<p>ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 'ಮನ್ ಕೀ ಬಾತ್' ರೇಡಿಯೊ ಕಾರ್ಯಕ್ರಮದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೋವಿಡ್-19 ವಿರುದ್ಧ ಹೋರಾಡಲು ಸರಿಯಾದ ಬದ್ಧತೆ, ನೀತಿ ಮತ್ತು ನಿರ್ಣಯದ ಅಗತ್ಯವಿದೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/man-ki-baat-pm-modi-said-incidentally-today-is-the-time-of-7-years-of-the-government-834594.html" itemprop="url">ಮೋದಿ ಸರ್ಕಾರಕ್ಕೆ 7 ವರ್ಷ: ಮನ್ ಕಿ ಬಾತ್ನಲ್ಲಿ ಗುಣಗಾನ </a></p>.<p>ಪ್ರತಿ ತಿಂಗಳು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಾರೆ. ಇದು ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ.</p>.<p>ಮೇ 30ರಂದು ಮನ್ ಕೀ ಬಾತ್ 77ನೇ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೋವಿಡ್-19 ವಿರುದ್ಧದ ಹೋರಾಟ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.</p>.<p>ಕೋವಿಡ್-19 ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಅಂಕಿಅಂಶವು ಸರಿಯಿಲ್ಲ ಎಂದು ಕೇರಳದ ವಯನಾಡು ಕ್ಷೇತ್ರದ ಸಂಸದರೂ ಆಗಿರುವ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>ಇದನ್ನು ತಕ್ಷಣ ನಿಯಂತ್ರಿಸದಿದ್ದರೆ ಮತ್ತಷ್ಟು ತೀವ್ರವಾಗಿ ಹರಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ವ್ಯಾಕ್ಸಿನೇಷನ್ ಯೋಜನೆ ಸಮರ್ಪಕವಾಗಿಲ್ಲ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 'ಮನ್ ಕೀ ಬಾತ್' ರೇಡಿಯೊ ಕಾರ್ಯಕ್ರಮದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೋವಿಡ್-19 ವಿರುದ್ಧ ಹೋರಾಡಲು ಸರಿಯಾದ ಬದ್ಧತೆ, ನೀತಿ ಮತ್ತು ನಿರ್ಣಯದ ಅಗತ್ಯವಿದೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/man-ki-baat-pm-modi-said-incidentally-today-is-the-time-of-7-years-of-the-government-834594.html" itemprop="url">ಮೋದಿ ಸರ್ಕಾರಕ್ಕೆ 7 ವರ್ಷ: ಮನ್ ಕಿ ಬಾತ್ನಲ್ಲಿ ಗುಣಗಾನ </a></p>.<p>ಪ್ರತಿ ತಿಂಗಳು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಾರೆ. ಇದು ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ.</p>.<p>ಮೇ 30ರಂದು ಮನ್ ಕೀ ಬಾತ್ 77ನೇ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೋವಿಡ್-19 ವಿರುದ್ಧದ ಹೋರಾಟ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.</p>.<p>ಕೋವಿಡ್-19 ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಅಂಕಿಅಂಶವು ಸರಿಯಿಲ್ಲ ಎಂದು ಕೇರಳದ ವಯನಾಡು ಕ್ಷೇತ್ರದ ಸಂಸದರೂ ಆಗಿರುವ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>ಇದನ್ನು ತಕ್ಷಣ ನಿಯಂತ್ರಿಸದಿದ್ದರೆ ಮತ್ತಷ್ಟು ತೀವ್ರವಾಗಿ ಹರಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ವ್ಯಾಕ್ಸಿನೇಷನ್ ಯೋಜನೆ ಸಮರ್ಪಕವಾಗಿಲ್ಲ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>