ನವದೆಹಲಿ: ದೈನಿಕ್ ಭಾಸ್ಕರ್ ಮಾಧ್ಯಮ ಸಮೂಹದ ಹಲವು ಕಚೇರಿಗಳ ಮೇಲೆ ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚಿಸಿರುವ ಆರೋಪಗಳಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
ಭೋಪಾಲ್, ಜೈಪುರ, ಅಹಮದಾಬಾದ್ ಸೇರಿ ದೇಶದ ಹಲವು ನಗರಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಪತ್ರಿಕೆಯ ಪ್ರಸಾರ ಹೊಂದಿರುವ ಹಿಂದಿಯ ಪ್ರಮುಖ ಮಾಧ್ಯಮ ಸಮೂಹ ದೈನಿಕ್ ಭಾಸ್ಕರ್. ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಅಥವಾ ತೆರಿಗೆ ಇಲಾಖೆಯಿಂದ ದಾಳಿ ಮಾಡಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರ ಬಂದಿಲ್ಲ.
Madhya Pradesh: Visuals from outside the office of Dainik Bhaskar Group in Bhopal
Income Tax Department is conducting searches on Dainik Bhaskar Group in connection with tax evasion case, at multiple locations, as per Sources pic.twitter.com/boH3xLGUUE
ಕಾಂಗ್ರೆಸ್ ಮುಖಂಡ ಮತ್ತು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಟ್ವಿಟರ್ನಲ್ಲಿ ಐಟಿ ದಾಳಿಯ ಕುರಿತು ಪ್ರಕಟಿಸಿದ್ದಾರೆ. ಭೋಪಾಲ್ನ ಪ್ರೆಸ್ ಕಾಂಪ್ಲೆಕ್ಸ್ನಲ್ಲಿರುವ ಕಚೇರಿಯ ಸೇರಿದಂತೆ ತೆರಿಗೆ ಇಲಾಖೆ ಅಧಿಕಾರಿಗಳು ಮಾಧ್ಯಮ ಸಮೂಹದ ಆರು ಕಚೇರಿಗಳಿಗೆ ತೆರಿಗೆ ಅಧಿಕಾರಿಗಳು ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ.
पत्रकारिता पर मोदीशाह का प्रहार!! मोदीशाह का एक मात्र हथियार IT ED CBI! मुझे विश्वास है अग्रवाल बंधु डरेंगे नहीं।
दैनिक भास्कर के विभिन्न ठिकानों पर इनकम टैक्स इन्वेस्टिगेशन विंग की छापामार कार्रवाई शुरू...
प्रेस कॉन्प्लेक्स सहित आधा दर्जन स्थानों पर मौजूद है इनकम टैक्स की टीम