<p class="bodytext"><strong>ನವದೆಹಲಿ:</strong>‘ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆ ಸಂಬಂಧ ರಚಿಸಿರುವ ಚುನಾವಣಾ ಸಮಿತಿಗೆ‘ಸಿಖ್ಖರ ಕೊಲೆಪಾತಕ’ ಜಗದೀಶ್ ಟೈಟ್ಲರ್ ಅವರನ್ನು ಆಯ್ಕೆ ಮಾಡುವ ಮೂಲಕ ಸಿಖ್ ಸಮುದಾಯದವನ್ನುಕಾಂಗ್ರೆಸ್ ಅವಮಾನಿಸಿದೆ’ ಎಂದು ಬಿಜೆಪಿ ಮುಖಂಡ ಮನ್ಜೀತ್ ಸಿಂಗ್ ಸಿರ್ಸಾ ದೂರಿದ್ದಾರೆ.</p>.<p>ಈ ಸಂಬಂಧ ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿರ್ಸಾ ಅವರು, ‘ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ನ ಅಧ್ಯಕ್ಷರಾದ ಬಳಿಕ ಪಕ್ಷದ ಧೋರಣೆ ಬದಲಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಗಾಂಧಿ ಕುಟುಂಬದ ಒತ್ತಡ ಕಾರಣದಿಂದಾಗಿ ಸಿಖ್ಖರ ಕೊಲೆಪಾತಕರನ್ನು ರಕ್ಷಿಸಲಾಗುತ್ತಿದೆ’ ಎಂದರು.</p>.<p>‘ಸಿಖ್ಖರ ಮತಗಳನ್ನು ಪಡೆದು ಪಂಜಾಬ್ನಲ್ಲಿ ಅಧಿಕಾರಕ್ಕೇರಿದ ಆಮ್ ಆದ್ಮಿ ಪಕ್ಷವು ಈ ಕುರಿತು ಮೌನ ತಾಳಿದೆ. 1984ರ ಸಿಖ್ ದಂಗೆಯ ಕೊಲೆಗಾರರನ್ನು ಶಿಕ್ಷಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರತಿಜ್ಞೆ ಮಾಡಿದ್ದರು. ಬಹುಶಃ ಅವರು ತಮ್ಮ ಪ್ರತಿಜ್ಞೆಯನ್ನು ಮರೆತಂತಿದೆ’ ಎಂದು ವ್ಯಂಗ್ಯವಾಡಿದರು.</p>.<p>ಜಗದೀಶ್ ಅವರು ದೆಹಲಿ ಕಾಂಗ್ರೆಸ್ನ ನಾಯಕರಾಗಿದ್ದರು. ಕೇಂದ್ರ ಸಚಿವರೂ ಆಗಿದ್ದರು. ಸಿಖ್ ಧಂಗೆಯ ಕುರಿತು ತನಿಖೆ ನಡೆಸಿದ ನಾನಾವತಿ ಸಮಿತಿಯು, ತನ್ನ ವರದಿಯಲ್ಲಿ ಜಗದೀಶ್ ಅವರು ಹೆಸರನ್ನು ಉಲ್ಲೇಖಿಸಿತ್ತು. ನಂತರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ:</strong>‘ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆ ಸಂಬಂಧ ರಚಿಸಿರುವ ಚುನಾವಣಾ ಸಮಿತಿಗೆ‘ಸಿಖ್ಖರ ಕೊಲೆಪಾತಕ’ ಜಗದೀಶ್ ಟೈಟ್ಲರ್ ಅವರನ್ನು ಆಯ್ಕೆ ಮಾಡುವ ಮೂಲಕ ಸಿಖ್ ಸಮುದಾಯದವನ್ನುಕಾಂಗ್ರೆಸ್ ಅವಮಾನಿಸಿದೆ’ ಎಂದು ಬಿಜೆಪಿ ಮುಖಂಡ ಮನ್ಜೀತ್ ಸಿಂಗ್ ಸಿರ್ಸಾ ದೂರಿದ್ದಾರೆ.</p>.<p>ಈ ಸಂಬಂಧ ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿರ್ಸಾ ಅವರು, ‘ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ನ ಅಧ್ಯಕ್ಷರಾದ ಬಳಿಕ ಪಕ್ಷದ ಧೋರಣೆ ಬದಲಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಗಾಂಧಿ ಕುಟುಂಬದ ಒತ್ತಡ ಕಾರಣದಿಂದಾಗಿ ಸಿಖ್ಖರ ಕೊಲೆಪಾತಕರನ್ನು ರಕ್ಷಿಸಲಾಗುತ್ತಿದೆ’ ಎಂದರು.</p>.<p>‘ಸಿಖ್ಖರ ಮತಗಳನ್ನು ಪಡೆದು ಪಂಜಾಬ್ನಲ್ಲಿ ಅಧಿಕಾರಕ್ಕೇರಿದ ಆಮ್ ಆದ್ಮಿ ಪಕ್ಷವು ಈ ಕುರಿತು ಮೌನ ತಾಳಿದೆ. 1984ರ ಸಿಖ್ ದಂಗೆಯ ಕೊಲೆಗಾರರನ್ನು ಶಿಕ್ಷಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರತಿಜ್ಞೆ ಮಾಡಿದ್ದರು. ಬಹುಶಃ ಅವರು ತಮ್ಮ ಪ್ರತಿಜ್ಞೆಯನ್ನು ಮರೆತಂತಿದೆ’ ಎಂದು ವ್ಯಂಗ್ಯವಾಡಿದರು.</p>.<p>ಜಗದೀಶ್ ಅವರು ದೆಹಲಿ ಕಾಂಗ್ರೆಸ್ನ ನಾಯಕರಾಗಿದ್ದರು. ಕೇಂದ್ರ ಸಚಿವರೂ ಆಗಿದ್ದರು. ಸಿಖ್ ಧಂಗೆಯ ಕುರಿತು ತನಿಖೆ ನಡೆಸಿದ ನಾನಾವತಿ ಸಮಿತಿಯು, ತನ್ನ ವರದಿಯಲ್ಲಿ ಜಗದೀಶ್ ಅವರು ಹೆಸರನ್ನು ಉಲ್ಲೇಖಿಸಿತ್ತು. ನಂತರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>