ಈ ಸಂಬಂಧ ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿರ್ಸಾ ಅವರು, ‘ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ನ ಅಧ್ಯಕ್ಷರಾದ ಬಳಿಕ ಪಕ್ಷದ ಧೋರಣೆ ಬದಲಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಗಾಂಧಿ ಕುಟುಂಬದ ಒತ್ತಡ ಕಾರಣದಿಂದಾಗಿ ಸಿಖ್ಖರ ಕೊಲೆಪಾತಕರನ್ನು ರಕ್ಷಿಸಲಾಗುತ್ತಿದೆ’ ಎಂದರು.