆಯೋಗದ ನಯವಾದ ಎಚ್ಚರಿಕೆ ವಿರುದ್ಧ ಗುಡುಗಿರುವ ಕಾಂಗ್ರೆಸ್, ಇದೀಗ ಎಂಸಿಸಿ(ಚುನಾವಣಾ ನೀತಿಸಂಹಿತೆ) Modi Code of Conduct ಆಗಿ ಬದಲಾಗಿದೆ ಎಂದಿದೆ.</p>.<p><br />ಕಾಂಗ್ರೆಸ್ ಪಕ್ಷದ ವಕ್ತಾರ ರಣ್ದೀಪ್ ಸಿಂಗ್ ಸುರ್ಜೇವಾಲ ಈ ಬಗ್ಗೆ ಟ್ವೀಟ್ ಮಾಡಿದ್ದು, ಆದಿತ್ಯನಾಥರು ಭಾರತೀಯ ಸೇನೆಯನ್ನು ಅವಮಾನಿಸಿದರೂ ಚುನಾವಣಾ ಆಯೋಗ ಅವರಿಗೆ ಪ್ರೇಮ ಪತ್ರ ಬರೆಯುತ್ತಿದೆ.</p>.<p>ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಕಾಂಗ್ರೆಸ್ ಪ್ರಸ್ತಾಪ ಮಾಡಿದ ನ್ಯಾಯ್ (ಕನಿಷ್ಠ ಆದಾಯ ಯೋಜನೆ)ಯನ್ನು ಟೀಕಿಸಿದರೆ ಚುನಾವಣಾ ಆಯೋಗವು ಇನ್ನು ಮುಂದೆ ನೀವು ಹಾಗೆ ಮಾಡಬೇಡಿ ಎಂದು ಹೇಳುತ್ತದೆ.<br />ಈ ಚುನಾವಣಾ ಆಯೋಗವು ಯಾಕೆ ಅಧಿಕಾರದಲ್ಲಿರುವವರ ಬಗ್ಗೆ ಸತ್ಯ ಹೇಳಲು ಹಿಂದೇಟು ಹಾಕುತ್ತಿದೆ ಎಂದು ಪ್ರಶ್ನಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತೀಯ ಸೇನೆಯನ್ನು ಮೋದಿ ಸೇನೆ ಎಂದ ಉತ್ತರ ಪ್ರದೇಶ ಮುಖ್ಯಮಂತ್ರಿ <a href="https://www.prajavani.net/stories/national/be-careful-future%E2%80%99-election-626554.html" target="_blank">ಯೋಗಿ ಆದಿತ್ಯನಾಥ</a>ರಿಗೆ ಚುನಾವಣಾ ಆಯೋಗವು ಇನ್ನು ಮುಂದೆ ಮಾತನಾಡುವಾಗ ಎಚ್ಚರದಿಂದಿರಿ ಎಂದು ಹೇಳಿತ್ತು.ಚುನಾವಣಾ ಆಯೋಗದ ನಯವಾದ ಎಚ್ಚರಿಕೆ ವಿರುದ್ಧ ಗುಡುಗಿರುವ ಕಾಂಗ್ರೆಸ್, ಇದೀಗ ಎಂಸಿಸಿ(ಚುನಾವಣಾ ನೀತಿಸಂಹಿತೆ) Modi Code of Conduct ಆಗಿ ಬದಲಾಗಿದೆ ಎಂದಿದೆ.</p>.<p><br />ಕಾಂಗ್ರೆಸ್ ಪಕ್ಷದ ವಕ್ತಾರ ರಣ್ದೀಪ್ ಸಿಂಗ್ ಸುರ್ಜೇವಾಲ ಈ ಬಗ್ಗೆ ಟ್ವೀಟ್ ಮಾಡಿದ್ದು, ಆದಿತ್ಯನಾಥರು ಭಾರತೀಯ ಸೇನೆಯನ್ನು ಅವಮಾನಿಸಿದರೂ ಚುನಾವಣಾ ಆಯೋಗ ಅವರಿಗೆ ಪ್ರೇಮ ಪತ್ರ ಬರೆಯುತ್ತಿದೆ.</p>.<p>ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಕಾಂಗ್ರೆಸ್ ಪ್ರಸ್ತಾಪ ಮಾಡಿದ ನ್ಯಾಯ್ (ಕನಿಷ್ಠ ಆದಾಯ ಯೋಜನೆ)ಯನ್ನು ಟೀಕಿಸಿದರೆ ಚುನಾವಣಾ ಆಯೋಗವು ಇನ್ನು ಮುಂದೆ ನೀವು ಹಾಗೆ ಮಾಡಬೇಡಿ ಎಂದು ಹೇಳುತ್ತದೆ.<br />ಈ ಚುನಾವಣಾ ಆಯೋಗವು ಯಾಕೆ ಅಧಿಕಾರದಲ್ಲಿರುವವರ ಬಗ್ಗೆ ಸತ್ಯ ಹೇಳಲು ಹಿಂದೇಟು ಹಾಕುತ್ತಿದೆ ಎಂದು ಪ್ರಶ್ನಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>