ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮೇಲೆ ನಂಬಿಕೆ ಇರಿಸಿದ ದೆಹಲಿಯ ಜನತೆಗೆ ಧನ್ಯವಾದಗಳು. ವಿಶ್ವದ ಅತಿ ದೊಡ್ಡ ಹಾಗೂ ಅತ್ಯಂತ್ಯ ಋಣಾತ್ಮಕವಾದ ಪಕ್ಷವನ್ನು ಮಣಿಸಿ, ನಂಬಿಕಸ್ಥ ಕೇಜ್ರಿವಾಲ್ ಅವರನ್ನು ಜನರು ಗೆಲ್ಲಿಸಿದ್ದಾರೆ. ಇದು ನಮಗೆ ಕೇವಲ ಜಯ ಮಾತ್ರವಲ್ಲ. ನಮಗೆ ಬಂದ ದೊಡ್ಡ ಜವಾಬ್ದಾರಿ‘ ಎಂದು ಅವರು ಹೇಳಿದ್ದಾರೆ.