‘ಹಮಾಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಕುರಿತು ಲೋಕಸಭೆಯಲ್ಲಿ ಕೇಳಿದ್ದ ಪ್ರಶ್ನೆಯನ್ನು ನಾನು ಅನುಮೋದಿಸಿಲ್ಲ. ಕಡತಕ್ಕೆ ಸಹಿ ಹಾಕಿಲ್ಲ’ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಹೇಳಿದ ನಂತರ ಡಿ.9 ರಂದು ರಾಜಕೀಯ ಗದ್ದಲ ಉಂಟಾಗಿತ್ತು. ಈ ಬೆಳವಣಿಗೆಯ ನಂತರ ಸರ್ಕಾರ, ಇದೊಂದು ‘ತಾಂತ್ರಿಕ ದೋಷ’. ಇದನ್ನು ಸರಿಪಡಿಸಲಾಗುವುದು ಎಂಬ ಸ್ಪಷ್ಟನೆ ನೀಡಿತ್ತು.