<p><strong>ನವದೆಹಲಿ</strong>: ವೈದ್ಯಕೀಯ ವಿದ್ಯಾರ್ಥಿಯು ಒಂದು ಕಾಲೇಜಿನಿಂದ ಮತ್ತೊಂದು ಕಾಲೇಜಿಗೆ ವರ್ಗಾವಣೆ ಮಾಡಿಕೊಳ್ಳಲು ಪೂರ್ಣ ನಿಷೇಧ ಹೇರಿರುವುದು ಅಮಾನ್ಯ ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿದೆ.</p>.<p>ಈ ಕುರಿತು ಅಗತ್ಯ ಷರತ್ತುಗಳನ್ನು ವಿಧಿಸಿ ವರ್ಗಾವಣೆಗೆ ಅವಕಾಶ ಕಲ್ಪಿಸುವ ಸೂಕ್ತ ನೀತಿ ಜಾರಿಗೊಳಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ (ಎನ್ಎಂಸಿ) ನಿರ್ದೇಶನ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ನ್ಯಾಯಪೀಠ, ‘2023ರ ವೈದ್ಯಕೀಯ ಪದವಿ ಶಿಕ್ಷಣ ನಿಯಂತ್ರಣದ 18ನೇ ನಿಯಮವು ಸಂವಿಧಾನದ ವಿರುದ್ಧ ಹಾಗೂ ಅಸಮಂಜಸವಾಗಿದೆ’ ಎಂದು ತಿಳಿಸಿದೆ.</p>.<p class="title">ಶೇಕಡಾ 40ರಷ್ಟು ಅಂಧತ್ವ ಹೊಂದಿದ್ದ ವೈದ್ಯಕೀಯ ವಿದ್ಯಾರ್ಥಿಯು ಬರ್ಮೇರ್ನ ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ನವದೆಹಲಿಯ ವೈದ್ಯಕೀಯ ಕಾಲೇಜಿಗೆ ವರ್ಗಾವಣೆ ಬಯಸಿ, ಅದಕ್ಕಾಗಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಈ ಆದೇಶ ನೀಡಿದೆ.</p>.<p class="title">ಅರ್ಜಿದಾರರ ವಿಚಾರದಲ್ಲಿ ಮೂರು ವಾರದ ಒಳಗಾಗಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್, ಎನ್ಎಂಸಿಗೆ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವೈದ್ಯಕೀಯ ವಿದ್ಯಾರ್ಥಿಯು ಒಂದು ಕಾಲೇಜಿನಿಂದ ಮತ್ತೊಂದು ಕಾಲೇಜಿಗೆ ವರ್ಗಾವಣೆ ಮಾಡಿಕೊಳ್ಳಲು ಪೂರ್ಣ ನಿಷೇಧ ಹೇರಿರುವುದು ಅಮಾನ್ಯ ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿದೆ.</p>.<p>ಈ ಕುರಿತು ಅಗತ್ಯ ಷರತ್ತುಗಳನ್ನು ವಿಧಿಸಿ ವರ್ಗಾವಣೆಗೆ ಅವಕಾಶ ಕಲ್ಪಿಸುವ ಸೂಕ್ತ ನೀತಿ ಜಾರಿಗೊಳಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ (ಎನ್ಎಂಸಿ) ನಿರ್ದೇಶನ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ನ್ಯಾಯಪೀಠ, ‘2023ರ ವೈದ್ಯಕೀಯ ಪದವಿ ಶಿಕ್ಷಣ ನಿಯಂತ್ರಣದ 18ನೇ ನಿಯಮವು ಸಂವಿಧಾನದ ವಿರುದ್ಧ ಹಾಗೂ ಅಸಮಂಜಸವಾಗಿದೆ’ ಎಂದು ತಿಳಿಸಿದೆ.</p>.<p class="title">ಶೇಕಡಾ 40ರಷ್ಟು ಅಂಧತ್ವ ಹೊಂದಿದ್ದ ವೈದ್ಯಕೀಯ ವಿದ್ಯಾರ್ಥಿಯು ಬರ್ಮೇರ್ನ ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ನವದೆಹಲಿಯ ವೈದ್ಯಕೀಯ ಕಾಲೇಜಿಗೆ ವರ್ಗಾವಣೆ ಬಯಸಿ, ಅದಕ್ಕಾಗಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಈ ಆದೇಶ ನೀಡಿದೆ.</p>.<p class="title">ಅರ್ಜಿದಾರರ ವಿಚಾರದಲ್ಲಿ ಮೂರು ವಾರದ ಒಳಗಾಗಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್, ಎನ್ಎಂಸಿಗೆ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>